Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗದಗ: ವಿಕಲಚೇತನರ ವಾಹನಗಳಿಗೆ ತುಕ್ಕು;...

ಗದಗ: ವಿಕಲಚೇತನರ ವಾಹನಗಳಿಗೆ ತುಕ್ಕು; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ವಾಹನಕ್ಕಾಗಿ ಕಾದು ಕುಳಿತ ಫಲಾನುಭವಿಗಳು

ವರದಿ: ಫಾರೂಕ್ವರದಿ: ಫಾರೂಕ್6 July 2018 11:56 PM IST
share
ಗದಗ: ವಿಕಲಚೇತನರ ವಾಹನಗಳಿಗೆ ತುಕ್ಕು; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಗದಗ, ಜು.6: ವಿಕಲಚೇತನರ ಅನುಕೂಲಕ್ಕಾಗಿ ಸರಕಾರ ಯಂತ್ರ ಚಾಲಿತ ವಾಹನ ವಿತರಿಸುವ ಯೋಜನೆ ಜಾರಿಗೆ ತಂದಿದೆ. ಆದರೆ ಗದಗದಲ್ಲಿ ವಿಕಲಚೇತನರಿಗೆ ಸೇರಬೇಕಿದ್ದ ವಾಹನ ತುಕ್ಕು ಹಿಡಿಯುತ್ತಿವೆ. ಆರು ತಿಂಗಳಿಂದ ವಿತರಣೆಗೆ ವಾಹನಗಳ ಜೊತೆಗೆ ಫಲಾನುಭವಿಗಳು ಸಹ ಕಾಯುವಂತಾಗಿದೆ. ವಿಕಲಚೇತನರ ಕಲ್ಯಾಣಕ್ಕೆ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸುವುದು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಜನಪ್ರತಿನಿಧಿಗಳ ನಿರ್ಲಕ್ಷದಿಂದ ವಿಕಲಚೇತನರ ಪಾಲಾಗಬೇಕಿದ್ದ ತ್ರಿಚಕ್ರ ವಾಹನಗಳು ತುಕ್ಕು ಹಿಡಿಯುತ್ತಿವೆ.

ಹೌದು. ಗದಗ ನಗರದ ಸಾಹಿತ್ಯ ಭವನದ ಬಯಲು ಜಾಗೆಯಲ್ಲಿ ವಿಕಲಚೇತನ ಇಲಾಖೆಯಿಂದ ವಿತರಿಸಬೇಕಿದ್ದ ಯಂತ್ರ ಚಾಲಿತ ವಾಹನಗಳನ್ನು ಬಯಲಲ್ಲೇ ನಿಲ್ಲಿಸಬೇಕಾಗಿದೆ. 2017-18 ನೇ ಸಾಲಿಗೆ 138 ತ್ರಿಚಕ್ರ ವಾಹನಗಳು ಮಂಜೂರಾಗಿವೆ. ಇದರಲ್ಲಿ ಸದ್ಯ ಇಲಾಖೆಗೆ 60 ವಾಹನಗಳು ಬಂದಿವೆ. ಜನವರಿ ತಿಂಗಳಲ್ಲೇ ವಾಹನಗಳು ಬಂದಿದ್ದರೂ ಈತನಕ ವಿತರಣೆಯಾಗಿಲ್ಲ. ವಾಹನ ನೋಂದಣಿ ಮಾಡಿಸುವಷ್ಟರಲ್ಲಿ ಚುನಾವಣೆ ನೀತೆ ಸಂಹಿತೆ ಜಾರಿಯಾಯಿತು. ಆದ್ದರಿಂದ ಫಲಾನುಭವಿಗಳಿಗೆ ವಾಹನ ವಿತರಿಸಲು ನೀತಿ ಸಂಹಿತೆ ಅಡ್ಡಿಯಾಯಿತು. ಇದೀಗ ಚುನಾವಣೆ ಪ್ರಕ್ರಿಯೆ ಮುಗಿದು, ಸರಕಾರ ರಚನೆಯಾದರೂ ವಾಹನ ವಿತರಣೆಗೆ ಮುಹೂರ್ತ ಕೂಡಿ ಬರದಿರುವುದು ವಿಪರ್ಯಾಸವೇ ಸರಿ.

ಸದ್ಯ 60 ವಾಹನಗಳ ಪೈಕಿ ನರಗುಂದ ಕ್ಷೇತ್ರಕ್ಕೆ ಮಂಜೂರಾದ 18 ತ್ರಿಚಕ್ರ ವಾಹನಗಳನ್ನು ವಿತರಿಸಲಾಗಿದೆ. ಉಳಿದ 42 ವಾಹನಗಳು ಸಾಹಿತ್ಯ ಭವನದ ಅಂಗಳದಲ್ಲೇ ತುಕ್ಕು ಹಿಡಿದು ಬೀಳುವಂತಾಗಿದೆ. ಉಳಿದ ಶಿರಹಟ್ಟಿ, ಗದಗ, ರೋಣ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ವಾಹನ ವಿತರಣೆಯಾಗಿಲ್ಲ. ಇದರಿಂದ ವಾಹನ ನಂಬಿ ಕುಳಿತ ಫಲಾನುಭವಿಗಳ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇನ್ನು ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ತೋರಿ ತಮಗೆ ವಾಹನ ವಿತರಿಸಲು ಆಸಕ್ತಿ ತೋರಬೇಕಿತ್ತು. ಇಲ್ಲವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಾದರೂ ಜನಪ್ರತಿನಿಧಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿಸಿ ವಾಹನ ವಿತರಿಸುವಲ್ಲಿ ಆಸಕ್ತಿ ತೋರಬೇಕಿತ್ತು.

ಆದರೆ ಶಾಸಕರು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ವಿಕಲಚೇತನ ಫಲಾನುಭವಿಗಳ ಪಾಲಾಗಬೇಕಿದ್ದ ಯಂತ್ರಚಾಲಿತ ವಾಹನಗಳು ತುಕ್ಕು ಹಿಡಿಯುವಂತಾಗಿದೆ. ಏನೇ ಆಗಲಿ ಸರಕಾರದ ಯೋಜನೆ ಫಲಾನುಭವಿಗಳಿಗೆ ತಲುಪಿಸಲು ಶಾಸಕರು ಹಾಗೂ ಅಧಿಕಾರಿಗಳೇಕೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಪ್ರಶ್ನೆ ಸಾಮಾನ್ಯರಲ್ಲಿ ಮನೆಮಾಡಿದೆ. ‘ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ’ ಎನ್ನುವ ಸ್ಥಿತಿ ನಿರ್ಮಾಣವಾದಂತಾಗಿದೆ. ಆದಷ್ಟು ಬೇಗ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುವಂತಾಗಲಿ.

ಸ್ಥಳೀಯ ಶಾಸಕರು ದಿನಾಂಕ ನೀಡದಿರುವ ಕಾರಣ ವಾಹನ ವಿತರಣೆಯಲ್ಲಿ ವಿಳಂಬವಾಗಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ನರಗುಂದ ಶಾಸಕರು ಮಾತ್ರ ತ್ರಿಚಕ್ರ ವಾಹನ ವಿತರಿಸಿದ್ದು ಉಳಿದ ಮೂವರು ಶಾಸಕರು ವಿತರಣೆಗೆ ದಿನಾಂಕ ನೀಡಿರಲಿಲ್ಲ. ಅಷ್ಟರಲ್ಲೇ ಚುನಾವಣೆ ನೀತಿ ಸಂಹಿತೆ ಕೂಡ ಜಾರಿಯಾಯಿತು. ಹಾಗಾಗಿ ವಾಹನ ವಿತರಣೆಯಲ್ಲಿ ವಿಳಂಬವಾಗಿದೆ.
-ಆಶಾ ನದಾಫ್, ಜಿಲ್ಲಾ ವಿಕಲಚೇತನರ ಅಧಿಕಾರಿ.

ಇದೀಗ ನೀತಿ ಸಂಹಿತೆ ಮುಗಿದು ಸರಕಾರ ರಚನೆಯಾದರೂ ಶಾಸಕರು ಈ ಬಗ್ಗೆ ನಿರ್ಲಕ್ಷ ತೋರಿದ್ದಾರೆ. ಅಧಿಕಾರಿಗಳಿಗೂ ಈ ವಾಹನಗಳನ್ನು ಕಾಯುವುದೇ ಕಷ್ಟದ ಕೆಲಸವಾಗಿದೆ. ಇಂದು, ನಾಳೆ ಎಂದು ನಾವು ಬಕಪಕ್ಷಿಯಂತೆ ಕಾಯ್ದು ಕಾಯ್ದು ಸುಸ್ತಾಗಿದ್ದೇವೆ.
-ನಾಗರಾಜ, ಫಲಾನುಭವಿ

share
ವರದಿ: ಫಾರೂಕ್
ವರದಿ: ಫಾರೂಕ್
Next Story
X