Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಹೀಂ ಉಚ್ಚಿಲ್ ಗನ್‌ಮ್ಯಾನ್ ಅಮಾನತು:...

ರಹೀಂ ಉಚ್ಚಿಲ್ ಗನ್‌ಮ್ಯಾನ್ ಅಮಾನತು: ಮಂಗಳೂರು ಪೊಲೀಸ್ ಕಮಿಷನರ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 July 2018 11:16 PM IST
share
ರಹೀಂ ಉಚ್ಚಿಲ್ ಗನ್‌ಮ್ಯಾನ್ ಅಮಾನತು: ಮಂಗಳೂರು ಪೊಲೀಸ್ ಕಮಿಷನರ್ ಆದೇಶ

ಮಂಗಳೂರು, ಜು.7: ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಮುಖಂಡ ರಹೀಂ ಉಚ್ಚಿಲ್ ಅವರ ಗನ್‌ಮ್ಯಾನ್ ಮಲ್ಲಿಕಾರ್ಜುನ ಅವರನ್ನು ಅಮಾನತು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಟಿ.ಕೆ. ಸುರೇಶ್ ಆದೇಶ ಹೊರಡಿಸಿದ್ದಾರೆ.

ವಿಐಪಿ ಜತೆ ಫೋಟೊ ಮತ್ತು ಸೆಲ್ಫಿ ತೆಗೆಸಿಕೊಂಡಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ಹಾಗೂ ಮೇಲಾಧಿಕಾರಿಗಳಿಗೆ ತಿಳಿಸದೆ, ರಜೆ ಅರ್ಜಿಯನ್ನೂ ಸಲ್ಲಿಸದೆ ರಜೆಯಲ್ಲಿ ಹೋದ ಆರೋಪದ ಮೇಲೆ ಈ ಕ್ರಮ ಜರಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆಯ ವಿವರ: ರಹೀಂ ಉಚ್ಚಿಲ್ ಕಳೆದ ಜೂ. 23ರಂದು ದುಬೈಗೆ ತೆರಳುವ ಸಂದರ್ಭ ಗನ್‌ಮ್ಯಾನ್ ಜತೆ ನಿಂತು ಫೋಟೊ ತೆಗೆಸಿಕೊಂಡಿದ್ದರು. ಬಳಿಕ ಅದಕ್ಕೆ ಶೀರ್ಷಿಕೆ ಸೇರಿಸಿ, ತಾನು ದುಬೈಗೆ ಹೋಗುವುದಾಗಿ ಫೇಸ್‌ಬುಕ್‌ನಲ್ಲಿ ಬರೆದು ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದರು. ಇದಾದ ಬಳಿಕ ಗನ್‌ಮ್ಯಾನ್ ಸಶಸ್ತ್ರ ಮೀಸಲು ಪಡೆಗೆ ತನ್ನ ಗನ್ ಒಪ್ಪಿಸಿ, ಯಾರಲ್ಲೂ ಹೇಳದೆ ಕೇಳದೆ ತನ್ನ ಊರಿಗೆ ಹೊರಟು ಹೋಗಿದ್ದರು. ರಜೆ ಅರ್ಜಿಯನ್ನು ಕೂಡ ಅವರು ನೀಡಿರಲಿಲ್ಲ ಎಂದು ತಿಳಿದುಬಂದಿದೆ.

ಇದು ಮೇಲಾಧಿಕಾರಿಗಳ ಗಮನಕ್ಕೆ ಬಂದು ಗನ್‌ಮ್ಯಾನ್ ಮಲ್ಲಿಕಾರ್ಜುನ ಅವರನ್ನು ವಿಚಾರಿಸಿದ್ದರು. ಆಗ ತಾನು ರಹೀಂ ಉಚ್ಚಿಲ್ ಜತೆ ಉಡುಪಿಯಲ್ಲಿ ಇರುವುದಾಗಿ ಗನ್‌ಮ್ಯಾನ್ ಹೇಳಿದ್ದರು. ಆದರೆ ವಿದೇಶಕ್ಕೆ ತೆರಳಿದ್ದ ಫೋಟೊವನ್ನು ರಹೀಂ ಉಚ್ಚಿಲ್ ಫೇಸ್‌ಬುಕ್‌ನಲ್ಲಿ ಹಾಕಿದ್ದನ್ನು ಗಮನಿಸಿದ ಪೊಲೀಸರು ಗನ್‌ಮ್ಯಾನ್ ಸುಳ್ಳು ಹೇಳುತ್ತಿದ್ದಾರೆ ಎನ್ನುವುದನ್ನು ಖಚಿತ ಪಡಿಸಿಕೊಂಡಿದ್ದರು.

 ಭದ್ರತಾ ನಿಯಮದ ಪ್ರಕಾರ ಅಂಗರಕ್ಷಕರು ಈ ರೀತಿ ವಿಐಪಿಗಳ ಜತೆ ಫೋಟೊ ತೆಗೆಸಿಕೊಳ್ಳುವಂತಿಲ್ಲ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಈ ಬಗ್ಗೆ ನಗರ ಸಶಸ್ತ್ರ ಮೀಸಲು ಪಡೆಯ ಎಸಿಪಿ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಅಮಾನತು ಆದೇಶ ಹೊರಡಿಸಲಾಗಿದೆ.

ರಹೀಂ ಉಚ್ಚಿಲ್ ಅವರು ಬ್ಯಾರಿ ಅಕಾಡಮಿ ಅಧ್ಯಕ್ಷರಾಗಿದ್ದಾಗ 2012 ಮಾ.15ರಂದು ಅಕಾಡಮಿ ಕಚೇರಿಯಲ್ಲಿಯೇ ಅವರನ್ನು ಕೊಲೆ ಮಾಡಲು ಯತ್ನ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವತಿಯಿಂದ ರಕ್ಷಣೆಗೆ ಗನ್‌ಮ್ಯಾನ್ ಸೌಲಭ್ಯ ಒದಗಿಸಲಾಗಿತ್ತು. ಮಲ್ಲಿಕಾರ್ಜುನ ಗನ್‌ಮ್ಯಾನ್‌ ಆಗಿ ನೇಮಕಗೊಂಡಿದ್ದರು.

ನಿಯಮ ಉಲ್ಲಂಘನೆಗಾಗಿ ಅಮಾನತು ಶಿಕ್ಷೆ

ಗನ್‌ಮ್ಯಾನ್ ವ್ಯವಸ್ಥೆಗೆ ಸಂಬಂಧಿಸಿ ಅದರದೇ ಆದ ನಿಯಮಾವಳಿಗಳಿವೆ. ಅದರಂತೆ ಅವರು ವಿಐಪಿಗಳ ಜತೆ ಫೋಟೊ ತೆಗೆಸಿಕೊಳ್ಳುವಂತಿಲ್ಲ ಮತ್ತು ಅದನ್ನು ಜಾಲತಾಣಗಳಲ್ಲಿ ಹಾಕುವಂತಿಲ್ಲ. ನಿಯಮ ಉಲ್ಲಂಘನೆಯ ಜತೆಗೆ ಮೇಲಾಧಿಕಾರಿಗಳ ಅನುಮತಿ ಪಡೆಯದೆ ರಜೆ ಹಾಕಿರುವ ಕಾರಣ ಅಮಾನತು ಮಾಡಲಾಗಿದೆ. ರಹೀಂ ಉಚ್ಚಿಲ್ ಅವರಿಗೆ ಬೇರೆ ಗನ್‌ಮ್ಯಾನ್ ಒದಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X