Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಹುಕೋಟಿ ವಂಚನೆ ಹಗರಣದ ತನಿಖೆಗೆ...

ಬಹುಕೋಟಿ ವಂಚನೆ ಹಗರಣದ ತನಿಖೆಗೆ ನೆರವಾಗಲು ತಜ್ಞ ಅಧಿಕಾರಿಗಳ ನಿಯೋಜನೆಗೆ ಸಿಬಿಐ ಪ್ರಸ್ತಾ

ವಾರ್ತಾಭಾರತಿವಾರ್ತಾಭಾರತಿ8 July 2018 8:33 PM IST
share
ಬಹುಕೋಟಿ ವಂಚನೆ ಹಗರಣದ ತನಿಖೆಗೆ ನೆರವಾಗಲು ತಜ್ಞ ಅಧಿಕಾರಿಗಳ ನಿಯೋಜನೆಗೆ ಸಿಬಿಐ ಪ್ರಸ್ತಾ

ಹೊಸದಿಲ್ಲಿ, ಜು.8: ಪಿಎನ್‌ಬಿಯ 13,000 ಕೋ.ರೂ.ಗೂ ಹೆಚ್ಚಿನ ಮೊತ್ತದ ಹಗರಣ ಸೇರಿದಂತೆ ಇತರ ಆರ್ಥಿಕ ವಂಚನೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಇತರ ಸಚಿವಾಲಯಗಳಿಂದ ಬ್ಯಾಂಕಿಂಗ್ ಮತ್ತು ತೆರಿಗೆ ತಜ್ಞರನ್ನು ನಿಯೋಜನೆಗೊಳಿಸಲು ನಿರ್ಧರಿಸಿದ್ದು, ಉತ್ತಮ ಆರ್ಥಿಕ ಪ್ರೋತ್ಸಾಹ ನೀಡುವುದಾಗಿ ತಿಳಿಸಿದೆ.

ಸಲಹೆಗಾರ(ಬ್ಯಾಂಕಿಂಗ್), ಹಿರಿಯ ಸಲಹೆಗಾರ (ವಿದೇಶ ವ್ಯವಹಾರ ಅಥವಾ ವಿದೇಶಿ ವಿನಿಮಯ), ಸಹಾಯಕ ಸಲಹೆಗಾರ(ವಿದೇಶ ವ್ಯವಹಾರ ಅಥವಾ ವಿದೇಶಿ ವಿನಿಮಯ) ಹಾಗೂ ಹಿರಿಯ ಸಲಹೆಗಾರ (ತೆರಿಗೆ)- ಈ ಹುದ್ದೆಗಳಿಗೆ ನಿಯೋಜನೆ ಮೇರೆಗೆ ಅಧಿಕಾರಿಗಳನ್ನು ನಿಯೋಜಿಸುವಂತೆ ಸಿಬಿಐ ಹಲವು ಇಲಾಖೆಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿದೆ. ಆಯ್ಕೆಯಾದವರು ಆರಂಭದಲ್ಲಿ ಸಿಬಿಐಯಲ್ಲಿ ಕಿರು ಅವಧಿಗೆ ಒಪ್ಪಂದದ ಆಧಾರದಲ್ಲಿ ಕಾರ್ಯ ನಿರ್ವಹಿಸಬೇಕು. ಬ್ಯಾಂಕಿಂಗ್, ವಿದೇಶ ವ್ಯವಹಾರ ಮತ್ತು ವಿದೇಶಿ ವಿನಿಮಯ, ತೆರಿಗೆ ಪದ್ದತಿ ಒಳಗೊಂಡ ಪ್ರಕರಣಗಳ ತನಿಖೆ ಕಾರ್ಯದಲ್ಲಿ ತಾಂತ್ರಿಕ ನೆರವು ನೀಡುವುದು, ಇತರ ತಾಂತ್ರಿಕ ಅಧಿಕಾರಿಗಳ ಕಾರ್ಯದ ಮೇಲ್ವಿಚಾರಣೆ ನಡೆಸುವುದು ಮುಂತಾದ ಕಾರ್ಯವನ್ನು ಇವರು ನಿರ್ವಹಿಸುತ್ತಾರೆ. ಸಿಬಿಐಗೆ ನಿಯೋಜನೆ ಮೇರೆಗೆ ಆಗಮಿಸುವ ಅಧಿಕಾರಿಗಳು ಪಡೆಯುತ್ತಿರುವ ಸಂಬಳದ ಶೇ.20ರಷ್ಟು ಮೊತ್ತವನ್ನು ವಿಶೇಷ ಭದ್ರತಾ ಭತ್ತೆಯಾಗಿ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸಿದವರು ಬಳಿಕ ಹಿಂಪಡೆಯಲು ಅವಕಾಶವಿಲ್ಲ ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

 ಸಿಬಿಐ ಕೆಲ ದಿನಗಳ ಹಿಂದೆ ಐಡಿಬಿಐ ಬ್ಯಾಂಕ್‌ನಲ್ಲಿ ನಡೆದಿರುವ 600 ಕೋಟಿ ರೂ. ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕ್‌ನ ಮಾಜಿ ಸಿಎಂಡಿ (ಏರ್‌ಸೆಲ್‌ನ ಮಾಜಿ ಪ್ರವರ್ತಕ) ಸಿ.ಶಿವಶಂಕರನ್, ಅವರ ಪುತ್ರ ಹಾಗೂ ಅವರ ನಿಯಂತ್ರಣದಲ್ಲಿರುವ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ ಎನ್ನಲಾಗಿರುವ 2,654 ಕೋಟಿ ರೂ. ಮೊತ್ತದ ವಂಚನೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಬ್ಯಾಂಕಿನ ಇಬ್ಬರು ನಿವೃತ್ತ ಹಿರಿಯ ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ಅಲ್ಲದೆ ಆರ್ಥಿಕ ವಂಚನೆ ಆರೋಪದಲ್ಲಿ ಆರ್‌ಬಿಐಯ ಹಲವು ಮಾಜಿ ಅಧಿಕಾರಿಗಳ ಮೇಲೂ ಸಿಬಿಐ ನಿಗಾ ಇರಿಸಿದೆ. 2017ರಲ್ಲಿ ಸಿಬಿಐ 939 ನಿಯಮಿತ ಪ್ರಕರಣ ಹಾಗೂ 137 ಪ್ರಾಥಮಿಕ ತನಿಖೆಗಳನ್ನು ದಾಖಲಿಸಿದ್ದು ವರ್ಷಾಂತ್ಯದಲ್ಲಿ ಸುಮಾರು 9,383 ಪ್ರಕರಣಗಳು ವಿಚಾರಣೆಗೆ ಬಾಕಿಯುಳಿದಿದೆ. ಆರ್ಥಿಕ ತಜ್ಞರನ್ನು ನೇಮಕ ಮಾಡಿಕೊಳ್ಳುವುದರಿಂದ ಆರ್ಥಿಕ ವಂಚನೆ ಪ್ರಕರಣಗಳ ತನಿಖೆ ತ್ವರಿತ ಗತಿಯಲ್ಲಿ ಸಾಗಲಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X