Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿಯಲ್ಲಿ ನೂತನ ಆದೇಶ: ಸೈನಿಕರು,...

ಟರ್ಕಿಯಲ್ಲಿ ನೂತನ ಆದೇಶ: ಸೈನಿಕರು, ಪೊಲೀಸರು ಸೇರಿ 18,500 ಉದ್ಯೋಗಿಗಳ ಉಚ್ಛಾಟನೆ

ವಾರ್ತಾಭಾರತಿವಾರ್ತಾಭಾರತಿ8 July 2018 9:08 PM IST
share
ಟರ್ಕಿಯಲ್ಲಿ ನೂತನ ಆದೇಶ: ಸೈನಿಕರು, ಪೊಲೀಸರು ಸೇರಿ 18,500 ಉದ್ಯೋಗಿಗಳ ಉಚ್ಛಾಟನೆ

ಅಂಕಾರಾ, ಜು.8: ಟರ್ಕಿ ಸರಕಾರವು ರವಿವಾರದಂದು ನೂತನ ಆದೇಶದನ್ವಯ ಸೈನಿಕರು, ಪೊಲೀಸರು ಸೇರಿದಂತೆ 18,500ಕ್ಕೂ ಅಧಿಕ ಉದ್ಯೋಗಿಗಳನ್ನು ಹುದ್ದೆಯಿಂದ ವಜಾಗೊಳಿಸಿದೆ. ಸರಕಾರ ಹೊರಡಿಸಿರುವ ಈ ತುರ್ತು ಆದೇಶದಲ್ಲಿ ರಾಷ್ಟ್ರೀಯ ಭದ್ರತೆಯ ವಿರುದ್ಧ ಕಾರ್ಯಾಚರಿಸುವ ಉಗ್ರ ಸಂಘಟನೆಗಳು ಮತ್ತು ಗುಂಪುಗಳ ಜೊತೆ ಸಂಪರ್ಕ ಹೊಂದಿರುವ ಅನುಮಾನದಲ್ಲಿ 18,632 ಜನರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕೃತ ಗೆಜೆಟ್ ತಿಳಿಸಿದೆ.

ವಜಾಗೊಂಡವರ ಪೈಕಿ 8,998 ಪೊಲೀಸ್ ಅಧಿಕಾರಿಗಳು, 3,077 ಸೈನಿಕರು, 1,949 ವಾಯುಪಡೆ ಸಿಬ್ಬಂದಿ ಹಾಗೂ 1,126 ನೌಕಾಪಡೆಯ ಸಿಬ್ಬಂದಿ ಸೇರಿದ್ದಾರೆ. ಕಾನೂನು ಸಚಿವಾಲಯದ ಹಾಗೂ ಸಂಬಂಧಿತ ಸಂಸ್ಥೆಗಳ 1,052 ಪೌರ ಸೇವಕರು, ತಟರಕ್ಷಣಾ ಪಡೆಯ 192 ಹಾಗೂ ಪೊಲೀಸ್ ಅಪರಾಧ ಪಡೆಯ ಉನ್ನತ ವಿಭಾಗದ 649 ಸಿಬ್ಬಂದಿಯನ್ನೂ ಈ ಆದೇಶದನ್ವಯ ವಜಾಗೊಳಿಸಲಾಗಿದೆ. ಜೊತೆಗೆ 199 ಶಿಕ್ಷಣ ತಜ್ಞರನ್ನು ವಜಾಗೊಳಿಸಲಾಗಿದೆ.

2016ರ ಜುಲೈಯಲ್ಲಿ ಅಧ್ಯಕ್ಷ ರಿಸೆಪ್ ತಯ್ಯಿಬ್ ಎರ್ದೊಗಾನ್ ಅವರನ್ನು ಪದಚ್ಯುತಿಗೊಳಿಸುವ ಪ್ರಯತ್ನದ ನಂತರ ಟರ್ಕಿಯಲ್ಲಿ ತುರ್ತುಸ್ಥಿತಿಯನ್ನು ಘೋಷಿಸಲಾಗಿದೆ. ಮಾಧ್ಯಮಗಳು ಈ ನೂತನ ಆದೇಶವನ್ನು ಅಂತಿಮ ಎಂದು ಘೋಷಿಸಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಶೀಘ್ರದಲ್ಲೇ ಕೊನೆಯಾಗಬಹುದು ಎಂದು ಅಭಿಪ್ರಾಯಪಟ್ಟಿವೆ. ಜುಲೈ 2016ರಿಂದೀಚೆಗೆ ಹೊರಡಿಸಲಾಗಿರುವ ತುರ್ತು ಆದೇಶಗಳಲ್ಲಿ ಈವರೆಗೆ 1,10,000 ಸರಕಾರಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಹಾಗೂ ಸಾವಿರಾರು ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ. ಟರ್ಕಿಯ ಈ ಕ್ರಮವನ್ನು ಇತರ ಪಶ್ಚಿಮಾತ್ಯ ಮಿತ್ರ ರಾಷ್ಟ್ರಗಳು ಟೀಕಿಸಿವೆ.

ಅಧ್ಯಕ್ಷರ ವಿರುದ್ಧದ ಕಾರ್ಯಾಚರಣೆಯ ಹಿಂದೆ ಯುಎಸ್ ಮೂಲದ ಮುಸ್ಲಿಂ ಪ್ರವರ್ತಕ ಫೆತುಲ್ಲಾಹ್ ಗುಲೆನ್ ಕೈವಾಡವಿದೆ ಎಂದು ಟರ್ಕಿ ಆರೋಪಿಸಿದೆ. ತುರ್ತುಸ್ಥಿತಿಯ ಆದೇಶಗಳಲ್ಲಿ ವಜಾಗೊಳಿಸಲಾಗಿರುವ ಜನರ ಪೈಕಿ ಬಹುತೇಕರು ಗುಲೆನ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಟರ್ಕಿ ಅನುಮಾನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X