Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟ್ ಬ್ಯಾನ್ ಬಳಿಕ ಹೊಸ ನೋಟುಗಳ ಸಾಗಣೆಗೆ...

ನೋಟ್ ಬ್ಯಾನ್ ಬಳಿಕ ಹೊಸ ನೋಟುಗಳ ಸಾಗಣೆಗೆ 29 ಕೋ.ರೂ. ವೆಚ್ಚ: ಆರ್‌ಟಿಐ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ8 July 2018 11:04 PM IST
share
ನೋಟ್ ಬ್ಯಾನ್ ಬಳಿಕ ಹೊಸ ನೋಟುಗಳ ಸಾಗಣೆಗೆ 29 ಕೋ.ರೂ. ವೆಚ್ಚ: ಆರ್‌ಟಿಐ ಮಾಹಿತಿ

ಹೊಸದಿಲ್ಲಿ, ಜು.8: ನೋಟು ಅಮಾನ್ಯಗೊಳಿಸಿದ ಬಳಿಕ ಹೊಸದಾಗಿ ಮುದ್ರಿಸಿದ ಕರೆನ್ಸಿ ನೋಟುಗಳನ್ನು ಸಾಗಿಸಲು ವಾಯುಪಡೆಯ ಅತ್ಯಾಧುನಿಕ ಸಾರಿಗೆ ವಿಮಾನ ಸಿ-17 ಮತ್ತು ಸಿ-130 ಜೆ ಸೂಪರ್ ಹರ್ಕ್ಯುಲಿಸ್‌ಗಳನ್ನು ಬಳಸಲಾಗಿದ್ದು ಇದಕ್ಕೆ 29.41 ಕೋಟಿ ರೂ.ವೆಚ್ಚವಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಉತ್ತರದಲ್ಲಿ ತಿಳಿಸಲಾಗಿದೆ.

500 ಮತ್ತು 1,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿರುವುದಾಗಿ 2016ರ ನವೆಂಬರ್ 8ರಂದು ಪ್ರಧಾನಿ ಮೋದಿ ಘೋಷಿಸಿದ್ದರು. ಇದರಿಂದ ಚಲಾವಣೆಯಲ್ಲಿದ್ದ ಶೇ.86ರಷ್ಟು ಕರೆನ್ಸಿಗಳು ಅಮಾನ್ಯಗೊಂಡಿತ್ತು. ತಕ್ಷಣ 2,000 ರೂ. ಮತ್ತು ಹೊಸ 500 ರೂ.ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಬೇಕಿದ್ದು ಸೆಕ್ಯುರಿಟಿ ಪ್ರಿಂಟಿಂಗ್ ಆ್ಯಂಡ್ ಮಿಂಟಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪೈ.ಲಿ. ಸಂಸ್ಥೆಯಲ್ಲಿ ಹೊಸದಾಗಿ ಮುದ್ರಿಸಲಾಗುವ ಕರೆನ್ಸಿ ನೋಟುಗಳನ್ನು ಬ್ಯಾಂಕ್‌ಗಳಿಗೆ ರವಾನಿಸಲು ವಾಯುಪಡೆಯ ವಿಮಾನವನ್ನು ಬಳಸಲಾಗಿತ್ತು.

ಪ್ರಿಂಟಿಂಗ್ ಪ್ರೆಸ್‌ಗಳಿಂದ ದೇಶದ ವಿವಿಧೆಡೆ ನೋಟುಗಳ ಬಂಡಲ್‌ಗಳನ್ನು ತಲುಪಿಸಲು ವಿಮಾನ 91 ಬಾರಿ ಹಾರಾಟ ನಡೆಸಿದೆ. ಇದಕ್ಕೆ ಒಟ್ಟು 29.41 ಕೋಟಿ ರೂ. ವೆಚ್ಚವಾಗಿದ್ದು, ಇದರ ಬಿಲ್ ಅನ್ನು ಸರಕಾರದ ಅಧೀನದಲ್ಲಿರುವ ಸೆಕ್ಯುರಿಟಿ ಪ್ರಿಂಟಿಂಗ್ ಆ್ಯಂಡ್ ಮಿಂಟಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪೈ.ಲಿ. ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಐಎಎಫ್ ತಿಳಿಸಿದೆ.

 ನೌಕಾಸೇನೆಯ ನಿವೃತ್ತ ಅಧಿಕಾರಿ ಕ ಲೋಕೇಶ್ ಭಾತ್ರಾ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ವಾಯುಪಡೆ ನೀಡಿದ ಉತ್ತರದಲ್ಲಿ ಈ ಮಾಹಿತಿಯಿದೆ. ರಕ್ಷಣಾ ಪಡೆಯ ವಿಮಾನಗಳನ್ನು ಬಳಸುವ ಬದಲು ನಾಗರಿಕ ಸಾರಿಗೆ ವಿಮಾನಗಳನ್ನು ಬಳಸಿದ್ದರೆ ವೆಚ್ಚ ಕಡಿಮೆಯಾಗುತ್ತಿತ್ತು ಎಂದು ಭಾತ್ರಾ ತಿಳಿಸಿದ್ದಾರೆ. ನೋಟು ರದ್ದತಿಯ ಘೋಷಣೆ ಮಾಡುವ ಮೊದಲು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದರೆ ನೋಟು ಅಭಾವದ ಪರಿಸ್ಥಿತಿ ಹಾಗೂ ದುಬಾರಿ ವೆಚ್ಚದಲ್ಲಿ ನೋಟುಗಳನ್ನು ಸಾಗಿಸುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X