Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳದಲ್ಲಿ ಸೇತುವೆ ಸಹಿತ ಉಪ್ಪು ನೀರು...

ಹರೇಕಳದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಪುಟ್ಟರಾಜು

ವಾರ್ತಾಭಾರತಿವಾರ್ತಾಭಾರತಿ9 July 2018 7:08 PM IST
share

ಮಂಗಳೂರು, ಜು.9: ಪಶ್ಚಿಮವಾಹಿನಿ ಯೋಜನೆಯಡಿ ಮಂಗಳೂರು ತಾಲೂಕಿನ ಹರೇಕಳದಲ್ಲಿ ನೇತ್ರಾವತಿ ಸೇತುವೆ ಸಹಿತ ಉಪ್ಪುನೀರು ತಡೆ ಕಿಂಡಿ ಅಣೆಕಟ್ಟು ಕಾಮಗಾರಿಯನ್ನು 174 ಕೋ. ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ. ಅದಕ್ಕಾಗಿ ಟೆಂಡರ್ ಕರೆದು ಕಾಮಗಾರಿ ನಿರ್ವಹಿಸಲು ಗುತ್ತಿಗೆ ನೀಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ.

ಪಶ್ಚಿಮ ವಾಹಿನಿ ಯೋಜನೆ ಯಾವಾಗ ಪೂರ್ಣಗೊಳ್ಳಲಿದೆ ? ಯೋಜನೆಗೆ ಮೀಸಲಿಟ್ಟ ಅನುದಾನ ಎಷ್ಟು? ಎಂಬ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ಪ್ರಶ್ನೆಗೆ ಸಚಿವರು ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಉತ್ತರಿಸಿದರು.

ಪಶ್ಚಿಮವಾಹಿನಿ ಯೋಜನೆಗೆ 2017-18ನೇ ಸಾಲಿನ ಆಯವ್ಯಯದಲ್ಲಿ 100 ಕೋ.ರೂ. ಅನುದಾನ ನಿಗದಿಪಡಿಸಲಾಗಿದೆ. ದ.ಕ. ಮತ್ತು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 53 ಕಿಂಡಿ ಅಣೆಕಟ್ಟು ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಅದರಲ್ಲಿ ದ.ಕ. ಜಿಲ್ಲೆಯ 11, ಉಡುಪಿ ಜಿಲ್ಲೆಯ 14, ಉತ್ತರ ಕನ್ನಡ ಜಿಲ್ಲೆಯ 29 ಕಾಮಗಾರಿಗಳು ಅನುಮೋದನೆಗೊಂಡಿದೆ. ಈ ಕಾಮಗಾರಿಯ ಗುತ್ತಿಗೆ ನೀಡಲು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಸಚಿವ ಪಿ.ಎಸ್.ಪುಟ್ಟರಾಜು ಹೇಳಿದರು.

ಮಂಗಳೂರು ವಿಭಾಗದ ವತಿಯಿಂದ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್ ಪ್ರದೇಶದಿಂದ ಉಡುಪಿ ಮಾರ್ಗವಾಗಿ ಮಣಿಪಾಲಕ್ಕೆ ಹಾಗೂ ಅದೇ ಮಾರ್ಗವಾಗಿ ಹಿಂದಕ್ಕೆ ಪ್ರಸ್ತುತ 10 ಹವಾನಿಯಂತ್ರಿತ ವೋಲ್ವೋ ಬಸ್ಸುಗಳನ್ನು ಕಾರ್ಯಚರಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ತಮ್ಮಣ್ಣ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಂಗಳೂರು, ಉಡುಪಿ ಮಣಿಪಾಲ, ಕುಂದಾಪುರಗಳಲ್ಲಿ ಕಾರ್ಯನಿರ್ವಸುತ್ತಿರುವ ಹವಾ ನಿಯಂತ್ರಿತ ಬಸ್‌ಗಳ ಆದಾಯ ಲಾಭಕರವಾಗಿದೆಯೇ? ಎಷ್ಟು ಬಸ್ ಪ್ರಾರಂಭಿಸಲಾಗಿದೆ? ಪ್ರಸ್ತುತ ಎಷ್ಟು ಬಸ್ಸು ಕಾರ್ಯನಿರ್ವಹಿಸುತ್ತಿದೆ ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಮಂಗಳೂರು-ಉಡುಪಿ-ಕುಂದಾಪುರ-ಭಟ್ಕಳ ಮಾರ್ಗದಲ್ಲಿ 8 ಹವಾನಿಯಂತ್ರಿತ ವೋಲ್ವೋ ಬಸ್‌ಗಳಿಂದ 24 ಸಿಂಗಲ್ ಟ್ರಿಪ್‌ಗಳ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಮಂಗಳೂರು-ಬೆಂಗಳೂರು- ಉಡುಪಿ-ಮಣಿಪಾಲ ಮಾರ್ಗದಲ್ಲಿ ಪ್ರಸ್ತುತ 4 ಮಲ್ಟಿ ಅಕ್ಸೆಲ್ ವೋಲ್ವೋ (ಹವಾನಿಯಂತ್ರಿತ) ಬಸ್‌ಗಳನ್ನು ಕಾರ್ಯಾಚರಿಸಲಾಗುತ್ತಿದೆ.ಅವುಗಳಿಂದ 4 ಸಿಂಗಲ್ ಟ್ರಿಪ್‌ಗಳ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಸಚಿವ ತಮ್ಮಣ್ಣ ಹೇಳಿದರು.

ಮಂಗಳೂರು ನಗರದಲ್ಲಿ ನರ್ಮ್ ಯೋಜನೆಯನ್ವಯ 35 ಬಸ್‌ಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿತ್ತು. ಈ ಎಲ್ಲಾ 35 ವಾಹನಗಳಿಗೆ ಪರವಾನಗಿ ಮಂಜೂರಾತಿಯಾಗಿದೆ. ಮಂಗಳೂರಿನಲ್ಲಿ ನಿಗಮದ ಬಸ್ ನಿಲ್ದಾಣವನ್ನು 400ಎಕರೆ ಪ್ರದೇಶದಲ್ಲಿ ನಿರ್ಮಿಸಿ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 74ರ ಪ್ರಕಾರ 2003ನೇ ಸಾಲಿನಿಂದ ಇಂದಿನವರೆಗೆ ರಾಜ್ಯಾದ್ಯಂತ ಸಂಚರಿಸಲು 3,099 ವಾಹನಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ ರಹದಾರಿಗಳನ್ನು ನೀಡಲಾಗಿದೆ ಎಂದು ಸಚಿವ ತಮ್ಮಣ್ಣ ಸ್ಪಷ್ಟಪಡಿಸಿದರು.

2017-18ನೇ ಸಾಲಿನಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ 963 ಗ್ರಾಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ 2016-17 ಮತ್ತು 2017-18ರಲ್ಲಿ ಎಷ್ಟು ಗ್ರಾಮ ವಿಕಾಸ ಯೋಜನೆಯನ್ನು ಮಂಜೂರು ಮಾಡಲಾಗಿದೆ ? ಈ ಯೋಜನೆಯ ಮಂಜೂರಾತಿಗೆ ಯಾವ ಮಾನದಂಡ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X