Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರಕ್ಕೆ ಬರಲ್ಲವೆಂದು ಜನತೆಗೆ ಸುಳ್ಳು...

ಅಧಿಕಾರಕ್ಕೆ ಬರಲ್ಲವೆಂದು ಜನತೆಗೆ ಸುಳ್ಳು ಭರವಸೆ ನೀಡಿದ ಜೆಡಿಎಸ್: ಯಡಿಯೂರಪ್ಪ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ9 July 2018 9:11 PM IST
share
ಅಧಿಕಾರಕ್ಕೆ ಬರಲ್ಲವೆಂದು ಜನತೆಗೆ ಸುಳ್ಳು ಭರವಸೆ ನೀಡಿದ ಜೆಡಿಎಸ್: ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು, ಜು.9: ನಿಮಗೆ ಪೂರ್ಣ ಪ್ರಮಾಣದಲ್ಲಿ ಬಹುಮತ ಬರಲ್ಲ ಎಂದು ನಿಮಗೆ ಗೊತ್ತಿತ್ತು. ಆದುದರಿಂದಲೆ, ಚುನಾವಣಾ ಪ್ರಣಾಳಿಕೆಯಲ್ಲಿ ರೈತರ 53 ಸಾವಿರ ಕೋಟಿ ರೂ.ಸಾಲ ಮನ್ನಾ ಸೇರಿದಂತೆ ಇನ್ನಿತರ ಸುಳ್ಳು ಭರವಸೆಗಳನ್ನು ನೀಡಿ, ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದ್ದೀರ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಸೋಮವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೇಕಾರರು, ಸ್ತ್ರಿಶಕ್ತಿ ಸಂಘಗಳ ಸಾಲ ಮನ್ನಾ, ಗರ್ಭಿಣಿ ಮಹಿಳೆಯರಿಗೆ ಮಾಸಿಕ 6 ಸಾವಿರ ರೂ., ಹಿರಿಯ ನಾಗರಿಕರಿಗೆ 6 ಸಾವಿರ ರೂ.ಮಾಸಾಶನ, ಒಂದು ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ಅನೇಕ ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ದ್ರೋಹ ಮಾಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ನಮಗೆ ಸ್ಪಷ್ಟ ಬಹುಮತ ನೀಡಿ ಎಂದು ನಾವು ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ಕೊಟ್ಟಿದ್ದು ನಿಜ. ಆದರೆ, ನಮಗೆ ಅದ್ಯಾವುದು ಬೇಡ ಎಂದು ಜನ ನಮಗೆ ಮತ ಹಾಕಿಲ್ಲ. ಆದರೂ, ಮಾನವೀಯತೆ ದೃಷ್ಟಿಯಿಂದ ಈ ಭರವಸೆಗಳನ್ನು ಈಡೇರಿಸುತ್ತಿದ್ದೇವೆ ಎಂದರು.

ನಂತರ ತಮ್ಮ ಮಾತು ಮುಂದುವರೆಸಿದ ಯಡಿಯೂರಪ್ಪ, ಇದು ಎರಡು ಮೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವ ಈ ಬಜೆಟ್‌ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಕಾಣುತ್ತಿಲ್ಲ. ಸಾಂದರ್ಭಿಕ ಶಿಶುಗೆ ಜನಿಸಿದ ಈ ಬಜೆಟ್ ‘ಅನಾಥ ಶಿಶು’. ಬಂಡವಾಳವಿಲ್ಲದ ಬಡಾಯಿ. ಕೋತಿ ತಾನು ಮೊಸರು ತಿಂದು ಮೇಕೆ ಬಾಯಿಗೆ ಒರೆಸುವ ಪಿತೂರಿಯನ್ನು ಜನ ಅರ್ಥ ಮಾಡಿಕೊಂಡಿದ್ದಾರೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠವನ್ನು ಕಲಿಸುತ್ತಾರೆ. ಕೊಟ್ಟ ಮಾತಿನಂತೆ ನಡೆಯುವುದು ನಾಯಕನಾದವನ ಧರ್ಮ. ಮಾತು ಕೊಟ್ಟೂ ಮಾತು ತಪ್ಪುವುದು ಖಳನಾಯಕನ ಲಕ್ಷಣ. ನಿಮ್ಮ ವಚನ ಭ್ರಷ್ಟತೆ, ಕೊಟ್ಟ ಮಾತನ್ನು ಉಳಿಸಿಕೊಳ್ಳದಿರುವ ನಡೆಯು ಎಲ್ಲರಿಗೂ ಗೊತ್ತಿದೆ ಎಂದು ಅವರು ಟೀಕಿಸಿದರು.

ರೈತರ ಅಲ್ಪಾವಧಿ ಸಾಲ ಇರುವುದು 1.95 ಲಕ್ಷ ಕೋಟಿ ರೂ. ಯಾವ ಆಧಾರದ ಮೇಲೆ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೀರಾ. ರಾಜ್ಯದಲ್ಲಿ ಸುಸ್ತಿದಾರರು ಇರೋದೆ ಬಹಳ ಕಡಿಮೆ ಸಂಖ್ಯೆಯಲ್ಲಿ. ಸಹಕಾರ ಸಂಘಗಳಲ್ಲಿ ಸುಸ್ತಿ ಸಾಲ ಇರುವುದು 561 ಕೋಟಿ ರೂ. ಹಾಗೂ ಚಾಲ್ತಿ ಸಾಲ 10,734 ಕೋಟಿ ರೂ. ಹಾಗಾಗಿ ಚಾಲ್ತಿ ಸಾಲ ಮನ್ನಾ ಮಾಡಿದರೆ ಮಾತ್ರ ರೈತರಿಗೆ ಅನುಕೂಲವಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಸಾಲ ಮರುಪಾವತಿ ಮಾಡಿದವರಿಗೆ 25 ಸಾವಿರ ರೂ.ಪ್ರೋತ್ಸಾಹ ಧನ ಸರಕಾರ ಕೊಡುವುದಾಗಿ ಹೇಳಿದ್ದೀರಿ. 2 ಲಕ್ಷ ರೂ.ಸಾಲ ಮರುಪಾವತಿ ಮಾಡಿದ ರೈತರ ಪ್ರಾಮಾಣಿಕತೆಗೆ ಕೇವಲ 25 ಸಾವಿರ ರೂ. ಬೆಲೆ ಕಟ್ಟಲಾಗುತ್ತಿದೆ. ಅಲ್ಲದೆ, ಹಿಂದಿನ ಸರಕಾರದಲ್ಲಿ 50 ಸಾವಿರ ರೂ.ವರೆಗಿನ ಸಾಲ ಮನ್ನಾದ ಪ್ರಯೋಜನ ಪಡೆದವರಿಗೆ ಇದರಿಂದ ಯಾವುದೆ ಉಪಯೋಗವಾಗುವುದಿಲ್ಲ ಎಂದು ಅವರು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಪ್ರಮಾಣ ಕಡಿತ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕೇವಲ 17.10 ಲಕ್ಷ ರೈತರಿಗೆ ಮಾತ್ರ ಈ ಸಾಲ ಮನ್ನಾ ಯೋಜನೆಯಿಂದ ಪ್ರಯೋಜನವಾಗುತ್ತದೆ. ಇದು ಒಟ್ಟಾರೆ ರೈತರ ಶೇ.32.50ರಷ್ಟು ಮಾತ್ರ. 34 ಸಾವಿರ ಕೋಟಿ ರೂ.ಗಳನ್ನು ಯಾವ ರೀತಿಯಲ್ಲಿ ಒದಗಿಸುತ್ತೀರಾ ಎಂಬುದು ಸ್ಪಷ್ಟಪಡಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

ಪೆಟ್ರೋಲ್, ಡಿಸೇಲ್, ವಿದ್ಯುತ್, ಮದ್ಯದ ಮೇಲಿನ ದರವನ್ನು ಹೆಚ್ಚಳ ಮಾಡುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ. ಹಾಗಾದರೆ, ಇದರಿಂದ ರಾಜ್ಯದ ಬೊಕ್ಕಸಕ್ಕೆ ಎಷ್ಟು ಆದಾಯ ಬರುತ್ತದೆ. 28 ಸಾವಿರ ಶಾಲೆಗಳನ್ನು ಮುಚ್ಚಲು ಹೊರಟಿರುವುದೇಕೇ? ಇದಕ್ಕೆಲ್ಲ ಮುಖ್ಯಮಂತ್ರಿ ತಮ್ಮ ಉತ್ತರದಲ್ಲಿ ತಿಳಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X