Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದೋಕ್ಲಾಂ ಕರ್ಮಕಾಂಡದ ಕುರಿತಂತೆ....

ದೋಕ್ಲಾಂ ಕರ್ಮಕಾಂಡದ ಕುರಿತಂತೆ....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ10 July 2018 12:01 AM IST
share
ದೋಕ್ಲಾಂ ಕರ್ಮಕಾಂಡದ ಕುರಿತಂತೆ....

ಚೀನಾ-ಭಾರತದ ನಡುವಿನ ಗಡಿ ಬಿಕ್ಕಟ್ಟು ಇಂದು ನಿನ್ನೆಯದಲ್ಲ. ಭಾರತದ ಪಾಲಿಗೆ ಇದು ಒಣಗದ ಗಾಯ. 60ರ ದಶಕದ ಚೀನಾದ ಜೊತೆಗಿನ ಸಂಘರ್ಷದ ಬಳಿಕ ಈ ಗಾಯ ಒಣಗಿದೆ ಎಂದು ಭಾವಿಸುತ್ತಾ ಬಂದರೂ, ಅದು ಅರುಣಾಚಲ ಪ್ರದೇಶ ಸೇರಿದಂತೆ ಬೇರೆ ಬೇರೆ ಗಡಿಭಾಗಗಳಲ್ಲಿ ಮತ್ತೆ ಮತ್ತೆ ಉಲ್ಬಣಿಸಿದೆ. ನರೇಂದ್ರ ಮೋದಿ ಅಧಿಕಾರ ಹಿಡಿದ ಸಂದರ್ಭದಲ್ಲಿ ದೇಶದ ಗಡಿ ತಂಟೆಗಳಿಗೆ ಕಡಿವಾಣ ಬೀಳಬಹುದು ಎಂದು ಭಾವಿಸಿದರೆ, ಚೀನಾ-ಭಾರತ ಸಂಬಂಧ ಹಿಂದೆಂದಿಗಿಂತ ತೀವ್ರವಾಗಿ ಹಳಸಿದೆ. ದೋಕ್ಲಾಂ ಗಡಿ ವಿವಾದ ಇತ್ತೀಚಿನ ದಿನಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ದೋಕ್ಲಾಂ ಗಡಿವಿವಾದ ಹಿನ್ನೆಲೆಯನ್ನು ವಿವರಿಸುವ ಪ್ರಯತ್ನವನ್ನು ಯಡೂರ ಮಹಾಬಲ ಅವರು ‘ದೋಕ್ಲಾಂ ಕರ್ಮಕಾಂಡ’ ಕೃತಿಯ ಮೂಲಕ ಮಾಡಿದ್ದಾರೆ. ದೋಕ್ಲಾಂ ಗಡಿವಿವಾದವನ್ನು ಇತ್ತೀಚಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ವಿಶ್ಲೇಷಣೆ ಮಾಡುವವರು ಹೆಚ್ಚಿದ್ದಾರೆ. ಈ ಗಡಿವಿವಾದಕ್ಕೆ ಒಂದು ಶತಮಾನದ ಇತಿಹಾಸವಿದೆ ಎನ್ನುವುದರ ಕಡೆಗೆ ಲೇಖಕರು ಗಮನ ಸೆಳೆಯುತ್ತಾರೆ. ಚೀನಾ-ಭಾರತ ಗಡಿ ವಿವಾದಗಳನ್ನು ಪರಿಹರಿಸಲು ಸ್ಪಷ್ಟ ದಾರಿ ಇದ್ದರೂ ಅದು ಹೇಗೆ ಸ್ವಪ್ರತಿಷ್ಠೆಯ ಕಾರಣದಿಂದ ಮೂಲೆಗುಂಪಾಯಿತು ಮತ್ತು ಅದಕ್ಕಾಗಿ ಭಾರತ ತೆತ್ತ ಬೆಲೆಯೇನು ಎನ್ನುವುದನ್ನು ಈ ಕೃತಿ ವಿವರಿಸುತ್ತದೆ. ಈ ಗಡಿವಿವಾದದ ಜೊತೆಗೆ ಭೂತಾನ್ ಎನ್ನುವ ಪುಟ್ಟ ದೇಶ ಹೇಗೆ ತಳಕು ಹಾಕಿಕೊಂಡಿದೆ ಎನ್ನುವುದೂ ಕುತೂಹಲಕರವಾಗಿದೆ. ಭೂತಾನ್ ವಿಷಯದಲ್ಲಿ ಚೀನಾ ಮತ್ತು ಭಾರತದ ನಡುವೆ ಪೈಪೋಟಿಯಿದೆ. ಭೂತಾನ್-ಭಾರತದ ನಡುವೆ ಕೊಡುಕೊಳ್ಳುವಿಕೆ ಇಂದು ನಿನ್ನೆಯದಲ್ಲ. ಗಡಿಒಪ್ಪಂದದ ವಿಷಯದಲ್ಲಿ ಭಾರತ ಭೂತಾನ್ ಮೇಲೆ ಮಾಡಿದ ಹೇರಿಕೆಯೂ ವಿವಾದ ಉಲ್ಬಣಿಸಲು ಕಾರಣವಾಯಿತೇ? ಎಂದು ಕೃತಿ ಚರ್ಚಿಸುತ್ತದೆ. ದೋಕ್ಲಾಂನಲ್ಲಿ ಚೀನಾ ರಸ್ತೆ ನಿರ್ಮಾಣ ಮಾಡಲು ಆರಂಭಿಸಿದಾಗ ಭಾರತ ತೀವ್ರ ಮುಖಭಂಗ ಅನುಭವಿಸಲು ಕಾರಣವೇನು ಎನ್ನುವುದನ್ನೂ ಕೃತಿ ವಿವರಿಸಲು ಪ್ರಯತ್ನಿಸುತ್ತದೆ. ಭಾರತದ ಸೈನ್ಯ ಚೀನಾದ ವಶದಲ್ಲಿರುವ ದೋಕ್ಲಾಂ ಪ್ರವೇಶಿಸಿದ್ದು ತಪ್ಪು ಹಾಗೂ ಅದು ಯುದ್ಧಕ್ಕೆ ನೀಡಿದ ಪ್ರಚೋದನೆ. 1962ರಲ್ಲಿ ವಿವಾದಿತ ಪ್ರದೇಶವಾದ ಧೋಕ್ಲಾಂಗೆ ಕೃಷ್ಣಮೆನೆನ್ ಮತ್ತು ನೆಹರೂ ಸೈನ್ಯವನ್ನು ಕಳುಹಿಸಿ ಯುದ್ಧಕ್ಕೆ ಪ್ರಚೋದನೆ ನೀಡಿರುವುದನ್ನು ಇದು ಜ್ಞಾಪಿಸುತ್ತದೆ ಎಂದು ಲೇಖಕರು ಹೇಳುತ್ತಾರೆ. ಬಹುಶಃ ಭಾರತದ ನಿರ್ಧಾರಗಳ ಹಿಂದೆ ಅಮೆರಿಕದ ಒತ್ತಡಗಳನ್ನು ಲೇಖಕರು ಗುರುತಿಸುತ್ತಾರೆ. ಕೃತಿಯಲ್ಲಿ ಒಟ್ಟು ಏಳು ಅಧ್ಯಾಯಗಳಿವೆ. ಮೊದಲ ಅಧ್ಯಾಯ ದಲ್ಲಿ ಗಡಿವಿವಾದದ ಇತಿಹಾಸವನ್ನು ವಿವರಿಸಲು ಪ್ರಯತ್ನಿಸುತ್ತಾರೆ. ಗಡಿಗೆ ಸಂಬಂಧಿಸಿದ ವರದಿಗಳಲ್ಲಿ ದಾಖಲೆಗಳನ್ನು ಮಂಡಿಸುವಾಗ ಭಾರತ, ಪುರಾಣ ಕತೆಗಳನ್ನು ಆಶ್ರಯಿಸಿರುವುದನ್ನು ಇದು ಹೇಳುತ್ತದೆ. ನೆಹರೂ ಕಾಲದಲ್ಲಿ ಆಗಿರುವ ಬೆಳವಣಿಗೆಗಳನ್ನು ಈ ಅಧ್ಯಾಯ ಹೇಳುತ್ತದೆ. ಹಾಗೆಯೇ ಅನುಬಂಧ-1,2,3,4ರಲ್ಲಿ ಕೆಲವು ಟಿಪ್ಪಣಿಗಳನ್ನು ನೀಡುತ್ತಾರೆ. ಹಾಗೆಯೇ ಕೃತಿಗೆ ಆಧಾರವಾಗಿರುವ ಗ್ರಂಥಸೂಚಿಗಳನ್ನು ಪರಿಚಯಿಸುತ್ತಾರೆ.

64 ಪುಟಗಳ ಈ ಪುಟ್ಟ ಕೃತಿಯ ಮುಖಬೆಲೆ 50 ರೂಪಾಯಿ. ಲಡಾಯಿ ಪ್ರಕಾಶನ ಕೃತಿಯನ್ನು ಹೊರತಂದಿದೆ.

share
-ಕಾರುಣ್ಯಾ
-ಕಾರುಣ್ಯಾ
Next Story
X