ಮಡಿಕೇರಿ: ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತ್ಯು
ಮಡಿಕೇರಿ, ಜು. 10: ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯ ಕುಂದಚೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಚೆಟ್ಟಿಮಾನಿಯ ಪೂವ (65) ಮೃತರು ಎಂದು ಗುರುತಿಸಲಾಗಿದೆ. ಅವರು ತೋಟದಲ್ಲಿ ಸಿಲ್ವರ್ ಏಣಿಯನ್ನು ಸ್ಥಳಾಂತರಿಸುವಾಗ ವೇಳೆ ತೋಟದ ಮೂಲಕ ಹಾದು ಹೋಗಿದ್ದ 11 ಕೆವಿ ವಿದ್ಯುತ್ ಲೈನ್ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story