Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ಕ್ರಿಮಿನಲ್‌ಗಳನ್ನು ಸಾಗಿಸಲು...

ಬಿಜೆಪಿಯ ಕ್ರಿಮಿನಲ್‌ಗಳನ್ನು ಸಾಗಿಸಲು ಬುಲೆಟ್ ರೈಲಿಗೂ ಸಾಧ್ಯವಿಲ್ಲ: ಖರ್ಗೆ

ವಾರ್ತಾಭಾರತಿವಾರ್ತಾಭಾರತಿ10 July 2018 7:18 PM IST
share
ಬಿಜೆಪಿಯ ಕ್ರಿಮಿನಲ್‌ಗಳನ್ನು ಸಾಗಿಸಲು ಬುಲೆಟ್ ರೈಲಿಗೂ ಸಾಧ್ಯವಿಲ್ಲ: ಖರ್ಗೆ

ಮುಂಬೈ,ಜು.10: ಬಿಜೆಪಿಯಲ್ಲಿ ಎಷ್ಟೊಂದು ಕ್ರಿಮಿನಲ್‌ಗಳು ತುಂಬಿಕೊಂಡಿದ್ದಾರೆಂದರೆ ಉದ್ದೇಶಿತ ಅಹ್ಮದಾಬಾದ್-ಮುಂಬೈ ಬುಲೆಟ್ ರೈಲಿಗೂ ಅವರನ್ನೆಲ್ಲ ಹೊತ್ತೊಯ್ಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರ ‘ಬೇಲ್ ಗಾಡಿ’ ಟೀಕೆಗೆ ತಿರುಗೇಟು ನೀಡಿದ್ದಾರೆ.

 ದೇಶಪ್ರೇಮ,ಕೃಷಿಕರ ಸಮಸ್ಯೆ,ದಲಿತರು ಮತ್ತು ಮಹಿಳೆಯರ ವಿರುದ್ಧದ ಕುರಿತು ಪ್ರಧಾನಿಯ ಮೌನ ಮತ್ತು ಸಂಸತ್ತಿನ ‘ಅಪಮೌಲ್ಯೀಕರಣ’ದಂತಹ ಇತರ ವಿಷಯಗಳಲ್ಲಿಯೂ ಅವರು ಮೋದಿ ವಿರುದ್ಧ ದಾಳಿ ನಡೆಸಿದರು.

2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಮುಂಬೈ ಮಹಾನಗರದ ಎಲ್ಲ ಆರೂ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿಗೆ ಪಾಠ ಕಲಿಸಲು ಶ್ರಮಿಸುವಂತೆ ಮಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಖರ್ಗೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಜು.7ರಂದು ಜೈಪುರದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಸಂದರ್ಭ ಮೋದಿ ಅವರು ಹಿಂದಿಯ ‘ಬೈಲ್ ಗಾಡಿ(ಎತ್ತಿನ ಗಾಡಿ)’ ಶಬ್ಧವನ್ನು ಪ್ರಸ್ತಾಪಿಸಿ,ಕಾಂಗ್ರೆಸ್‌ನ ಹಲವಾರು ನಾಯಕರು ಜಾಮೀನು(ಬೇಲ್) ಪಡೆದುಕೊಂಡು ಹೊರಗಿರುವುದರಿಂದ ಆ ಪಕ್ಷವು ‘ಬೇಲ್ ಗಾಡಿ’ಯಾಗಿದೆ ಎಂದು ವ್ಯಂಗ್ಯವಾಡಿದ್ದರು.

ಮುಂಬೈ ಕಾಂಗ್ರೆಸ್ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಖರ್ಗೆ,ಮೋದಿಯವರು ನಮ್ಮ ಪಕ್ಷವನ್ನು ‘ಬೇಲ್ ಗಾಡಿ ’ಎಂದು ಕರೆದಿದ್ದಾರೆ. ಆದರೆ ಅವರ ಪಕ್ಷದಲ್ಲಿನ ಕ್ರಿಮಿನಲ್‌ಗಳು ‘ಬೇಲ್’ನಲ್ಲೂ ಇದ್ದಾರೆ,‘ಜೈಲ್’ನಲ್ಲೂ ಇದ್ದಾರೆ ಎಂದು ಕುಟುಕಿದರು.

ಗೋರಕ್ಷಣೆಯ ನೆಪದಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿಗಳಿಗೆ ಕೇಂದ್ರ ಸಚಿವ ಜಯಂತ ಸಿನ್ಹಾ ಅವರಿಂದ ಪುಷ್ಪಮಾಲೆಗಳೊಂದಿಗೆ ಸ್ವಾಗತದ ಕುರಿತೂ ಬಿಜೆಪಿಯ ವಿರುದ್ಧ ದಾಳಿ ನಡೆಸಿದ ಅವರು,ಇನ್ನೋರ್ವ ಕೇಂದ್ರ ಸಚಿವ ಗಿರಿರಾಜ ಸಿಂಗ್ ಅವರು ಇತ್ತೀಚಿಗೆ ಬಿಹಾರದ ಜೈಲಿನಲ್ಲಿ ದಂಗೆ ಆರೋಪಿಗಳನ್ನು ಭೇಟಿಯಾಗಿದ್ದನ್ನೂ ಪ್ರಶ್ನಿಸಿದರು.

ಇಂತಹ ವಿಷಯಗಳ ಬಗೆ ಮೋದಿ ತುಟಿಪಿಟಕ್ಕೆನ್ನುವುದಿಲ್ಲ. ದಲಿತರು ಮತ್ತು ಮಹಿಳೆಯರ ವಿರುದ್ಧದ ದೌರ್ಜನ್ಯಗಳ ಕುರಿತೂ ಅವರು ಮಾತನಾಡುವುದಿಲ್ಲ. ಅವರ ಸಂಸತ್ತಿನ ಗೌರವವನ್ನು ತಗ್ಗಿಸಿದ್ದಾರೆ. ಕೇವಲ ಓರ್ವ ವ್ಯಕ್ತಿಗೆ(ಪ್ರಧಾನಿ) ಮಹತ್ವವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಆರೆಸ್ಸೆಸ್ ಮತ್ತ ಬಿಜೆಪಿ ಕೂಟದ ವಿರುದ್ಧ ಟೀಕಾಪ್ರಹಾರ ನಡೆಸಿದ ಖರ್ಗೆ,ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಇತರರಿಂದ ದೇಶಭಕ್ತಿಯನ್ನು ಕಲಿಯಬೇಕಾದ ಅಗತ್ಯವಿಲ್ಲ ಎಂದು ಚುಚ್ಚಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X