Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯವಹಾರಸ್ನೇಹಿ ಪಟ್ಟಿಯಲ್ಲಿ ಆಂಧ್ರ...

ವ್ಯವಹಾರಸ್ನೇಹಿ ಪಟ್ಟಿಯಲ್ಲಿ ಆಂಧ್ರ ಪ್ರದೇಶಕ್ಕೆ ಅಗ್ರಸ್ಥಾನ

ಕರ್ನಾಟಕ ಎಷ್ಟನೆ ಸ್ಥಾನದಲ್ಲಿದೆ ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ10 July 2018 7:58 PM IST
share
ವ್ಯವಹಾರಸ್ನೇಹಿ ಪಟ್ಟಿಯಲ್ಲಿ ಆಂಧ್ರ ಪ್ರದೇಶಕ್ಕೆ ಅಗ್ರಸ್ಥಾನ

ಹೊಸದಿಲ್ಲಿ, ಜು.10: ವಿಶ್ವಬ್ಯಾಂಕ್ ಮತ್ತು ಕೈಗಾರಿಕಾ ನೀತಿ ಮತ್ತು ಪ್ರೋತ್ಸಾಹ ಇಲಾಖೆ (ಡಿಐಪಿಪಿ) ಬಿಡುಗಡೆ ಮಾಡಿರುವ ವ್ಯವಹಾರಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶ ಶೇ. 98.42 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಶೇ. 96.40 ಅಂಕಗಳನ್ನು ಪಡೆದುಕೊಂಡಿರುವ ಕರ್ನಾಟಕ ಈ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದು, ಪರಿಸರ ನೋಂದಾವಣಿಯಲ್ಲಿ ಮುಂಚೂಣಿಯಲ್ಲಿದೆ.

ಉಳಿದಂತೆ ಜಾರ್ಖಂಡ್ ನಾಲ್ಕನೇ ಸ್ಥಾನ, ಗುಜರಾತ್ ಐದು, ಚತ್ತೀಸ್‌ಗಡ ಆರು, ಮಧ್ಯಪ್ರದೇಶ ಏಳು, ಕರ್ನಾಟಕ ಎಂಟು, ರಾಜಸ್ಥಾನ ಒಂಬತ್ತು ಮತ್ತು ಪಶ್ಚಿಮ ಬಂಗಾಳ ಹತ್ತನೇ ಸ್ಥಾನದಲ್ಲಿದೆ.

ಕಳೆದ ವರ್ಷ ಆಂಧ್ರ ಪ್ರದೇಶದ ಜೊತೆ ಅಗ್ರಸ್ಥಾನವನ್ನು ಹಂಚಿಕೊಂಡಿದ್ದ ತೆಲಂಗಾಣ ಈ ಬಾರಿ ಶೇ.98.33 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಶೇ. 98.07 ಅಂಕಗಳೊಂದಿಗೆ ಹರ್ಯಾಣ ಮೂರನೇ ಸ್ಥಾನದಲ್ಲಿದೆ. ಹೂಡಿಕೆಯನ್ನು ಆಕರ್ಷಿಸಲು ಮತ್ತು ವ್ಯವಹಾರ ನಡೆಸುವ ಸ್ಥಿತಿಯನ್ನು ಉತ್ತಮಗೊಳಿಸಲು ರಾಜ್ಯಗಳ ನಡುವೆ ಸ್ಪರ್ಧೆ ನಡೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರಕಾರ ಕಳೆದ ವರ್ಷ ರಾಜ್ಯಗಳಿಗೆ ಅಂಕಗಳನ್ನು ನೀಡುವ ಕ್ರಮವನ್ನು ಪರಿಚಯಿಸಿತ್ತು. ವ್ಯವಹಾರಸ್ನೇಹಿ ಅಂಕ ನೀಡುವಲ್ಲಿ ನಿರ್ಮಾಣ ಪರವಾನಿಗೆ, ಕಾರ್ಮಿಕ ನಿಯಂತ್ರಣ, ಪರಿಸರ ನೋಂದಾವಣಿ, ಮಾಹಿತಿ ಲಭ್ಯತೆ, ಜಮೀನು ಲಭ್ಯತೆ ಹಾಗೂ ಏಕಗವಾಕ್ಷಿ ವ್ಯವಸ್ಥೆ ಮುಂತಾದ ಅಂಶಗಳನ್ನು ಗಮನಿಸಲಾಗುತ್ತದೆ. ಭ್ರಷ್ಟಾಚಾರ ಈಗಲೂ ಭಾರತದಲ್ಲಿ ಉದ್ಯಮಿಗಳು ಎದುರಿಸಬೇಕಾದ ದೊಡ್ಡ ಸಮಸ್ಯೆಯಾಗಿದೆ ಎಂದು 2017ರ ಬಿಆರ್‌ಎಪಿ ವರದಿಯು ತಿಳಿಸಿದೆ.

ಬಿಆರ್‌ಎಪಿ ಅಡಿಯಲ್ಲಿ ಮಾಡಲಾಗುವ ಮೌಲ್ಯಮಾಪನವು ರಾಜ್ಯಗಳು ತಮ್ಮ ಜಾಲತಾಣಗಳಲ್ಲಿ ಹಾಕುವ ಮಾಹಿತಿ ಆಧಾರಿತ ಸುಧಾರಣಾ ಸಾಕ್ಷಿ ಹಾಗೂ ಉದ್ಯಮಿಗಳಿಗೆ ನೀಡಲಾದ ಸೇವೆಗಳ ಬಳಕೆದಾರರಿಂದ ಪಡೆಯಲಾದ ಪ್ರತಿಕ್ರಿಯಾ ಅಂಕ (ಫೀಡ್‌ಬ್ಯಾಕ್) ವನ್ನು ಆಧರಿಸಿರುತ್ತದೆ. ಸದ್ಯ 17 ರಾಜ್ಯಗಳು ಸುಧಾರಣಾ ಸಾಕ್ಷಿಯಲ್ಲಿ ಶೇ. 90 ಅಂಕ ಗಳಿಸಿದ್ದರೆ 15 ರಾಜ್ಯಗಳು ಶೇ. 90 ಹಾಗೂ ಹೆಚ್ಚಿನ ಒಟ್ಟಾರೆ ಅಂಕವನ್ನು ಗಳಿಸಿವೆ ಎಂದು ಡಿಐಪಿಪಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X