Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಂತಿ ಮೇಲಿಂದ ಕೆಳಗೆ ಬಿದ್ದರೆ...

ತಂತಿ ಮೇಲಿಂದ ಕೆಳಗೆ ಬಿದ್ದರೆ ಕತ್ತೆಯೊಂದಿಗೆ ಮದುವೆ!

ವಾರ್ತಾಭಾರತಿವಾರ್ತಾಭಾರತಿ11 July 2018 10:31 PM IST
share
ತಂತಿ ಮೇಲಿಂದ ಕೆಳಗೆ ಬಿದ್ದರೆ ಕತ್ತೆಯೊಂದಿಗೆ ಮದುವೆ!

ಬೆಂಗಳೂರು, ಜು. 11: ‘ಸರ್ಕಸ್ ಕಂಪೆನಿಯ ಮಾಲಕ ತಂತಿ ಮೇಲೆ ನಡೆಯುವ ತನ್ನ ಮಗಳಿಗೆ ನೀನು ಕೆಳಗೆ ಬಿದ್ದರೆ ಕತ್ತೆಯೊಂದಿಗೆ ಮದುವೆ ಮಾಡುತ್ತೇನೆಂದ. ಹೀಗಾಗಿ ಕತ್ತೆ ಆಸೆಯಿಂದ ಕಾಯುತ್ತಿತ್ತು. ಆದರೆ, ಮಗಳು ಕೆಳಗೆ ಬೀಳಲಿಲ್ಲ’ ಎಂದು ಜೆಡಿಎಸ್ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ, ಮೈತ್ರಿ ಸರಕಾರ ಬೀಳಲಿದೆ ಎಂಬ ಬಿಜೆಪಿ ಸದಸ್ಯರನ್ನು ಛೇಡಿಸಿದರು.

ಬುಧವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆ ವೇಳೆ ಬಿಜೆಪಿಯ ಗೋವಿಂದ ಕಾರಜೋಳ, ಮೈತ್ರಿ ಸರಕಾರ ಕುರುಡರು, ಕುಂಟರನ್ನು ಹೊತ್ತೊಯ್ಯುವ ಸರಕಾರವಿದು ಎಂದು ಆಕ್ಷೇಪಿಸಿದರು. ನಾನು ಇದನ್ನು ಭಾಗಶಃ ಒಪ್ಪುತ್ತೇನೆ. ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ತೀರ್ಪು ಬಂದಿರಲಿಲ್ಲ. ಆದರೆ, ಬಿಜೆಪಿಗೆ 104 ಸ್ಥಾನಗಳಿದ್ದರೂ ಆತುರದಲ್ಲಿದ್ದರು ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಬಸವರಾಜ ಬೊಮ್ಮಾಯಿ, ‘ನಿಮ್ಮದು ಅವಧಿಪೂರ್ವ ಮಗು. ಒಂಭತ್ತು ತಿಂಗಳು ಕಾಯಲಿಲ್ಲ. ಇದು ಆತುರ ಬಿದ್ದಿದ್ದರಿಂದ ಆಗಿದ್ದಲ್ಲವಾ. ನಿಮ್ಮ ಅನುಕೂಲಕ್ಕಾಗಿ ಹಿಂದೆ-ಮುಂದೆ ಹೋಗುವುದಲ್ಲ. ಮಿಂಚಿನ ವೇಗದಲ್ಲಿ ಮೈತ್ರಿ ಮಾಡಿಕೊಂಡಿರಿ’ ಎಂದು ವಾಗ್ಬಾಣ ಬಿಟ್ಟರು.

ಇದಕ್ಕೆ ಧ್ವನಿಗೂಡಿಸಿದ ಬಿಜೆಪಿಯ ಮಾಧುಸ್ವಾಮಿ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೂ, ಬಜೆಟ್ ಮೇಲಿನ ಚರ್ಚೆಗೂ ವ್ಯತ್ಯಾಸವೇ ಇಲ್ಲವೇ? ಹಿರಿಯ ಸದಸ್ಯರಾದ ರಾಮಸ್ವಾಮಿಯವರು ಗಾಂಭೀರ್ಯತೆ ಅರಿತು ಮಾತನಾಡಬೇಕು ಎಂದು ಸಲಹೆ ನೀಡಿದರು.

‘ನಾನೂ ಅಲ್ಲಿಗೆ ಬರುತ್ತಿದ್ದೇನೆ. ಸದನದ ಸಮಯವನ್ನು ಹಾಳು ಮಾಡಲು ಬಯಸುವುದಿಲ್ಲ ಎಂದು ಮಾತು ಮುಂದುವರಿಸಿದ ರಾಮಸ್ವಾಮಿ, ‘ಕೊನೆಗೂ ಅವಳು ಕೆಳಗೆ ಬೀಳಲಿಲ್ಲ. ಕತ್ತೆ ಸೊರಗಿ ಹೋಯಿತು’ ಎಂದರು. ‘ಇದನ್ನು ಕೇಳಿ ನನಗೆ ಬಂದಿದ್ದ ವಾಟ್ಸಪ್ ಸಂದೇಶವೊಂದು ನೆನಪಾಯಿತು. ಕಾಂಗ್ರೆಸ್-ಜೆಡಿಎಸ್ ಕತ್ತೆಗಳ ಮದುವೆಯಿಂದ ಒಳ್ಳೆಯ ಮಳೆಯಾಗಿದೆ ಎಂದು ಯಾರೋ ಕಳುಹಿಸಿದ್ದರು ಎಂದು ಸಿ.ಟಿ.ರವಿ ಮಸಾಲೆ ಬೆರೆಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಹಕಾರ ಸಚಿವ ಬಂಡೆಪ್ಪ ಕಾಂಶೆಪೂರ್, ‘ರಾಜ್ಯದಲ್ಲಿ ಒಳ್ಳೆಯ ಮಳೆಯಂತೂ ಆಗುತ್ತಿದೆ. ಇದಕ್ಕಿಂತ ರಾಜ್ಯಕ್ಕೆ ಇನ್ನೆಂಥ ಸಂಪನ್ಮೂಲದ ಅಗತ್ಯವಿದೆ’ ಎಂದು ಚಟಾಕಿ ಹಾರಿಸಿದ್ದು ಸದನವನ್ನು ಕೆಲಕ್ಷಣ ನಗೆ ಅಲೆಯಲ್ಲಿ ತೇಲಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X