Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಚಾರಿತ್ರ್ಯವಧೆ’ ಮಾಡುವುದನ್ನು...

‘ಚಾರಿತ್ರ್ಯವಧೆ’ ಮಾಡುವುದನ್ನು ಸಹಿಸುವುದಿಲ್ಲ: ಸದಸ್ಯರಿಗೆ ಸ್ಪೀಕರ್ ರಮೇಶ್‌ ಕುಮಾರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 July 2018 8:19 PM IST
share
‘ಚಾರಿತ್ರ್ಯವಧೆ’ ಮಾಡುವುದನ್ನು ಸಹಿಸುವುದಿಲ್ಲ: ಸದಸ್ಯರಿಗೆ ಸ್ಪೀಕರ್ ರಮೇಶ್‌ ಕುಮಾರ್ ಎಚ್ಚರಿಕೆ

ಬೆಂಗಳೂರು, ಜು. 12: ಅಧಿವೇಶನ ಕಲಾಪದಲ್ಲಿ ಯಾರೊಬ್ಬರ ಚಾರಿತ್ರ್ಯವಧೆ ಮಾಡುವ ಕೆಲಸಕ್ಕೆ ಮುಂದಾದರೆ ಸಹಿಸುವುದಿಲ್ಲ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಎಲ್ಲ ಸದಸ್ಯರಿಗೆ ಎಚ್ಚರಿಕೆ ನೀಡಿದರು.

ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಎಸ್.ಎ.ರಾಮದಾಸ್ ಬಜೆಟ್ ಮೇಲಿನ ಚರ್ಚೆ ವೇಳೆ ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ವಿಚಾರ ಪ್ರಸ್ತಾಪಿಸಿದ್ದನ್ನು ಸದನದ ಗಮನಕ್ಕೆ ತಂದ ಸಂದರ್ಭದಲ್ಲಿ ಸ್ಪೀಕರ್ ಎಚ್ಚರಿಸಿದರು.

ವಿಧಾನಸಭೆಯಲ್ಲಿ ಯಾರೂ ‘ಹಿಟ್ ಅಂಡ್ ರನ್’ಗೆ ಅವಕಾಶ ನೀಡಬಾರದು. ಯಾವುದೇ ಆರೋಪ ಮಾಡಬೇಕಿದ್ದರೂ ದಾಖಲೆ ಕೊಟ್ಟು ಕಲಾಪದ ನಿಯಮಾವಳಿ ಪ್ರಕಾರ ನೋಟಿಸ್ ನೀಡಿದರೆ ಪರಿಶೀಲಿಸಿ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ನಿರ್ದೇಶನ ನೀಡಿದರು. ಚಾರಿತ್ರ್ಯವಧೆ ನೋವನ್ನು ನಮ್ಮ ಇಡೀ ಕುಟುಂಬವೂ ಅನುಭವಿಸಿದೆ. ನಿಮ್ಮ ಬಳಿ ಅಗತ್ಯ ಸಾಕ್ಷಾಧಾರಗಳಿದ್ದರೆ, ನಿಯಮಾವಳಿಗಳ ಪ್ರಕಾರ ನೋಟಿಸ್ ಕೊಟ್ಟರೆ ಅವಕಾಶ ನೀಡಲಾಗುವುದು ಎಂದ ಅವರು, ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಕೃಷ್ಣಭೈರೇಗೌಡ, ‘ನಿರ್ದಿಷ್ಟ ಆರೋಪ ಮಾಡುವ ವೇಳೆ ಸೂಕ್ತ ದಾಖಲೆಗಳನ್ನು ಒದಗಿಸಿ, ನಿಯಮಾವಳಿಗಳ ಪ್ರಕಾರ ಚರ್ಚೆ ಮಾಡುವುದಾದರೆ ಸರಕಾರ ಉತ್ತರ ನೀಡಲು ಸಿದ್ಧ. ಯಾವುದೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಿಸಲು ಸಿದ್ದ. ಒಂದು ವೇಳೆ ಶಾಸಕರು ಮಾಡಿದ ಆರೋಪ ಸಾಬೀತಾದರೆ, ಆರೋಪಿತರಿಗೆ ಶಿಕ್ಷೆಯಾದರೆ ನಿಮಗೆ ಲಾಭವಾಗಲಿದೆ’ ಎಂದು ಪ್ರತಿಕ್ರಿಯಿಸಿದರು.

ಚರ್ಚೆಗೆ ಪಟ್ಟು: ಈ ಹಂತದಲ್ಲಿ ಎದ್ದುನಿಂತ ರಾಮದಾಸ್, ಇಂದಿರಾ ಕ್ಯಾಂಟಿನ್‌ನಲ್ಲಿ ಕಳಪೆ ಆಹಾರ ನೀಡಲಾಗಿದೆ. ಕೇವಲ 120 ಮಂದಿಗಷ್ಟೇ ತಿಂಡಿ ನೀಡಿ 500 ಮಂದಿಗೆ ನೀಡಿದ ದಾಖಲೆ ಸೃಷ್ಟಿಸಲಾಗಿದೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿದ್ದು, ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದರಿಂದ ಸದನದಲ್ಲಿ ಕೆಲಕಾಲ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪವೂ ನಡೆಯಿತು. ಸ್ಪೀಕರ್ ಪೀಠದಲ್ಲಿದ್ದ ಉಪ ಸಭಾಧ್ಯಕ್ಷ ಎಂ.ಕೃಷ್ಣರೆಡ್ಡಿ ಸದಸ್ಯರನ್ನು ಸಮಾಧಾನ ಪಡಿಸಲು ಯತ್ನಿಸಿದರೂ, ಯಾರೊಬ್ಬರು ಅವರ ಮಾತುಗಳನ್ನು ಆಲಿಸುವ ಸ್ಥಿತಿಯಲ್ಲಿ ಇರಲಿಲ್ಲ. ಆ ಬಳಿಕ ಬಜೆಟ್ ಮೇಲಿನ ಚರ್ಚೆ ಮುಂದುವರೆಸಲು ಅವಕಾಶ ನೀಡಬೇಕೆಂದು ಹಾಗೂ ಕಾನೂನು ಸಚಿವ ಕೃಷ್ಣಭೈರೇಗೌಡ ಬಳಸಿದ ಶಬ್ದವನ್ನು ಕಡತದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿ ರಾಮ್‌ದಾಸ್ ಕೆಲಕಾಲ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X