Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವಕ್ಕೆ...

‘ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವಕ್ಕೆ ಭಾರತ-ಇಯು ಆದ್ಯತೆ’

'ಮಾಹೆ'ಯಲ್ಲಿ ಮಣಿಪಾಲ ಉನ್ನತ ಶಿಕ್ಷಣ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ12 July 2018 10:24 PM IST
share
‘ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವಕ್ಕೆ ಭಾರತ-ಇಯು ಆದ್ಯತೆ’

ಮಣಿಪಾಲ, ಜು.12: ಕಳೆದ ಅಕ್ಟೋಬರ್ ತಿಂಗಳಲ್ಲಿ ನಡೆದ ಭಾರತ- ಯುರೋಪಿಯನ್ ಒಕ್ಕೂಟದ ಶೃಂಗಸಭೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಹಭಾಗಿತ್ವಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುರೋಪಿಯನ್ ಕಮಿಷನ್‌ನ ಅಧ್ಯಕ್ಷ ಜೀನ್ ಕ್ಲಾಡ್ ಜುಂಕರ್ ಮತ್ತು ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಡೋನಾಲ್ಡ್ ಟಸ್ಕ್ ಹೆಚ್ಚಿನ ಬದ್ಧತೆಯನ್ನು ಘೋಷಿಸಿದ್ದಾರೆ ಎಂದು ಭಾರತದಲ್ಲಿ ಯುರೋಪಿಯನ್ ಒಕ್ಕೂಟದ ಪ್ರತಿನಿಧಿಗಳ ಪ್ರಬಾರ ಮುಖ್ಯಸ್ಥ ರೇಮುಂಡ್ ಮಾಗಿಸ್ ಹೇಳಿದ್ದಾರೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿವಿಯ ಆಶ್ರಯದಲ್ಲಿ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಇಂದು ಪ್ರಾರಂಭಗೊಂಡ ಮೂರು ದಿನಗಳ ‘ಮಣಿಪಾಲ ಉನ್ನತ ಶಿಕ್ಷಣ ಸಮಾವೇಶ’ದ ಉದ್ಘಾಟನಾ ಸಮಾರಂಭದಲ್ಲಿ ನೀಡಿದ ವೀಡಿಯೊ ಸಂದೇಶದಲ್ಲಿ ಅವರು ವಿಷಯ ತಿಳಿಸಿದ್ದಾರೆ.

ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಯುರೋಪಿಯನ್ ಒಕ್ಕೂಟದ ಬೆಂಬಲ ಕಾರ್ಯಕ್ರಮದಿಂದಾಗಿ ಭಾರತದ 120ಕ್ಕೂ ಅಧಿಕ ವಿಶ್ವವಿದ್ಯಾನಿಲಯಗಳು ತಮ್ಮ ಸುಧಾರಣಾ ಪ್ರಕ್ರಿಯೆಗಳಿಗೆ ವೇಗವನ್ನು ನೀಡುವ ಪ್ರಯತ್ನದಲ್ಲಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಸಂಪರ್ಕ ಹಾಗೂ ಸ್ಪರ್ಧಾತ್ಮಕವಾಗಿರಲು ಸನ್ನದ್ಧವಾಗಿವೆ ಎಂದು ಮಾಗಿಸ್ ನುಡಿದರು.

ಮೂರು ದಿನಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ, ಜರ್ಮನಿಯ ಎಚ್. ಬ್ರಿಮನ್ ಯುನಿವರ್ಸಿಟಿ ಆಫ್ ಅಪ್ಲೈಡ್ ಸಾಯನ್ಸ್‌ನ ನಿವೃತ್ತ ವೈಸ್ ರೆಕ್ಟರ್ ಪ್ರೊ.ಫ್ರೆಡ್ರಿಚ್ ಲೇಹ್‌ಮನ್, ಕಳೆದ ಮೂರು ದಶಕಗಳಿಂದ ಬ್ರಿಮನ್ ಮತ್ತು ಮಣಿಪಾಲ ನಡುವೆ ವಿವಿಧ ಕ್ಷೇತ್ರಗಳಲ್ಲಿ ಬೆಳೆದಿರುವ ಪರಸ್ಪರ ಸಹಕಾರದ ಕುರಿತು ಹರ್ಷ ವ್ಯಕ್ತಪಡಿಸಿದರಲ್ಲದೇ, ಅವಕಾಶಗಳ ಅಂತಾರಾಷ್ಟ್ರೀಕರಣದಿಂದ ಯುವಜನತೆಗೆ ತಮ್ಮ ಪ್ರತಿಭೆಗಳನ್ನು ವಿಶ್ವ ಮಟ್ಟದಲ್ಲಿ ತೋರಿಸಲು ಅವಕಾಶಗಳು ಲಭ್ಯವಾಗುತ್ತಿವೆ. ಇದರಿಂದ ಶಾಂತಿ ಮತ್ತು ಸೌಹಾರ್ದತೆಯ ಉತ್ತಮ ಜಗತ್ತು ಕುಡಿಯೊಡೆಯುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಹೆಯ ಕುಲಪತಿ ಡಾ.ಎಚ್.ವಿನೋದ್ ಭಟ್ ಮಾತನಾಡಿ, ಉನ್ನತ ಶಿಕ್ಷಣದ ಅಂತಾರಾಷ್ಟ್ರೀಕರಣದಿಂದ ಶೈಕ್ಷಣಿಕವಾಗಿ ಹೊಸ ಸಾಧ್ಯತೆಗಳು, ವಿಸ್ತರಣೆಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ ಹೆಚ್ಚೆಚ್ಚು ಸಂಪರ್ಕ, ಸೇತುವೆ ಹಾಗೂ ಪಾಲುದಾರಿಕೆ ಸಾಧ್ಯವಾಗುತ್ತಿವೆ ಎಂದರು.

ಜರ್ಮನಿಯ ಬರ್ಲಿನ್ ಟೆಕ್ನಿಕಲ್ ವಿವಿಯ ನಿವೃತ್ತ ಚಾನ್ಸಲರ್ ಉಲ್ರಿಚ್ ಪೊಡ್ವೆಲ್ ಅವರು ಪ್ರಧಾನ ಭಾಷಣದಲ್ಲಿ ಅಂತಾರಾಷ್ಟ್ರೀಕರಣದ ಸಂಕೀರ್ಣತೆ ಹಾಗೂ ಸಂದರ್ಭಗಳ ಕುರಿತು ಸೋದಾಹರಣವಾಗಿ ಮಾತನಾಡಿದರು. ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಪದವಿ ನೀಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಮಾಹೆಯ ಯುರೋಪಿಯನ್ ಸ್ಟಡಿ ಸೆಂಟರ್‌ನ ನಿರ್ದೇಶಕಿ ಹಾಗೂ ಸಮಾವೇಶದ ಸಂಚಾಲಕಿ ಡಾ.ನೀತಾ ಇನಾಂದಾರ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಟರ್‌ನೇಶನಲ್ ಕೊಲಬರೇಷನ್ಸ್‌ನ ನಿರ್ದೇಶಕ ಡಾ.ರಘು ರಾಧಾಕೃಷ್ಣನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X