Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಸಾಲಮನ್ನಾಗೆ ಒತ್ತಾಯಿಸಿ ರೈತರಿಂದ...

ಮಂಡ್ಯ: ಸಾಲಮನ್ನಾಗೆ ಒತ್ತಾಯಿಸಿ ರೈತರಿಂದ ಹೆದ್ದಾರಿ ತಡೆ

ವಾರ್ತಾಭಾರತಿವಾರ್ತಾಭಾರತಿ12 July 2018 11:13 PM IST
share
ಮಂಡ್ಯ: ಸಾಲಮನ್ನಾಗೆ ಒತ್ತಾಯಿಸಿ ರೈತರಿಂದ ಹೆದ್ದಾರಿ ತಡೆ

ಮಂಡ್ಯ, ಜು.12: ರೈತರ ಎಲ್ಲಾ ಬಗೆಯ ಕೃಷಿ ಹಾಗೂ ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರೈತಸಂಘ(ಮೂಲ ಸಂಘಟನೆ) ದ ವತಿಯಿಂದ ಮದ್ದೂರಿನ ಶಿವಪುರದಲ್ಲಿ ಬಳಿ ಗುರುವಾರ ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.

ಹೆದ್ದಾರಿಗೆ ಆಗಮಿಸಿದ ರೈತಸಂಘದ ಕಾರ್ಯಕರ್ತರು, ರೈತರ ಹಾಗೂ ಸ್ತ್ರಿಶಕ್ತಿ ಸಂಘಗಳ ಸಾಲಮನ್ನಾ ಮಾಡುವುದಾಗಿ ಹೇಳಿ ಮಾತು ತಪ್ಪಿದ್ದಾರೆಂದು ಸಿಎಂ ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ ಮಾತನಾಡಿ, ಸಿಎಂ ಕುಮಾರಸ್ವಾಮಿ ಚುನಾವಣಾ ಪೂರ್ವದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತರ ಮತ್ತು ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡದೆ ಬಜೆಟ್‍ನಲ್ಲಿ 2 ಲಕ್ಷ ರೂ. ಸುಸ್ತಿಸಾಲ ಮಾತ್ರ ಮಾಡಿದ್ದಾರೆ. ಇದು ರೈತ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಿಎಂ ವಚನ ಭ್ರಷ್ಟರಾಗದೆ ನೀಡಿರುವ ಭರವಸೆಯಂತೆ ಸಾಲಮನ್ನಾ ಮಾಡಿ, ಮುಂಗಾರು ಬಿತ್ತನೆ ಕಾರ್ಯ ಪ್ರಾರಂಭಿಸಲು ಹೊಸದಾಗಿ ಸಾಲ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಕೊಡಿಸಬೇಕು. ಪ್ರಸಕ್ತ ಸಾಲಿಗೆ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ ಕಾರ್ಖಾನೆ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಪಡಿತರದಲ್ಲಿ ನೀಡುವ 2 ಕೆಜಿ ಅಕ್ಕಿ ಕಡಿಮೆ ಮಾಡಬಾರದು. ರೇಷ್ಮೆ ಬೆಲೆ ಕೆಜಿಗೆ 500 ರೂ.ಗಳಗಿಂತ ಕಡಿಮೆಯಾಗದಂತೆ ಸ್ಥಿರ ಬೆಲೆ ನಿಗದಿ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ರೇಷ್ಮೆ ಆಮದು ಸುಂಕ ಹೆಚ್ಚಳ ಹಾಗೂ ಬಸವರಾಜು ಸಮಿತಿ ವರದಿ ಜಾರಿ ಮಾಡಬೇಕು. ಹಾಲು ಒಕ್ಕೂಟಗಳು ಹಾಲಿನ ದರವನ್ನು ಇಳಿಸದೆ ದರವನ್ನು ಹೆಚ್ಚಿಸಬೇಕು ಎಂದೂ ಅವರು ಆಗ್ರಹಿಸಿದರು.

ಮುಖಂಡರಾದ ಸೊ.ಸಿ.ಪ್ರಕಾಶ್, ಕೆ.ಜಿ.ಉಮೇಶ್, ಮುದ್ದೇಗೌಡ, ರಾಜೇಶ್, ರಾಮಲಿಂಗೇಗೌಡ, ಗಣೇಶ್, ಸತೀಶ್, ಗದ್ದೆನಿಂಗೇಗೌಡ, ಶಿವಲಿಂಗು, ರಾಮೇಗೌಡ, ಕೃಷ್ಣಪ್ಪ, ನಾಗರಾಜು, ಪ್ರಭುಲಿಂಗಂ, ಶ್ರೀಧರ್, ರಮೇಶ್, ಕೆಂಪೇಗೌಡ, ದೇಶಹಳ್ಳಿ ಬೋರಣ್ಣ, ಶೆಟ್ಟಹಳ್ಳಿ ಪ್ರಸನ್ನ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X