Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಚೆ ಕಚೇರಿಗಳನ್ನು ಜನಸ್ನೇಹಿಯಾಗಿಸುವುದು...

ಅಂಚೆ ಕಚೇರಿಗಳನ್ನು ಜನಸ್ನೇಹಿಯಾಗಿಸುವುದು ಪ್ರಧಾನಿ ಗುರಿ: ಶೋಭಾ ಕರಂದ್ಲಾಜೆ

ನೂತನ ವಿಭಾಗೀಯ ಕಚೇರಿ, ಅಂಚೆ ಕಚೇರಿ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 July 2018 7:01 PM IST
share
ಅಂಚೆ ಕಚೇರಿಗಳನ್ನು ಜನಸ್ನೇಹಿಯಾಗಿಸುವುದು ಪ್ರಧಾನಿ ಗುರಿ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಜು.13: ಅಂಚೆ ಕಚೇರಿಯನ್ನು ಜನಸ್ನೇಹಿಯನ್ನಾಗಿಸಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಗರದ ಜ್ಯೋತಿ ನಗರದಲ್ಲಿ ನೂತನ ವಿಭಾಗೀಯ ಕಚೇರಿ ಮತ್ತು ಅಂಚೆ ಕಚೇರಿ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವೃದ್ಧರು, ಸಾರ್ವಜನಿಕರು, ದಿವ್ಯಾಂಗರು ತಮ್ಮ ಮಾಶಾಸನ ಸೇರಿದಂತೆ ಅನೇಕ ಯೋಜನೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಂಚೆ ಕಚೇರಿಯನ್ನು ಅವಲಂಭಿಸಿದ್ದಾರೆ. ಅವರಿಗೆ ಅನುಕೂಲವಾಗುವಂತೆ ಕಟ್ಟಡ ನಿರ್ಮಾಣ ಮಾಡಿರುವುದು ತುಂಬಾ ಖುಷಿ ತಂದಿದೆ. ದೇಶದ ಎಲ್ಲಾ ಅಂಚೆ ಕಚೇರಿಗಳನ್ನು ಸುಂದರವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಪ್ರಸ್ತುತ ಇಮೇಲ್, ಮೊಬೈಲ್ ಯುಗದಲ್ಲೂ ಅಂಚೆ ಇಲಾಖೆ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಅಂಚೆ ಇಲಾಖೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಹೊಸ ಹೊಸ ಯೋಜನೆಗಳನ್ನು ಜೋಡಿಸುವ ಕೆಲಸ ಮಾಡಲಾಗುತ್ತಿದೆ ಎಂದ ಅವರು, ಜಿಲ್ಲೆಯಲ್ಲಿ ಸ್ವಂತ ಕಟ್ಟಡದ ವಿಭಾಗೀಯ ಕಚೇರಿ ಬೇಡಿಕೆ ಅನೇಕ ವರ್ಷಗಳಿಂದ ಇತ್ತು. ನೂತನ ಕಟ್ಟಡವನ್ನು 1 ಕೋಟಿ 67ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. 2014ರಿಂದ ಜಿಲ್ಲೆಯಲ್ಲಿ 2 ಕೋಟಿ 86 ಲಕ್ಷ ವೆಚ್ಚದಲ್ಲಿ ಕಟ್ಟಡ ರಿಪೇರಿ ಹಾಗೂ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಚಿಕ್ಕಮಗಳೂರು ಪೊಸ್ಟಲ್ ಸ್ಟಾಫ್ ಕ್ವಾಟ್ರಾಸ್ 23 ಲಕ್ಷ 77ಸಾವಿರ, ತರೀಕೆರೆ ಗ್ರೇಡ್ 2 ಅಂಚೆ ಕಚೇರಿ ನಿರ್ಮಾಣಕ್ಕೆ 25ಲಕ್ಷ ರೂ., ಕಳಸ ಎ ಕ್ಲಾಸ್ ಅಂಚೆ ಕಚೇರಿಗೆ 17ಲಕ್ಷ ರೂ. ಜಾವಳ್ಳಿಯ ಅಂಚೆ ಕಚೇರಿಗೆ 16 ಲಕ್ಷ ರೂ. ಬಾಳೆಹೊನ್ನೂರಿನ ಅಂಚೆ ಕಚೇರಿಗೆ 3ಲಕ್ಷದ 86 ಸಾವಿರ, ಶಾಂತವೇರಿಯ ಸಿ ಕ್ಲಾಸ್ ಅಂಚೆ ಕಚೇರಿಗೆ 16 ಲಕ್ಷ 98 ಸಾವಿರ, ಶೃಂಗೇರಿ ಗ್ರೇಡ್ 1 ಅಂಚೆ ಕಚೇರಿಗೆ 10 ಲಕ್ಷ ಖರ್ಚು ಮಾಡಿ  ಸುಂದರ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದ ಅನೇಕ ಸರಕಾರಿ ಇಲಾಖೆಗಳ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಈ ಕಟ್ಟಡಗಳಿಗೆ ನೀಡುವ ಬಾಡಿಕೆ ಹಣದಲ್ಲಿಯೇ ಸ್ವಂತ ಕಟ್ಟಡ ನಿರ್ಮಾಣ ಮಾಡಬಹುದು. ಈ ಉದ್ದೇಶದಿಂದ ಅಂಚೆ ಇಲಾಖೆ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಅಂಚೆ ನೌಕರರ ವೇತನ ಹೆಚ್ಚಳದ ಬೇಡಿಕೆ ಅನೇಕ ವರ್ಷಗಳ ಕೂಗಿಗೆ ಕೇಂದ್ರ ಸರ್ಕಾರ ಸ್ಪಂಧಿಸಿ 7ನೇ ವೇತನ ಆಯೋಗದಲ್ಲಿ ಗ್ರಾಮೀಣ ಅಂಚೆ ನೌಕರರ ವೇತನವನ್ನು 12 ಸಾವಿರದಿಂದ 18 ಸಾವಿರದ ವರೆಗೂ ಹೆಚ್ಚಳ ಮಾಡಲಾಗುತ್ತಿದೆ ಎಂದ ಅವರು, ಜಿಲ್ಲೆಯಲ್ಲಿ 25ಸಾವಿರ ಹೆಣ್ಣು ಮಕ್ಕಳು ಸುಕನ್ಯ ಸಂವೃದ್ಧಿ ಯೋಜನೆ ಖಾತೆ ತೆರೆದಿದ್ದಾರೆ. ಜೀವನ್ ಜ್ಯೋತಿ ಭೀಮಾ ಯೋಜನೆ, ಸುರಾಕ್ಷ ಭೀಮಾ ಯೋಜನೆ ಸೇರಿದಂತೆ ಅನೇಕ ಸೌಲಭ್ಯ ಅಂಚೆ ಇಲಾಖೆ ಮೂಲಕ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು.

ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಾರ್ಲ್ಸ್ ಲೋಬೋ ಮಾತನಾಡಿ, ರಾಜ್ಯದಲ್ಲಿ 33 ಅಂಚೆ ವಿಭಾಗೀಯ ಕಚೇರಿಗಳಿವೆ. ಅದರಲ್ಲಿ ಚಿಕ್ಕಮಗಳೂರು ವಿಭಾಗೀಯ ಕಚೇರಿ ಮಾತ್ರ ಸ್ವಂತ ಕಟ್ಟಡ ಹೊಂದಿರಲಿಲ್ಲ. ಆ ಕೊರತೆಯನ್ನು ನೀಗಿಸಲಾಗಿದೆ. ಭಾರತದಲ್ಲಿಯೇ ಹೆಚ್ಚು ಸ್ವಂತ ಕಟ್ಟಡದಲ್ಲಿಯೇ ಅಂಚೆ ಕಚೇರಿ ತೆರೆದಿರುವ ಹೆಗ್ಗಳಿಕೆಗೆ ರಾಜ್ಯದ್ದಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರ್ಮಾಣ ಮಾಡಿರುವ ವಿಭಾಗೀಯ ಅಂಚೆ ಕಚೇರಿಯೂ ಪರಿಸರ ಸ್ನೇಹಿ, ಜನಸ್ನೇಹಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕರ್ನಾಟಕ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಚಿಕ್ಕಮಗಳೂರು ವಿಭಾಗ ಅಂಚೆ ಅಧೀಕ್ಷಕ ಶ್ರೀನಿವಾಸ್, ಕಾಫಿಮಂಡಳಿ ಅಧ್ಯಕ್ಷ ಎಂ.ಎಸ್. ಬೋಜೇಗೌಡ, ಅಂಚೆ ಇಲಾಖೆಯ ನೌಕರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X