Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಟಕಕಾರ ಎಂ. ಉಮೇಶ್ ಕಾಮತ್ ನಿಧನ

ನಾಟಕಕಾರ ಎಂ. ಉಮೇಶ್ ಕಾಮತ್ ನಿಧನ

ವಾರ್ತಾಭಾರತಿವಾರ್ತಾಭಾರತಿ13 July 2018 10:38 PM IST
share
ನಾಟಕಕಾರ ಎಂ. ಉಮೇಶ್ ಕಾಮತ್ ನಿಧನ

ಮೂಡುಬಿದಿರೆ, ಜ. 13: ಹಿರಿಯ ಸಂಕೀರ್ತನಕಾರ, ಭಜನಾ ಸಾಹಿತಿ, ಮೂಡಬಿದಿರೆಯ ಮಾರುತಿ ಸ್ಟೋರ್ಸ್‌ ಸ್ಥಾಪಕ ಎಂ. ಉಮೇಶ ಕಾಮತ್ (71) ಅಲ್ಪ ಕಾಲದ ಅಸೌಖ್ಯದಿಂದ ಜು.13ರಂದು ನಿಧನ ಹೊಂದಿದರು. ಅವರು ಪತ್ನಿ, ಕೆನರಾ ಎಂಜಿನಿಯರಿಂಗ್ ಕಾಲೇಜಿನ ಆಡಳಿತಾಧಿಕಾರಿ, ಪತ್ರಕರ್ತ ಗಣೇಶ್ ಕಾಮತ್ ಎಂ. ಸಹಿತ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ತಮ್ಮ 13ನೇ ವಯಸ್ಸಿನಲ್ಲೇ ಭಜನೆಯಲ್ಲಿ ಆಸಕ್ತಿ ಹೊಂದಿ, ಇಂಪಾಗಿ ಹಾಡುವ ಕಲೆಯನ್ನು ಕರಗತಮಾಡಿಕೊಂಡಿದ್ದ ಅವರು 1962ರಲ್ಲಿ ಸಮಾಜ ಸೇವಕ ಜಿ.ವಿ. ಪೈ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸ್ಥಾಪಕ ಸದಸ್ಯರಾಗಿ, ಮುಂದೆ ಅಧ್ಯಕ್ಷ, ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದವರು.

ಕಾರ್ಕಳ ಗೋಪಾಲಕೃಷ್ಣ ಮಲ್ಯರಿಂದ ಹಾರ್ಮೋನಿಯಂ ಶಿಕ್ಷಣ ಪಡೆದ ಅವರು ‘ಮೂಡುವೇಣುಪುರ’ ನಾಮಾಂಕಿತದಲ್ಲಿ 300ಕ್ಕೂ ಅಧಿಕ ಕನ್ನಡ - ಕೊಂಕಣಿ ಭಜನೆಗಳನ್ನು ರಚಿಸಿ, ರಾಗ ಸಂಯೋಜಿಸಿ ಹಾಡುತ್ತ ಬಂದವರು. ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನ 2011ರಲ್ಲಿ ಸಂಘಟಿಸಿದ ಕೀರ್ತನ ಕಮ್ಮಟ ಸಂದರ್ಭ ಉಮೇಶ್ ಕಾಮತ್ ಸಮ್ಮಾನ ಸ್ವೀಕರಿಸಿದ್ದರು.

1979ರಿಂದ ಪುರಸಭಾ ಮಾರುಕಟ್ಟೆಯಲ್ಲಿ ಮಾರುತಿ ಸ್ಟೋರ್ಸ್‌ ಎಂಬ ಪಂಪ್‌ಸೆಟ್, ಟಿಲ್ಲರ್, ಸೈಕಲ್, ಇಲೆಕ್ಟ್ರಿಕಲ್ ಬಿಡಿಭಾಗಗಳ ವ್ಯಾಪಾರ ಮಳಿಗೆ ಸ್ಥಾಪಿಸಿ ನಡೆಸುತ್ತ ಬಂದಿದ್ದ ಅವರು ‘ಪಂಪ್‌ಸೆಟ್ ಡಾಕ್ಟರ್’ ಎಂದೇ ಹೆಸರಾಗಿದ್ದರು.

ಮೂಡುಬಿದಿರೆ ಶ್ರೀ ವೆಂಕಟರಮಣ ಹನುಮಂತ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಅವರು 2000-2010ರ ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು. ಕೊಂಕಣಿ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಉಮೇಶ ಕಾಮತ್ ಅವರು 25ಕ್ಕೂ ಅಧಿಕ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದು ವಿಶೇಷವಾಗಿ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ‘ವಧೂ ಪರೀಕ್ಷಾ’ ಕೊಂಕಣಿ ನಾಟಕದಲ್ಲಿ ಶೀನಣ್ಣನ ಪಾತ್ರದ ಮೂಲಕ ತಮ್ಮ ಪ್ರತಿಭೆ ಮೆರೆದಿದ್ದ ಅವರು ‘ತೀ ಮೆಗ್ಗೆಲಿ’ ಕೊಂಕಣಿ ನಾಟಕ ರಚಿಸಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿಯೂ ಗಮನ ಸೆಳೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X