Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲಭೆ ಪ್ರಚೋದಿಸುವ ಯೋಜನೆ ಕುರಿತ ಗುಪ್ತ...

ಗಲಭೆ ಪ್ರಚೋದಿಸುವ ಯೋಜನೆ ಕುರಿತ ಗುಪ್ತ ಮಾಹಿತಿಯನ್ನು ರಕ್ಷಣಾ ಸಚಿವರು ಗೃಹ ಸಚಿವರೊಂದಿಗೆ ಹಂಚಿಕೊಳ್ಳಲಿ

ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ14 July 2018 10:02 PM IST
share
ಗಲಭೆ ಪ್ರಚೋದಿಸುವ ಯೋಜನೆ ಕುರಿತ ಗುಪ್ತ ಮಾಹಿತಿಯನ್ನು ರಕ್ಷಣಾ ಸಚಿವರು ಗೃಹ ಸಚಿವರೊಂದಿಗೆ ಹಂಚಿಕೊಳ್ಳಲಿ

ಹೊಸದಿಲ್ಲಿ, ಜು.14: ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಯೋಜನೆ ಕುರಿತ ಗುಪ್ತ ಮಾಹಿತಿಯನ್ನು ರಕ್ಷಣಾ ಸಚಿವೆ ಸೀತಾರಾಮನ್ ಗೃಹ ಸಚಿವರೊಂದಿಗೆ ಹಂಚಿಕೊಳ್ಳಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ. ಪಕ್ಷಗಳ ಮತ್ತು ವ್ಯಕ್ತಿಗಳ ಧಾರ್ಮಿಕ ಸಂಪರ್ಕದ ಬಗ್ಗೆ ತನಿಖೆ ನಡೆಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಾಕಷ್ಟು ಸಮಯಾವಕಾಶವಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕೋಮು ಸೌಹಾರ್ದಕ್ಕೆ ಭಂಗ ಉಂಟುಮಾಡುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಚಿದಂಬರಂ ಪ್ರತಿಕ್ರಿಯೆ ನೀಡುತ್ತಿದ್ದರು. ಪಾಕಿಸ್ತಾನದ ಸದ್ದಡಗಿಸಿದ ಮೇಲೆ, ಭಯೋತ್ಪಾದನೆಯನ್ನು ನಾಶಗೊಳಿಸಿದ ಬಳಿಕ, ಒಳನುಸುಳುವಿಕೆಯನ್ನು ತಡೆಗಟ್ಟಿದ ನಂತರ ಹಾಗೂ ರಫೇಲ್ ಯುದ್ಧವಿಮಾನವನ್ನು ಪಡೆದುಕೊಂಡ ಬಳಿಕ ರಕ್ಷಣಾ ಸಚಿವರಿಗೆ ಪಕ್ಷಗಳು ಹಾಗೂ ವ್ಯಕ್ತಿಗಳ ಧಾರ್ಮಿಕ ಸಂಪರ್ಕದ ಬಗ್ಗೆ ತನಿಖೆ ನಡೆಸಲು ಸಾಕಷ್ಟು ಸಮಯಾವಕಾಶವಿದೆ ಎಂದವರು ವ್ಯಂಗ್ಯವಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಧರ್ಮದ ವಿಷಯವನ್ನು ಮುಂದಿಟ್ಟು ಆಟವಾಡುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಚಿವೆ ಆರೋಪಿಸಿದ್ದರು. ಕಾಂಗ್ರೆಸ್ ಪಕ್ಷ ಕೋಮು ವಿಭಜನೆಯ ಅಪಾಯಕಾರಿ ಆಟ ಆಡುತ್ತಿದೆ. ಧರ್ಮದ ವಿಷಯವನ್ನು ಮುಂದಿಟ್ಟುಕೊಂಡಿದೆ. ಇದು 1947ರಲ್ಲಿ ದೇಶ ವಿಭಜನೆಯಾದ ಸಂದರ್ಭದಲ್ಲಿ ದೇಶದಲ್ಲಿದ್ದ ಕೋಮು ಜಗಳದ ಪರಿಸ್ಥಿತಿಗೆ ಕಾರಣವಾಗುವ ಅಪಾಯವಿದೆ. ಈಗಿನ ಸಮಯ ಮತ್ತು 2019ರ ಲೋಕಸಭಾ ಚುನಾವಣೆಯ ಮಧ್ಯದ ಅವಧಿಯಲ್ಲಿ ಸೌಹಾರ್ದ ಕೆಡಿಸುವ ಯಾವುದೇ ಘಟನೆ ಸಂಭವಿಸಿದರೆ ಅದಕ್ಕೆ ಕಾಂಗ್ರೆಸ್ ಪಕ್ಷವೇ ಸಂಪೂರ್ಣ ಹೊಣೆಯಾಗಿದೆ ಎಂದು ನಿರ್ಮಲಾ ಹೇಳಿದ್ದರು.

ಕಾಂಗ್ರೆಸ್ ಮತ್ತೆ ಭಾರತ ವಿಭಜಿಸುವ ಮನಸ್ಥಿತಿಗೆ ಮರಳಿದಂತೆ ಕಾಣಿಸುತ್ತದೆ. 2019ರ ಚುನಾವಣೆಯನ್ನು ಅವರು ಧರ್ಮದ ಆಧಾರದಲ್ಲಿ ಎದುರಿಸುವುದು ಸ್ಪಷ್ಟವಾಗಿದೆ. ಇದಕ್ಕೆ ಈಗಲೇ ಅಡಿಗಲ್ಲು ಹಾಕಲಾಗಿದೆ ಎಂದ ಅವರು, ಬುಧವಾರ ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ನಡೆಸಿದ್ದ ಸಂವಾದದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ ಮುಸ್ಲಿಮರ ಪಕ್ಷ ಎಂದು ಹೇಳಿರುವುದನ್ನು ಉಲ್ಲೇಖಿಸಿದರು. ಇತ್ತೀಚೆಗೆ ರಾಹುಲ್, ಮಹಾತ್ಮಾ ಗಾಂಧೀಜಿ ಜನಿವಾರ ಧಾರಿ ಎಂದು ಹೇಳಿಕೆ ನೀಡಿದ್ದರು. ಒಂದು ಕಡೆ ನೀವು ಜನಿವಾರಧಾರಿಗಳಾಗುತ್ತೀರಿ, ಇನ್ನೊಂದೆಡೆ ಮುಸ್ಲಿಮ್‌ ಧಾರಿಗಳಾಗುತ್ತೀರಿ. ಜನತೆಯ ನಂಬಿಕೆಯ ಜೊತೆ ನೀವು ಆಟವಾಡುತ್ತಿದ್ದೀರಿ ಎಂದು ರಾಹುಲ್ ಗಾಂಧಿಯವರನ್ನು ಟೀಕಿಸಿದರು. ಆದರೆ ರಾಹುಲ್ ಈ ರೀತಿಯ ಹೇಳಿಕೆ ನೀಡಿರಲಿಲ್ಲ ಎಂದು ಬುಧವಾರ ಮುಸ್ಲಿಮ್ ಬುದ್ಧಿಜೀವಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇತಿಹಾಸತಜ್ಞ ಸಯ್ಯದ್ ಇರ್ಫಾನ್ ಹಬೀಬ್ ಹೇಳಿದ್ದಾರೆ. ಈ ವಿಷಯವೇ ಅಲ್ಲಿ ಚರ್ಚೆಗೆ ಬರಲಿಲ್ಲ. ಇದೊಂದು ಕಪೋಲ ಕಲ್ಪಿತ ಹೇಳಿಕೆಯಾಗಿದೆ ಎಂದವರು ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಸಮಾಜದಲ್ಲಿ ಆತಂಕದ ಸ್ಥಿತಿ ಮೂಡಿಸುವ ಮೂಲಕ ವಾಸ್ತವಿಕ ಸಮಸ್ಯೆಗಳಿಂದ ಜನತೆಯ ಚಿತ್ತವನ್ನು ಬೇರೆಡೆಗೆ ಸೆಳೆಯಲು ಸಚಿವೆ ಪ್ರಯತ್ನಿಸುತ್ತಿದ್ದಾರೆ ಎಂದಿದೆ. ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ದೇಶವನ್ನು ಧ್ರುವೀಕರಣಗೊಳಿಸುವ ಪ್ರಧಾನಿ ಮೋದಿಯವರ ಅಜೆಂಡಾದ ಮುಂದುವರಿದ ಭಾಗವಾಗಿದೆ. ಶೀಘ್ರವೇ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲು ಸರಕಾರ ಹಿಂಜರಿಯುತ್ತಿರುವುದರಿಂದ ವಿವಾದ ಹುಟ್ಟುಹಾಕಿ ವಾಸ್ತವಾಂಶವನ್ನು ಮರೆಮಾಚಲು ಸಚಿವರು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಷ್ಮಿತಾ ದೇವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X