Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ತಗ್ಗದ ಮುಂಗಾರು ಮಳೆಯ...

ಮಲೆನಾಡಿನಲ್ಲಿ ತಗ್ಗದ ಮುಂಗಾರು ಮಳೆಯ ಅಬ್ಬರ: ಹಲವೆಡೆ ಪ್ರವಾಹ

ವಾರ್ತಾಭಾರತಿವಾರ್ತಾಭಾರತಿ14 July 2018 11:41 PM IST
share
ಮಲೆನಾಡಿನಲ್ಲಿ ತಗ್ಗದ ಮುಂಗಾರು ಮಳೆಯ ಅಬ್ಬರ: ಹಲವೆಡೆ ಪ್ರವಾಹ

ಶಿವಮೊಗ್ಗ, ಜು. 14: ಕಳೆದ ಕೆಲ ದಿನಗಳಿಂದ ಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆಯ ಆರ್ಭಟ ಕಡಿಮೆಯಾಯಿತು ಎನ್ನುತ್ತಿದ್ದಂತೆ, ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರ ವರ್ಷಧಾರೆಯಾಗುತ್ತಿದೆ. ಕಳೆದ ರಾತ್ರಿಯಿಂದ ಹಲವೆಡೆ ಭಾರೀ ಮಳೆಯಾಗಲಾರಂಭಿಸಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿ ಭೀತಿ ಎದುರಾಗಿದೆ. 

ಧಾರಾಕಾರ ಮಳೆಯಿಂದ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಹಲವೆಡೆ ಮನೆಗಳ ಗೋಡೆಗಳು, ಗುಡ್ಡಗಳು ಕುಸಿದು ಬೀಳುತ್ತಿವೆ. ಮತ್ತೊಂದೆಡೆ ನದಿಗಳು ಉಕ್ಕಿ ಹರಿಯುತ್ತಿವೆ. ತುಂಗಾ, ವರದಾ, ಮಾಲತಿ ನದಿಗಳು ಹಲವೆಡೆ ಪ್ರವಾಹ ಸೃಷ್ಟಿಸಿವೆ. ಅದರಲ್ಲಿಯೂ ವರದಾ ನದಿಯ ಪ್ರವಾಹದಿಂದ ಸಾಗರ, ಸೊರಬ ತಾಲೂಕು ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. 

ತುಂಗಾ ನದಿಯ ಪ್ರವಾಹ ಸ್ಥಿತಿ ಮುಂದುವರಿದಿದೆ. ತುಂಗಾ ಡ್ಯಾಂನಿಂದ 50 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತೀರ್ಥಹಳ್ಳಿ ತಾಲೂಕಿನ ಹಲವೆಡೆ ತುಂಗಾ ಹಾಗೂ ಮಾಲತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿಪಾತ್ರದ ತಗ್ಗು ಪ್ರದೇಶಗಳ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟು ಮಾಡಿದೆ. 

ಆಗುಂಬೆಯ ಘಾಟಿ ರಸ್ತೆಯ 14 ನೇ ತಿರುವಿನಲ್ಲಿ ತಡೆಗೋಡೆ ಕುಸಿದು ಬಿದ್ದ ಪ್ರದೇಶಕ್ಕೆ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರರವರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ರಸ್ತೆ ಕುಸಿದ ಪ್ರದೇಶದಲ್ಲಿ ವ್ಯಾಪಕ ಮುನ್ನೆಚ್ಚರಿಕೆ ಕ್ರಮವನ್ನು ತಾಲೂಕು ಆಡಳಿತ ಕೈಗೊಂಡಿದೆ. ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಸರಕು-ಸಾಗಾಣೆ ವಾಹನಗಳ ಪ್ರವೇಶದ ಮೇಲೆ ನಿರ್ಬಂಧ ಹೇರಲಾಗಿದೆ. 

ಮಳೆ ವಿವರ: ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಏಳು ತಾಲೂಕು ಕೇಂದ್ರ ವ್ಯಾಪ್ತಿಯಲ್ಲಿ ಬಿದ್ದ ಒಟ್ಟಾರೆ ಸರಾಸರಿ ಮಳೆಯ ಪ್ರಮಾಣ, 37.81 ಮಿಲಿ ಮೀಟರ್ (ಮಿ.ಮೀ.) ಆಗಿದೆ. 

ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತ...
ಸಾಗರ ತಾಲೂಕಿನಲ್ಲಿ ಎಡೆಬಿಡದೆ ಬೀಳುತ್ತಿರುವ ವರ್ಷಧಾರೆಯಿಂದ ವರದಾ, ಕನ್ನಹೊಳೆ ಸೇರಿದಂತೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಕಾನಲೆ, ಸೈದೂರು, ಹಿರೆನಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಡಗಳಲೆ, ಗಡೆಮನೆ, ಅತ್ತಿಸಾಲ, ಹಿರೆನಲ್ಲೂರು, ಕಾಗೋಡು, ಸಣ್ಣಮನೆ, ಸೂರುಗುಪ್ಪೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಾವಿರಾರು ಎಕರೆ ಕೃಷಿ ಭೂಮಿ ಹಾಗೂ ತೋಟ ಜಲಾವೃತವಾಗಿದೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮತ್ತೊಂದೆಡೆ ಸೊರಬ ತಾಲೂಕಿನ ಕಡಸೂರು ಮೊದಲಾದೆಡೆಯೂ ಪ್ರವಾಹ ಉಂಟಾಗಿದ್ದು, ನೂರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿರುವ ಮಾಹಿತಿಗಳು ಬಂದಿವೆ. 

ವಿದ್ಯುತ್ ವ್ಯತ್ಯಯ : ಕತ್ತಲೆಯಲ್ಲಿ ಮುಳುಗಿದ ಆಗುಂಬೆ
ದಕ್ಷಿಣ ಭಾರತದ ಚಿರಾಪುಂಜಿ ಖ್ಯಾತಿಯ ಆಗುಂಬೆಯಲ್ಲಿ, ಕಳೆದ ಒಂದು ವಾರದಿಂದ ಎಡಬಿಡದೆ ಬೀಳುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ತತ್ತರಿಸಿ ಹೋಗಿದೆ. ಮತ್ತೊಂದೆಡೆ ಗಾಳಿ ಸಹಿತ ಬೀಳುತ್ತಿರುವ ಮಳೆಯಿಂದ ಹಲವೆಡೆ ಮರಗಳು ವಿದ್ಯುತ್ ತಂತಿ ಮೇಲೆ ಉರುಳಿ ಬೀಳುತ್ತಿವೆ. ಇದರಿಂದ ಆಗುಂಬೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಕಂಡುಬಂದಿದೆ. ಕಳೆದೆರೆಡು ದಿನಗಳಿಂದ ತೀವ್ರ ಸಮಸ್ಯೆ ಎದುರಿಸುವಂತಾಗಿದ್ದು, ಸುಗಮ ವಿದ್ಯುತ್ ಪೂರೈಕೆಗೆ ಸ್ಥಳೀಯ ಮೆಸ್ಕಾಂ ಸಿಬ್ಬಂದಿಗಳು ಇನ್ನಿಲ್ಲದ ಹರಸಾಹಸ ನಡೆಸುವಂತಾಗಿದೆ. 

ಹೊಸನಗರದಲ್ಲಿ ಕೊಟ್ಟಿಗೆ ಮೇಲೆ ಬಿದ್ದ ತೆಂಗಿನಮರ
ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಾಹ್ಮಣವಾರ ಗ್ರಾಮದಲ್ಲಿ ಗಾಳಿ-ಮಳೆಯಿಂದ, ದಿವಾಕರ ಎಂಬುವರ ಮನೆಯ ಕೊಟ್ಟಿಗೆ ಮೇಲೆ ತೆಂಗಿನಮರವೊಂದು ಉರುಳಿ ಬಿದ್ದಿದೆ. ಇದರಿಂದ ಕೊಟ್ಟಿಗೆಯ ಮೇಲ್ಛಾವಣಿಗೆ ಹಾನಿಯಾಗಿದೆ. ಸಾವಿರಾರು ರೂ. ನಷ್ಟ ಸಂಭವಿಸಿದೆ. ಉಳಿದಂತೆ ಯಾವುದೇ ಅನಾಹುತದ ಮಾಹಿತಿಗಳು ಲಭ್ಯವಾಗಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X