Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ16 July 2018 12:09 AM IST
share
ಓ ಮೆಣಸೇ...

ಸಮ್ಮಿಶ್ರ ಸರಕಾರ ಯಾವಾಗ ಬೀಳುತ್ತದೆ ಎಂದು ಜನ ಕಾಯುತ್ತಿದ್ದಾರೆ - ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ

ಸೂಟ್‌ಕೇಸ್ ಹಿಡಿದು ತಮ್ಮ ಜನ ಕಾಯುತ್ತಿದ್ದಾರೆ ಎಂದಾಯಿತು.

---------------------
ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಜಾತಿ ವ್ಯವಸ್ಥೆ ತಾಂಡವವಾಡುತ್ತಿದೆ - ಬಿ.ಎಸ್. ವಿಜಯೇಂದ್ರ, ಬಿಜೆಪಿ ನಾಯಕ
ಸಾಮಾಜಿಕ ವ್ಯವಸ್ಥೆಯಲ್ಲಿ ತಾಂಡವವಾಡಿದರೆ ಸರಿ ಅಂತಾಯಿತು.

---------------------
ನನ್ನದು ಸ್ವಾತಿ ನಕ್ಷತ್ರ, ಆದ್ದರಿಂದ ಯಾರು ಮಾಟ, ಮಂತ್ರ ಮಾಡಿದರೂ ಅದು ನನಗೆ ತಟ್ಟುವುದಿಲ್ಲ -ಎಚ್.ಡಿ. ರೇವಣ್ಣ, ಸಚಿವ
ಜನರ ದುರದೃಷ್ಟ.

---------------------
ಪ್ರಧಾನಿ ನರೇಂದ್ರ ಮೋದಿ ‘ಹಿಂಸೆಯ ಪೂಜಾರಿ’ - ಕಪಿಲ್ ಸಿಬಲ್, ಕಾಂಗ್ರೆಸ್ ನಾಯಕ
ಅವರ ರಾಜಕೀಯ ದೇವರಿಗೆ ನರಬಲಿ ಇಷ್ಟವಂತೆ.

---------------------

2019ರ ಲೋಕಸಭಾ ಚುನಾವಣೆಯಲ್ಲಿ ಶೇ.30-35ರಷ್ಟು ಅಲ್ಪಸಂಖ್ಯಾತರು ಬಿಜೆಪಿ ಬೆಂಬಲಿಸಲಿದ್ದಾರೆ -ಮುಖ್ತಾರ್ ಅಬ್ಬಾಸ್ ನಖ್ವಿ, ಕೇಂದ್ರ ಸಚಿವ
ದೇಶದಲ್ಲಿರುವ ಉಳಿದೆಲ್ಲ ಬಹುಸಂಖ್ಯಾತರು ಬಿಜೆಪಿಯನ್ನು ವಿರೋಧಿಸಲಿದ್ದಾರೆ ಎಂದಾಯಿತು.

---------------------

ಮರ್ಯಾದಾ ಪುರುಷ ಶ್ರೀರಾಮ ಬಂದರೂ ಭಾರತದಲ್ಲಿ ಅತ್ಯಾಚಾರ ತಡೆಯಲು ಸಾಧ್ಯವಿಲ್ಲ. -ಸುರೇಂದ್ರ ನಾರಾಯಣ್ ಸಿಂಗ್, ಉತ್ತರಪ್ರದೇಶದ ಬಿಜೆಪಿ ಶಾಸಕ

ದೇವಸ್ಥಾನದಲ್ಲೇ ಸಾಮೂಹಿಕ ಅತ್ಯಾಚಾರ ನಡೆಯುತ್ತಿರುವುದು ಅದೇ ಧೈರ್ಯದಲ್ಲಿ.

---------------------
ಬಿಜೆಪಿಗೆ ನಿಜವಾಗಿಯೂ ಹಿಂದುತ್ವದ ಬಗ್ಗೆ ಕಾಳಜಿ ಇದ್ದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿಯೇ ಚುನಾವಣೆಗೆ ಬರಲಿ -ಎಸ್.ಕೆ. ಬೆಳ್ಳುಬ್ಬಿ, ಮಾಜಿ ಸಚಿವ

ಅವರಿಗಿಲ್ಲದ ಆತುರ ನಿಮಗೇಕೆ?
---------------------

ರಾಜ್ಯದಲ್ಲಿ ವಿರೋಧಪಕ್ಷ ಮಲಗಿದೆ. -ಡಿ.ಕೆ. ಶಿವಕುಮಾರ್, ಸಚಿವ
ಕೇಂದ್ರದಲ್ಲಿ ಸತ್ತಿದೆ ಎಂಬ ವದಂತಿಯಿದೆ.

---------------------

ನಮ್ಮ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯನ್ನು ಆಹ್ವಾನಿಸಲು ನಮಗೆ ಯಾವುದೇ ಹಿಂಜರಿಕೆಯಿರಲಿಲ್ಲ -ಮೋಹನ್ ಭಾಗವತ್, ಆರೆಸ್ಸೆಸ್ ಸರ ಸಂಘಚಾಲಕ

ಭಾಗವಹಿಸಲು ಮುಖರ್ಜಿಗೂ ಹಿಂಜರಿಕೆಯಿದ್ದಂತೆ ಕಾಣುತ್ತಿರಲಿಲ್ಲ.

---------------------

ಗೋವು ಸುಖವಾಗಿದ್ದರೆ ಭೂಮಿ ಸ್ವರ್ಗ -ರಾಘವೇಶ್ವರ ಭಾರತಿ ಸ್ವಾಮೀಜಿ, ರಾಮಚಂದ್ರಾಪುರ ಮಠ
ತಮ್ಮ ಹಟ್ಟಿಯಲ್ಲಿರುವ ಗೋವುಗಳು ಬೇರೇನೋ ಆರೋಪಿಸುತ್ತಿವೆ. .
---------------------
ಕೆಪಿಸಿಸಿ ಅಧ್ಯಕ್ಷ ಹುದ್ದೆ ನನ್ನ ಪಾಲಿಗೆ ಬರುತ್ತದೆ ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ -ದಿನೇಶ್ ಗುಂಡೂರಾವ್, ಕೆಪಿಸಿಸಿ ನೂತನ ಅಧ್ಯಕ್ಷ
ಕನಸಿನಲ್ಲಿ ಮುಖ್ಯಮಂತ್ರಿ ಹುದ್ದೆಯೇ ಕಾಣುತ್ತಿದ್ದಿರಬೇಕು.

---------------------

ನಮ್ಮ ಸೋಲಿಗೆ ಬಿಜೆಪಿ, ಆರೆಸ್ಸೆಸ್ ಅಪಪ್ರಚಾರ ಕಾರಣ - ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಜೊತೆಗೆ ಕಾಂಗ್ರೆಸ್ ನಾಯಕರೂ ಸೇರಿದ್ದು ನಿಮಗೆ ತಿಳಿದಿಲ್ಲವೇ?
---------------------
ಬಜೆಟ್ ಘೋಷಣೆ ಬೆಟ್ಟದಷ್ಟು, ಕೊಟ್ಟದ್ದು ಮುಷ್ಟಿಯಷ್ಟು -ಸಿ.ಟಿ. ರವಿ, ಶಾಸಕ
ಮುಖ್ಯಮಂತ್ರಿಯ ಬಳಿಯಿರುವುದು ಮುಷ್ಟಿಯಷ್ಟು ಶಾಸಕರಷ್ಟೇ ಅಲ್ಲವೇ?
---------------------
ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ -ಡಾ. ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ 
ಆ ತಪ್ಪು ಕಲ್ಪನೆಯಿಂದಲೇ ಕಾಂಗ್ರೆಸ್ ಅಪ್ರಸ್ತುತವಾಗುತ್ತಿದೆ.

---------------------
ಕಾಂಗ್ರೆಸ್ 70 ವರ್ಷಗಳಿಂದ ಒಂದು ನಿರ್ದಿಷ್ಟ ಕುಟುಂಬದ ಏಳಿಗೆಗಾಗಿ ರೈತರನ್ನು ದುರ್ಬಳಕೆ ಮಾಡಿಕೊಂಡಿದೆ - ನರೇಂದ್ರ ಮೋದಿ, ಪ್ರಧಾನಿ
ಅದಕ್ಕಾಗಿ ನೀವು ಅಂಬಾನಿ ಕುಟುಂಬಕ್ಕಾಗಿ ದುರ್ಬಳಕೆ ಮಾಡಿಕೊಳ್ಳಬೇಕೇ?
---------------------
2019ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ‘ಹಿಂದೂ ಪಾಕಿಸ್ತಾನ’ ಆಗುತ್ತದೆ - ಶಶಿ ತರೂರ್, ಕಾಂಗ್ರೆಸ್ ನಾಯಕ
ಪಾಕಿಸ್ತಾನವೇ ಸಂಘಪರಿವಾರಕ್ಕೆ ಮಾದರಿಯಂತೆ.

---------------------
ನಾನಲ್ಲ, ನನ್ನ ಡೆಡ್‌ಬಾಡಿ ಕೂಡ ಬಿಜೆಪಿಗೆ ಹೋಗಲ್ಲ - ಡಾ. ಎಚ್.ಸಿ. ಮಹದೇವಪ್ಪ, ಮಾಜಿ ಸಚಿವ
ಬಿಜೆಪಿಯೇನು ಮೋರ್ಚರಿಯೇ?
---------------------

ಜಮ್ಮು ಕಾಶ್ಮೀರದ ಜನರಿಗೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆಯಿದೆ -ಮೆಹಬೂಬ ಮುಫ್ತಿ, ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ
ಅನುಮಾನವಿರುವುದು ತಮ್ಮ ಬಗ್ಗೆ ಮಾತ್ರ.

---------------------
ನಮ್ಮ ದೇಶದ ಇಂದಿನ ಪರಿಸ್ಥಿತಿಗೆ ಮಾಧ್ಯಮಗಳೇ ನೇರ ಕಾರಣ -ಶೋಭಾ ಕರಂದ್ಲಾಜೆ, ಸಂಸದೆ
ತಮ್ಮ ಪರಿಸ್ಥಿತಿಗೆ ಮಾಧ್ಯಮಗಳು ಬಿಜೆಪಿಯನ್ನು ಹೊಣೆ ಮಾಡುತ್ತಿವೆೆ.

---------------------

ನಾನು ಪ್ರಧಾನಿ ಹುದ್ದೆ ರೇಸ್‌ನಲ್ಲಿಲ್ಲ - ನಿತಿನ್ ಗಡ್ಕರಿ, ಕೇಂದ್ರ ಸಚಿವ
ರೇಸ್ ಗೆಲ್ಲುವ ಭರವಸೆಯಿಲ್ಲ ಎಂದು ಕಾಣುತ್ತದೆ.

---------------------

ದೇಶಕ್ಕೆ ಸಮವಸ್ತ್ರ ತೊಡಿಸಲು ಬಿಜೆಪಿ - ಆರೆಸ್ಸೆಸ್ ಸಂಚು ರೂಪಿಸುತ್ತಿದೆ -ಜೈರಾಮ್ ರಮೇಶ್, ಕಾಂಗ್ರೆಸ್ ಮುಖಂಡ
ಅರ್ಥವ್ಯವಸ್ಥೆಯ ಬಿಕ್ಕಟ್ಟು ಹೀಗೆ ಮುಂದುವರಿದರೆ, ದೇಶ ಲಂಗೋಟಿಯನ್ನೇ ಸಮವಸ್ತ್ರವಾಗಿ ಧರಿಸಬೇಕಾಗುತ್ತದೆ.

---------------------
ಸಚಿವನಾಗಿರಲಿ, ಶಾಸಕನಾಗಿರಲಿ ನಾನು ಯಾವಾಗಲೂ ಪವರ್‌ಫುಲ್ - ಎಂ.ಬಿ. ಪಾಟೀಲ್, ಮಾಜಿ ಸಚಿವ
ಶರಣನಾಗಿಯೂ ಪವರ್‌ಫುಲ್ ಆಗಿ ಉಳಿಯಿರಿ.

---------------------

ರಾಷ್ಟ್ರೀಯ ಪಕ್ಷ ಬಿಜೆಪಿ ಹುಲಿ ಇದ್ದಂತೆ -ಅನಂತ ಕುಮಾರ್ ಹೆಗಡೆ, ಕೇಂದ್ರ ಸಚಿವ
ಅದು ಗೋವಿನ ಮುಖವಾಡದಲ್ಲಿರುವ ನರಭಕ್ಷಕ ಹುಲಿ.
 

share
ಪಿ.ಎ.ರೈ
ಪಿ.ಎ.ರೈ
Next Story
X