Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುಮಾರಸ್ವಾಮಿಗೆ ಬದ್ಧತೆಯಿದ್ದರೆ...

ಕುಮಾರಸ್ವಾಮಿಗೆ ಬದ್ಧತೆಯಿದ್ದರೆ ಲೋಕಾಯುಕ್ತವನ್ನು ಬಲಪಡಿಸಲಿ: ಮಾಜಿ ಸ್ಪೀಕರ್ ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ16 July 2018 9:47 PM IST
share
ಕುಮಾರಸ್ವಾಮಿಗೆ ಬದ್ಧತೆಯಿದ್ದರೆ ಲೋಕಾಯುಕ್ತವನ್ನು ಬಲಪಡಿಸಲಿ: ಮಾಜಿ ಸ್ಪೀಕರ್ ಕೃಷ್ಣ

ಬೆಂಗಳೂರು, ಜು.16: ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬಡವರ ಪರ ಕಾಳಜಿ, ಬದ್ಧತೆಯಿದ್ದರೆ ಲೋಕಾಯುಕ್ತವನ್ನು ಬಲಪಡಿಸಲಿ ಹಾಗೂ ಎ.ಟಿ.ರಾಮಸ್ವಾಮಿ ವರದಿಯನ್ನು ಜಾರಿ ಮಾಡಲು ಮುಂದಾಗಲಿ. ಅದು ಬಿಟ್ಟು ಕಣ್ಣೀರು ಹಾಕುವುದು ಯಾಕೆ ಎಂದು ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಪ್ರಶ್ನಿಸಿದ್ದಾರೆ.

ಸೋಮವಾರ ನಗರದ ಕಸಾಪದಲ್ಲಿ ಕನ್ನಡ ಜನಶಕ್ತಿ ಕೇಂದ್ರದಿಂದ ಆಯೋಜಿಸಿದ್ದ ಹಿರಿಯ ಸಾಹಿತಿ ಪ್ರೊ.ಚಂಪಾಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಜನಪರವಾಗಿ ಕೆಲಸ ಮಾಡುವ ಮನಸ್ಸಿದ್ದರೆ ಹಾಗೂ ಧೈರ್ಯವಿದ್ದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಎರಡು ಕೆಲಸಗಳನ್ನು ಮೊದಲು ಮಾಡಲಿ ಎಂದು ಹೇಳಿದರು. 

ಹಿಂದೆ ನಾನು ಸಭಾಪತಿಯಾಗಿದ್ದಾಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆಗ ನನ್ನ ಬಳಿ ಬಂದ ಅವರು, ಲೋಕಾಯುಕ್ತ ಬಲಪಡಿಸಲು ಅಧಿಕಾರಿಗಳು ವಿರೋಧ ವ್ಯಕ್ತಪಡಿಸುತ್ತಾರೆ ಎಂದಿದ್ದರು. ‘ಕೋಳಿಯನ್ನು ಕೇಳಿ ಮಸಾಲೆ ಅರೆಯುತ್ತಾರೆಯೇ?’ ಎಂದು ನಾನು ನಗೆಯಾಡಿದ್ದೆ. ಆದರೆ ಸರಕಾರಿ ಭೂಮಿ ಕಬಳಿಸಿರುವವರಲ್ಲಿ ಅವರ ಗೆಳೆಯರೇ ಹೆಚ್ಚಿದ್ದರು. ಬಳಿಕ ಸರಕಾರ ಬದಲಾಗಿದ್ದರಿಂದ ಅವರಿಗೆ ಕಾಯ್ದೆ ಮಾಡಲು ಸಾಧ್ಯವಾಗಲಿಲ್ಲ. ಈಗಲಾದರೂ ಮಾಡಲಿ ಎಂದರು. ಇಂದಿನ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಯಾರ ಸ್ಥಾನದಲ್ಲಾದರೂ ಭಗವಂತ ಬಂದು ಕೂತರೂ ಅಧಿಕಾರಿಗಳು ಮಾಡುವ ಭ್ರಷ್ಟಾಚಾರವನ್ನು ನಿಲ್ಲಿಸಲು ಸಾಧ್ಯವಿಲ್ಲ. ಪ್ರಧಾನಿ ಹಾಗೂ ಸಿಎಂ ನಾವು ಪ್ರಾಮಾಣಿಕರು ಎನ್ನುತ್ತಾರೆ. ಆದರೆ, ಅವರ ಅಧಿಕಾರ ಪ್ರಾಮಾಣಿಕವಾಗಿರುವುದಿಲ್ಲ. ನಮ್ಮ ಅಧಿಕಾರ ಪ್ರಾಮಾಣಿಕವಾಗಿದೆ ಎಂದು ಯಾರಾದರೂ ಒಪ್ಪಿಕೊಳ್ಳಲು ತಯಾರಿದ್ದಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು ನೀಚ ರಾಜಕಾರಣಕ್ಕಿಳಿದಿದ್ದಾರೆ. ಎಲ್ಲವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದ ಅವರು, ಮೊದಲ ಬಾರಿಗೆ ಚುನಾವಣೆಗೆ ಸ್ವರ್ಧಿಸಿದ ಸಂದರ್ಭದಲ್ಲಿ 50 ಕೋಟಿ ಆದಾಯ ಘೋಷಣೆ ಮಾಡುತ್ತಾರೆ, ಎರಡನೇ ಬಾರಿ ಅದು 100 ಕೋಟಿಗೆ, ಮೂರನೆ ಬಾರಿ 150 ಕೋಟಿ ಹೀಗೆ ಹೆಚ್ಚುತ್ತಾ ಹೋಗುತ್ತದೆ. ಅಣ್ಣಾ ಹಜಾರೆ ಲೋಕಪಾಲ್ ಮಸೂದೆ ಜಾರಿಗಾಗಿ ತೀವ್ರ ಹೋರಾಟ ಮಾಡಿದರು. ಆದರೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಇದುವರೆಗೂ ಅತ್ತ ಕಣ್ಣೆತ್ತಿ ನೋಡಿಲ್ಲ ಎಂದು ವಿಷಾದಿಸಿದರು.

ಶಾಂತವೇರಿ ಗೋಪಾಲಗೌಡರು ರಾಜಕೀಯದ ದೈತ್ಯ ಕಥೆಯಾಗಿದ್ದಾರೆ. ಶೋಷಿತರ, ಬಡ ಗೇಣಿದಾರರ ಅವರ ಹೋರಾಟ ಇಂದಿಗೂ ನೆನೆಸಿಕೊಳ್ಳಲಾಗುತ್ತಿದೆ. ವಿಧಾನಸೌಧದ ಹೊರಗೆ ಮತ್ತು ಒಳಗೆ ಅವರಿಗೆ ತಮ್ಮದೇ ಆದ ಗೌರವವನ್ನು ಹೊಂದಿದ್ದು, ಪ್ರಾಮಾಣಿಕ ಹೋರಾಟಗಾರರಾಗಿದ್ದರು. ಆದರೆ, ಇತ್ತೀಚಿಗೆ ಪ್ರಗತಿಪರರನ್ನು ನೋಡಿದರೆ ಗೊಂದಲವುಂಟಾಗುತ್ತಿದೆ ಎಂದು ಕೃಷ್ಣ ಹೇಳಿದರು.

ಇಂದು ನಾವು ಪ್ರಜಾಪ್ರಭುತ್ವದಲ್ಲಿ ಬದುಕಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಪಕ್ಷಗಳೆಲ್ಲವೂ ವಾಣಿಜ್ಯ ಕೇಂದ್ರಗಳಾಗಿದ್ದು, ಗೆಲ್ಲುವವರಿಗೆ ಟಿಕೆಟ್ ನೀಡುತ್ತೇವೆ ಎನ್ನುತ್ತಾರೆ. ಆದರೆ, ನೂರಾರು ಕೋಟಿ ಇರುವವರು ಮಾತ್ರ ಗೆಲ್ಲುವವರು ಎಂದು ತೀರ್ಮಾನಿಸಲಾಗಿದೆ. ಇದೀಗ ಎಲ್ಲರೂ ಪ್ರಜಾಪ್ರಭುತ್ವದ ಹೆಸರನ್ನು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ನಮ್ಮ ದೇಶದಲ್ಲಿನ ಅಧಿಕಾರಸ್ಥರು ಹಾಗೂ ವಿದ್ಯಾವಂತರು ಹೆಚ್ಚು ಜಾತಿವಾದಿಗಳಾಗಿದ್ದಾರೆ ಎಂದು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X