Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಚಾರಿ ಗ್ರಂಥಾಲಯಗಳು ಸ್ವಸ್ಥ ಸಮಾಜದ...

ಸಂಚಾರಿ ಗ್ರಂಥಾಲಯಗಳು ಸ್ವಸ್ಥ ಸಮಾಜದ ಗೌರವದ ಸಂಕೇತ: ಪ್ರೊ. ಸೋಮಣ್ಣ

ಶಾಂತಿ ಪ್ರಕಾಶನದ ಶಾಂತಿ ಸಾಹಿತ್ಯವಾಹಿನಿ-4 ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 July 2018 11:19 PM IST
share
ಸಂಚಾರಿ ಗ್ರಂಥಾಲಯಗಳು ಸ್ವಸ್ಥ ಸಮಾಜದ ಗೌರವದ ಸಂಕೇತ:  ಪ್ರೊ. ಸೋಮಣ್ಣ

ಮಂಗಳೂರು, ಜು. 16: ಶಾಂತಿಯ ಸಂದೇಶ ಸಾರುವ ಸಂಚಾರಿ ಗ್ರಂಥಾಲಯಗಳು ಸ್ವಸ್ಥ ಸಮಾಜದ ಗೌರವದ ಸಂಕೇತವಾಗಿದೆ.  ಆಧುನಿಕ ಜಗತ್ತಿನ ಎಲ್ಲಾ ದೇಶಗಳಲ್ಲೂ, ಭಾರತದ ಎಲ್ಲಾ ಪ್ರದೇಶಗಳಲ್ಲೂ ಸಾರ್ವಜನಿಕ ಗ್ರಂಥಾಲಯಗಳಿವೆ.  ಆದರೆ ತಾಂತ್ರಿಕತೆಯ ಬೆನ್ನ ಹಿಂದೆ ಓಡುತ್ತಿರುವ ಪ್ರಸ್ತುತ ಸಮಾಜಕ್ಕೆ ಇಂದು ಸಂಚಾರಿ ಗ್ರಂಥಾಲಯಗಳು ಅತೀ ಅಗತ್ಯ ಯೋಜನೆಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊಫೆಸರ್ ಸೋಮಣ್ಣ ಹೇಳಿದರು.

ತೊಕ್ಕೊಟ್ಟಿನ ಬಬ್ಬುಕಟ್ಟೆಯ ಹಿರಾ ಕ್ಯಾಂಪಸ್‍ನಲ್ಲಿ ಮಂಗಳೂರಿನ ಶಾಂತಿ ಪ್ರಕಾಶನದ ವತಿಯಿಂದ ಶಾಂತಿ ಸಾಹಿತ್ಯವಾಹಿನಿ-4 ಯನ್ನು ಉದ್ಘಾಟನೆಗೈದು, ಬಳಿಕ ನಡೆದ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಪುಸ್ತಕ ಓದುವಿಕೆಯ ಮೂಲಕ ವಿದ್ಯಾರ್ಥಿಗಳು ತಮ ಜ್ಞಾನವನ್ನು ಅಭಿವೃದ್ಧಿಗೊಳಿಸಬೇಕು.  ಸಾಹಿತ್ಯದ ಮುಖಾಂತರ ವಿದ್ಯಾರ್ಥಿಗಳನ್ನು ಅವರ ಮನಸ್ಸುಗಳನ್ನು ಬದಲಾಯಿಸಬೇಕಾಗಿದೆ.  ಅವರವರ ತಲೆಗೆ ಅವರವರದೇ ಕೈ ಆಧಾರವಾಗಿದೆ.  ಆದುದರಿಂದ ವಿದ್ಯಾರ್ಥಿಗಳು ಅವರ ಭವಿಷ್ಯವನ್ನು ಅವರೇ ರೂಪಿಸಬೇಕು ಎಂದು ವಿದ್ಯಾರ್ಥಿನಿಗಳನ್ನುದ್ದೇಶಿಸಿ ಹಿತನುಡಿಗಳನ್ನಾಡಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಪ್ರದೀಪ್ ಕುಮಾರ ಕಲ್ಕೂರ ಮಾತನಾಡಿ, ಎಲ್ಲರನ್ನು ಸೃಷ್ಟಿಸಿದ ದೇವನೊಬ್ಬನೆ. ಆದುದರಿಂದ ಜಗತ್ತಿನಾದ್ಯಂತ  ಶಾಂತಿ ಮತ್ತು ಭಾವೈಕ್ಯದ ಸಂದೇಶವನ್ನು ಸಾರಬೇಕಾದುದು ಪ್ರತಿಯೋರ್ವ ಪ್ರಜೆಯ ಕರ್ತವ್ಯವಾಗಿದೆ.  ಆಧುನಿಕ ಜಗತ್ತಿನ ತಾಂತ್ರಿಕತೆಯ ನಡುವೆಯೂ ನಾವೆಲ್ಲರೂ ಪುಸ್ತಕ ಪ್ರೇಮಿಗಳಾಗಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಪೀಸ್ ಆ್ಯಂಡ್ ಹ್ಯೂಮಾನಿಟಿ ಫಾರಂನ ಅಧ್ಯಕ್ಷರಾದ ಪ್ರಸಾದ್ ರೈ ಕಲ್ಲಿಮಾರ್‍ರವರು, ಎಲ್ಲರೂ ಶಾಂತಿಯ ಸಂದೇಶವನ್ನು ಸಾರುವ ಕೃತಿಗಳನ್ನು ನಿರಂತರವಾಗಿ ಓದಬೇಕು.  ಅಲ್ಲದೆ, ಸಮಾಜಕ್ಕೆ ಅತ್ಯುತ್ತಮ ಕೊಡುಗೆಯನ್ನು ನೀಡುವ ಶಾಂತಿ ಪ್ರಿಯರು ನಾವಾಗಬೇಕು ಎಂದು ಸಭೆಯನ್ನುದ್ದೇಶಿಸಿ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಬ್ಯಾರೀಸ್ ಚೇಂಬರ್  ಆ್ಯಂಡ್ ಕಾಮರ್ಸ್ ಇಂಡಸ್ಟ್ರಿಯ ಅಧ್ಯಕ್ಷರಾದ ಹಾಜಿ. ಎಸ್. ಎಂ. ರಶೀದ್ ಹಾಗೂ ಬದ್ರಿಯಾ ಪಿ.ಯು. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ. ಇಸ್ಮಾಯೀಲ್ ಎಂ, ಉಳ್ಳಾಲ ನಗರಸಭೆಯ ಕೌನ್ಸಿಲರ್ ಭಾರತಿ ಎಂ. ಮಾತನಾಡಿದರು.

ಉಳ್ಳಾಲ ನಗರಸಭೆಯ ಕೌನ್ಸಿಲರ್ ಉಸ್ಮಾನ್ ಕಲ್ಲಾಪು, ಸರಿತಾ ಜೀವನ್ ಕುಮಾರ್, ಹಿರಾ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಎಂ.ಆರ್., ಶಾಂತಿ ಪ್ರಕಾಶನದ ಉಪಾಧ್ಯಕ್ಷರಾದ ಜ. ಕೆ.ಎಂ.ಶರೀಫ್, ಶಾಂತಿ ಪ್ರಕಾಶನದ ಕಾರ್ಯದರ್ಶಿ ಎಂ. ಸಾದುಲ್ಲ, ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಕಾರ್ಯದರ್ಶಿ ಕೆ.ಎಂ. ಅಶ್ರಫ್, ಶಾಂತಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಕೆ. ಅಬ್ದುರ್ರಹ್ಮಾನ್ ರವರು ಸಭೆಯಲ್ಲಿ ಉಪಸ್ಥಿತರಿದ್ದರು.

ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞÂಯವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಹಿರಾ ಸಂಸ್ಥೆಯ ವಿದ್ಯಾರ್ಥಿನಿಯರು ಶಾಂತಿ ಗೀತೆಯನ್ನು ಹಾಡಿದರು. ಶಾಲೆಯ ಪುಟಾಣಿಗಳು ಪ್ರಾರ್ಥನಾಗೀತೆಯನ್ನು ಹಾಡಿದರು.ಮುಝಮ್ಮಿಲ್ ಉಳ್ಳಾಲ್ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದಗೈದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X