Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಕೊಂಚ...

ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಕೊಂಚ ವಿರಾಮ

ವಾರ್ತಾಭಾರತಿವಾರ್ತಾಭಾರತಿ16 July 2018 11:37 PM IST
share
ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಕೊಂಚ ವಿರಾಮ

ಚಿಕ್ಕಮಗಳೂರು, ಜು.16: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ರವಿವಾರದಿಂದ ಕೊಂಚ ವಿರಾಮ ನೀಡಿದ್ದು, ಸದ್ಯ ಜಿಲ್ಲೆಯ ಅಲ್ಲಲ್ಲಿ ಬೆಳಗ್ಗೆ ಹಾಗೂ ರಾತ್ರಿ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ. ಮಲೆನಾಡಿನಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆಯಾದರೂ ಜಿಲ್ಲೆಯ ಹಲವೆಡೆ ಮಳೆ ಅವಾಂತರಗಳು ಮುಂದುವರಿದಿವೆ.

ಜಿಲ್ಲೆಯ ಮಲೆನಾಡಿನ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಹಾಗೂ ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಕಳೆದೊಂದು ತಿಂಗಳಿಂದ ಮಹಾಮಳೆಯ ಆರ್ಭಟಕ್ಕೆ ಜನತೆ ರೋಸಿಹೋಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ರವಿವಾರ ಮಲೆನಾಡಿನಲ್ಲಿ ಗಾಳಿ ಸಹಿತ ಸಾಧಾರಣ ಮಳೆ ಸುರಿದಿದ್ದು, ಮಳೆಯ ಆರ್ಭಟ ಕೊಂಚ ಕಡಿಮೆಯಾಗಿತ್ತು. ಆದರೆ ರಾತ್ರಿ ವೇಳೆ ಮತ್ತೆ ಮಳೆ ಸುರಿದಿದ್ದು, ಸೋಮವಾರ ಬೆಳಗ್ಗೆ ಮಲೆನಾಡಿನ ಕೆಲವೆಡೆ ಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ. ಮಧ್ಯಾಹ್ನದ ನಂತರ ಬಿಸಿಲು, ಗಾಳಿ ಸಹಿತ ತುಂತುರು ಮಳೆಯ ವಾತಾವರಣ ಮಲೆಾಡಿನಲ್ಲಿತ್ತು.

ರವಿವಾರ ಎನ್.ಆರ್.ಪುರ ತಾಲೂಕಿನ ಪೇಟೆಕೆರೆ ಎಂಬಲ್ಲಿ ಗಾಳಿ ಮಳೆಗೆ ಮನೆಯೊಂದು ಕುಸಿದುಬಿದ್ದಿದ್ದು, ಮನೆಯಲ್ಲಿದ್ದ ಇಬ್ಬರು ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ತಾಲೂಕಿನ ಆನೆಗುಂಡಿ ಎಂಬಲ್ಲಿ ಭಾರೀ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕೂವೆ-ಆನೆಗುಂಡಿ ಸಂಪರ್ಕ ಕಡಿತಗೊಂಡಿದ್ದ ಬಗ್ಗೆ ವರದಿಯಾಗಿದೆ.

ಸೋಮವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಮಳೆಮಾಪನ ಕೇಂದ್ರಗಳಲ್ಲಿ ದಾಖಲಾಗಿರುವ ಮಳೆ ವಿವರ ಇಂತಿದೆ: ಚಿಕ್ಕಮಗಳೂರು ತಾಲೂಕಿನ ಚಿಕ್ಕಮಗಳೂರು 4.2 ಮಿ.ಮೀ., ವಸ್ತಾರೆ 25.2 ಮಿ.ಮೀ., ಜೋಳದಾಳು 25.2 ಮಿ.ಮೀ., ಆಲ್ದೂರು 26 ಮಿ.ಮೀ., ಕೆ.ಆರ್.ಪೇಟೆ 9.2 ಮಿ.ಮೀ., ಅತ್ತಿಗುಂಡಿ 34.3 ಮಿ.ಮೀ., ಸಂಗಮೇಶ್ವರಪೇಟೆ 7.6 ಮಿ.ಮೀ., ಬ್ಯಾರವಳ್ಳಿ 30.2 ಮಿ.ಮೀ., ಕಳಸಾಪುರ 2.4 ಮಿ.ಮೀ., ಮಳಲೂರು 9.2 ಮಿ.ಮೀ., ದಾಸರಹಳ್ಳಿಯಲ್ಲಿ 3.2 ಮಿ.ಮೀ. ಮಳೆಯಾಗಿದೆ.

ಕಡೂರು ತಾಲೂಕಿನ ಕಡೂರು 1 ಮಿ.ಮೀ., ಯಗಟಿ 1.4 ಮಿ.ಮೀ., ಸಖರಾಯಪಟ್ಟಣ 4.2 ಮಿ.ಮೀ., ಗಿರಿಯಾಪುರ 4.4 ಮಿ.ಮೀ., ಬೀರೂರು 2.8 ಮಿ.ಮೀ., ಎಮ್ಮೆದೊಡ್ಡಿಯಲ್ಲಿ 15.2 ಮಿ.ಮೀ., ಕೊಪ್ಪ ತಾಲೂಕಿನ ಕೊಪ್ಪ 92.2 ಮಿ.ಮೀ., ಹರಿಹರಪುರ 80.8 ಮಿ.ಮೀ., ಜಯಪುರ 21 ಮಿ.ಮೀ., ಕಮ್ಮರಡಿ 85.5 ಮಿ.ಮೀ., ಬಸರಿಕಟ್ಟೆ 73.8 ಮಿ.ಮೀ., ಮೂಡಿಗೆರೆ ತಾಲೂಕಿನ ಮೂಡಿಗೆರೆ 19.8 ಮಿ.ಮೀ., ಕೊಟ್ಟಿಗೆಹಾರ 42 ಮಿ.ಮೀ., ಜಾವಳಿ 31 ಮಿ.ಮೀ., ಗೋಣಿಬೀಡು 56 ಮಿ.ಮೀ., ಕಳಸ 52 ಮಿ.ಮೀ. ಮಳೆಯಾಗಿದೆ.

ನರಸಿಂಹರಾಜಪುರ ತಾಲೂಕಿನ ನರಸಿಂಹರಾಜಪುರ 27 ಮಿ.ಮೀ., ಬಾಳೆಹೊನ್ನೂರು 14.6 ಮಿ.ಮೀ., ಮೇಗರಮಕ್ಕಿ 70 ಮಿ.ಮೀ., ಶೃಂಗೇರಿ ತಾಲೂಕಿನ ಶೃಂಗೇರಿ 40 ಮಿ.ಮೀ., ಕಿಗ್ಗ 33.4 ಮಿ.ಮೀ., ಕೆರೆಕಟ್ಟೆ 86.4 ಮಿ.ಮೀ., ತರೀಕೆರೆ ತಾಲೂಕಿನ ತರೀಕೆರೆ 15.6 ಮಿ.ಮೀ., ಲಕ್ಕವಳ್ಳಿ 14.2 ಮಿ.ಮೀ., ಅಜ್ಜಂಪುರ 12 ಮಿ.ಮೀ., ಶಿವನಿ 2 ಮಿ.ಮೀ., ಬುಕ್ಕಾಂಬುದಿ 8.3 ಮಿ.ಮೀ., ಲಿಂಗದಹಳ್ಳಿ 9.2 ಮಿ.ಮೀ., ತಣಿಗೆಬೈಲು 21 ಮಿ.ಮೀ., ಉಡೇವಾ 15 ಮಿ.ಮೀ., ತ್ಯಾಗದಬಾಗಿ 14.2 ಮಿ.ಮೀ., ಹುಣಸಘಟ್ಟ 21 ಮತ್ತು ರಂಗೇನಹಳ್ಳಿಯಲ್ಲಿ 16.6 ಮಿ.ಮೀ. ಮಳೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X