Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಳ್ಳು ಸುದ್ದಿ ಬಿತ್ತರಿಸುವ ಮಾಧ್ಯಮಗಳ...

ಸುಳ್ಳು ಸುದ್ದಿ ಬಿತ್ತರಿಸುವ ಮಾಧ್ಯಮಗಳ ವಿರುದ್ಧ ದೂರು ದಾಖಲು: ಮಾಜಿ ಸಚಿವ ಎಂ.ಬಿ.ಪಾಟೀಲ್

‘ರೌಡಿಶೀಟರ್ ಸೈಕಲ್ ರವಿಗೂ ನನಗೂ ಸಂಬಂಧವಿಲ್ಲ’

ವಾರ್ತಾಭಾರತಿವಾರ್ತಾಭಾರತಿ17 July 2018 7:40 PM IST
share
ಸುಳ್ಳು ಸುದ್ದಿ ಬಿತ್ತರಿಸುವ ಮಾಧ್ಯಮಗಳ ವಿರುದ್ಧ ದೂರು ದಾಖಲು: ಮಾಜಿ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜು.17: ರೌಡಿ ಶೀಟರ್ ಸೈಕಲ್ ರವಿ ಯಾರು ಎಂಬುದು ನನಗೆ ಗೊತ್ತಿಲ್ಲ. ಆತನಿಗೂ ನನಗೂ ನಂಟಿದೆ ಎಂದು ತಪ್ಪು ಸುದ್ದಿಯನ್ನು ಪ್ರಕಟಿಸುವ ಮೂಲಕ ನನ್ನ ಚಾರಿತ್ರ್ಯವಧೆಗೆ ಮುಂದಾಗಿರುವ ಕೆಲವು ಮಾಧ್ಯಮಗಳ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತೇನೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

'ಸೈಕಲ್ ರವಿ ಜೊತೆ ನಾನು ನಂಟು ಹೊಂದಿದ್ದೇನೆ. ಅವರೊಂದಿಗೆ ಹಲವಾರು ಬಾರಿ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಈ ಕುರಿತು ಸಿಸಿಬಿ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ' ಎಂಬ ಸುದ್ದಿಗಳನ್ನು ವಿವಿಧ ವಿದ್ಯುನ್ಮಾನ ಮಾಧ್ಯಮಗಳು ಮತ್ತು ವಿವಿಧ ವೆಬ್ ಪತ್ರಿಕೆಗಳು ಪ್ರಕಟಿಸಿವೆ ಎಂದು ಅವರು ಹೇಳಿದ್ದಾರೆ.

ವಿಜಯಪುರದಲ್ಲಿ ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನನಗೆ ಆತ್ಮೀಯರು ಕರೆ ಮಾಡಿ ಸೈಕಲ್ ರವಿ ಜೊತೆ ನನ್ನ ಸಂಬಂಧವಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಿಸುತ್ತಿರುವ ವಿಚಾರ ತಿಳಿಸಿದಾಗ ನಾನು ಆಶ್ಚರ್ಯಚಕಿತನಾದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸೈಕಲ್ ರವಿ ಎನ್ನುವ ಹೆಸರು ನಾನು ಪ್ರಥಮ ಬಾರಿಗೆ ಕೇಳುತ್ತಿದ್ದೇನೆ. ಆತ ಯಾರು? ಆತನ ಹಿನ್ನೆಲೆಯೇನು? ಯಾವುದೇ ಮಾಹಿತಿ ನನಗಿಲ್ಲ. ಇಂತಹ ವ್ಯಕ್ತಿಯೊಂದಿಗೆ ನಾನು ದೂರವಾಣಿಯಲ್ಲಿ ಮಾತನಾಡಿದ್ದೇನೆ, ಮೆಸೇಜ್ ಕಳುಹಿಸಿದ್ದೇನೆ ಎಂದರೆ, ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸತೀಶ್‌ಕುಮಾರ್ ಅವರನ್ನು ಸಂಪರ್ಕಿಸಿ, ‘ಕೆಲವು ಟಿವಿ ವಾಹಿನಿಗಳಲ್ಲಿ ನನ್ನ ಕುರಿತು ಸುದ್ದಿ ಪ್ರಸಾರವಾಗುತ್ತಿರುವ ವಿಚಾರ ಪ್ರಸ್ತಾಪಿಸಿದಾಗ, ಅವರು ವಾಹಿನಿಗಳಲ್ಲಿ ರೌಡಿಶೀಟರ್ ಸೈಕಲ್ ರವಿ ದೂರವಾಣಿ ಸಂಖ್ಯೆ ಎಂದು ಹೇಳುತ್ತಿರುವ ನಂಬರ್ ಆತನದ್ದಲ್ಲ. ಅದು ಮಂಡ್ಯದ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಅವರಿಗೆ ಸೇರಿದ್ದು. ಮಾಧ್ಯಮಗಳು ಯಾಕೆ ಈ ರೀತಿ ಸುದ್ದಿ ಪ್ರಸಾರ ಮಾಡುತ್ತಿವೆ ಗೊತ್ತಿಲ್ಲ ಎಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆಲವು ಮಾಧ್ಯಮಗಳು ನನ್ನನ್ನು ಅಪರಾಧಿ ಸ್ಥಾನದಲ್ಲಿರಿಸಿ, ಸುದ್ದಿಯನ್ನು ಸತತವಾಗಿ ಪ್ರಸಾರ ಮಾಡಿವೆ. ಜವಾಬ್ದಾರಿಯುತ ಮಾಧ್ಯಮಗಳು ಯಾವುದೇ ಸುದ್ದಿಯನ್ನು ಪ್ರಸಾರ ಮಾಡುವಾಗ ಆ ಸುದ್ದಿಯ ನೈಜತೆಯನ್ನು ಅರಿತುಕೊಳ್ಳದೆ, ಸುದ್ದಿಗಳನ್ನು ಬಿತ್ತರಿಸುವುದು ವಿಷಾದನೀಯ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಂಡ್ಯದ ಕಾಂಗ್ರೆಸ್ ಕಾರ್ಯಕರ್ತ ಸಚ್ಚಿದಾನಂದ, ನನ್ನ ಆತ್ಮೀಯ ಗೆಳೆಯ ಮಾಜಿ ಸಚಿವ ಅಂಬರೀಶ್ ಬೆಂಬಲಿಗನಾಗಿದ್ದು, ಹಲವಾರು ವರ್ಷಗಳಿಂದ ಪರಿಚಯವಿದೆ. ಈ ಬಾರಿ ಆತ ಶ್ರೀರಂಗಪಟ್ಟಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಬಯಸಿದ್ದ, ಅವನೊಂದಿಗೆ ನಾನು ಸಾಕಷ್ಟು ಬಾರಿ ಮಾತನಾಡಿದ್ದೇನೆ. ಆದರೆ, ಸಚ್ಚಿದಾನಂದ ಅವರ ನಂಬರ್ ಅನ್ನು ಸೈಕಲ್ ರವಿ ನಂಬರ್ ಎಂದು ಭಾವಿಸಿ, ತಪ್ಪು ಸುದ್ದಿಯನ್ನು ಪ್ರಕಟಿಸುವ ಮೂಲಕ ನನ್ನ ಚಾರಿತ್ರವಧೆಗೆ ಮುಂದಾಗಿರುವ, ಕೆಲವು ಮಾಧ್ಯಮಗಳು ಜನರಿಗೆ ತಪ್ಪು ಮಾಹಿತಿಯನ್ನು ನೀಡಿವೆ. ಈ ರೀತಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಸಂಬಂಧಿತ ಮಾಧ್ಯಮಗಳ ಮೇಲೆ ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತೇನೆ ಎಂದು ಎಂ.ಬಿ.ಪಾಟೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಯಾರದ್ದೋ ಮೊಬೈಲ್ ನಂಬರ್ ಅನ್ನು ಎಂ.ಬಿ.ಪಾಟೀಲ್ ನಂಬರ್ ಎಂದು ದೊಡ್ಡಮಟ್ಟದಲ್ಲಿ ಸುದ್ದಿ ಮಾಡಿದ್ದಾರೆ. ಎಂ.ಬಿ.ಪಾಟೀಲ್‌ಗೂ ಸೈಕಲ್ ರವಿಗೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X