Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಅಧಿಕಾರಾವಧಿಯಲ್ಲಿ ಯಾಕೆ ಕ್ರಮ...

ಬಿಜೆಪಿ ಅಧಿಕಾರಾವಧಿಯಲ್ಲಿ ಯಾಕೆ ಕ್ರಮ ಕೈಗೊಳ್ಳಲಿಲ್ಲ: ಝಮೀರ್‌ ಅಹ್ಮದ್ ಪ್ರಶ್ನೆ

ವಕ್ಫ್ ಆಸ್ತಿಗಳ ದುರ್ಬಳಕೆ ಕುರಿತ ವರದಿ

ವಾರ್ತಾಭಾರತಿವಾರ್ತಾಭಾರತಿ17 July 2018 8:00 PM IST
share
ಬಿಜೆಪಿ ಅಧಿಕಾರಾವಧಿಯಲ್ಲಿ ಯಾಕೆ ಕ್ರಮ ಕೈಗೊಳ್ಳಲಿಲ್ಲ: ಝಮೀರ್‌ ಅಹ್ಮದ್ ಪ್ರಶ್ನೆ

ಬೆಂಗಳೂರು, ಜು.17: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ, ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ದುರ್ಬಳಕೆಗೆ ಸಂಬಂಧಿಸಿದಂತೆ ನೀಡಿದ್ದ ವರದಿ ಕುರಿತು ಬಿಜೆಪಿ ಸರಕಾರದ ಅವಧಿಯಲ್ಲಿ ಯಾಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್‌ ಅಹ್ಮದ್‌ ಖಾನ್ ಪ್ರಶ್ನಿಸಿದರು.

ವಕ್ಫ್ ಆಸ್ತಿ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಸಚಿವರು ಯೂಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾಡಿರುವ ಆರೋಪದ ಕುರಿತು ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಕೇಳಿದ ಪ್ರಶ್ನೆಗೆ ಈ ಮೇಲಿನಂತೆ ತಿರುಗೇಟು ನೀಡಿದರು. 'ನನಗೆ ಯೂಟರ್ನ್ ಮಾಡಿ ಅಭ್ಯಾಸವಿಲ್ಲ. 2012ರಲ್ಲಿ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿಯಾಗಿದ್ದ ವೇಳೆ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸಲ್ಲಿಸಿದ್ದರು. ಆನಂತರ, ಒಂದು ವರ್ಷಗಳ ಕಾಲ ಬಿಜೆಪಿ ಸರಕಾರವೇ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ ಯಾಕೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಝಮೀರ್‌ ಅಹ್ಮದ್‌ ಖಾನ್ ಕೇಳಿದರು.

ವಿಧಾನಪರಿಷತ್ತಿನಲ್ಲಿ ನಾನು ಮಾತನಾಡುವ ವೇಳೆ ಈ ಬಗ್ಗೆ ನೋಡುತ್ತೇನೆಂದು ಹೇಳಿದ್ದೇನೆಯೇ ಹೊರತು, ಸಿಬಿಐ ತನಿಖೆಗೆ ವಹಿಸುತ್ತೇನೆಂದು ಹೇಳಿಲ್ಲ. ಅನ್ವರ್ ಮಾಣಿಪ್ಪಾಡಿ ವರದಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಆದುದರಿಂದ, ಈಗ ಅದನ್ನು ಸಿಬಿಐ ತನಿಖೆಗೆ ವಹಿಸಲು ಹೇಗೆ ಸಾಧ್ಯ? ಅವರು ಹೇಳಿದರು.

ಅನ್ವರ್‌ಮಾಣಿಪ್ಪಾಡಿ ನೀಡಿರುವ ವರದಿಯಲ್ಲಿ ಸತ್ಯಾಂಶ ಇದ್ದಿದ್ದರೆ ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಸುಮ್ಮನೆ ಇರುತ್ತಿದ್ದರೆ? ಮುಜರಾಯಿ ಹಾಗೂ ವಕ್ಫ್ ದೇವರ ಆಸ್ತಿಗಳು. ಅದನ್ನು ನನ್ನ ತಂದೆ ದುರ್ಬಳಕೆ ಮಾಡಿಕೊಂಡಿದ್ದರೂ ನಾನು ಕ್ಷಮಿಸುವುದಿಲ್ಲ ಎಂದು ಝಮೀರ್‌ ಅಹ್ಮದ್‌ ಖಾನ್ ಹೇಳಿದರು.

ಅನ್ವರ್ ಮಾಣಿಪ್ಪಾಡಿ ವರದಿಯು ಸಚಿವ ಸಂಪುಟ ಸಭೆಯಲ್ಲಿ, ಹೈಕೋರ್ಟ್‌ನಲ್ಲಿ ತಿರಸ್ಕರಿಸಲ್ಪಟ್ಟಿದೆ. ಅಲ್ಲದೆ, 2016ರಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ವರದಿಯನ್ನು ಮಂಡಿಸಲಾಗಿದ್ದರೂ ಬಿಜೆಪಿಯವರು ಯಾಕೆ ಆ ವಿಚಾರವನ್ನು ಚರ್ಚೆ ಮಾಡಿಲ್ಲ. ನ್ಯಾಯಾಲಯವು ಈ ವರದಿ ಕುರಿತು ನೀಡುವ ಆದೇಶದಂತೆ ನಾವು ಮುಂದುವರೆಯುತ್ತೇವೆ ಎಂದು ಅವರು ತಿಳಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಗಳನ್ನು ಸದುಪಯೋಗ ಪಡಿಸಿಕೊಂಡರೆ ನಮಗೆ ಸರಕಾರದಿಂದ ಯಾವುದೆ ರೀತಿಯ ಆರ್ಥಿಕ ನೆರವಿನ ಅಗತ್ಯವೇ ಇರುವುದಿಲ್ಲ. ಬದಲಾಗಿ, ನಾವೇ ಸರಕಾರಕ್ಕೆ ಹಣವನ್ನು ನೀಡಬಹುದು ಎಂದು ಅವರು ಹೇಳಿದರು.

ರಾಜ್ಯ ವಕ್ಫ್ ಬೋರ್ಡ್‌ನ ಚುನಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲಾಗಿದೆ. ಆದಷ್ಟು ಶೀಘ್ರದಲ್ಲೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಗಳಿವೆ.
-ಝಮೀರ್‌ ಅಹ್ಮದ್‌ ಖಾನ್, ವಕ್ಫ್ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X