Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲದಲ್ಲಿ ಮುಂದುವರಿದ ಕಡಲ್ಕೊರೆತದ...

ಉಳ್ಳಾಲದಲ್ಲಿ ಮುಂದುವರಿದ ಕಡಲ್ಕೊರೆತದ ಆರ್ಭಟ: ಆತಂಕಗೊಂಡ ಕಡಲತಡಿಯ ಜನರು

ವಾರ್ತಾಭಾರತಿವಾರ್ತಾಭಾರತಿ17 July 2018 11:31 PM IST
share
ಉಳ್ಳಾಲದಲ್ಲಿ ಮುಂದುವರಿದ ಕಡಲ್ಕೊರೆತದ ಆರ್ಭಟ: ಆತಂಕಗೊಂಡ ಕಡಲತಡಿಯ ಜನರು

ಉಳ್ಳಾಲ, ಜು. 17: ಕಳೆದ ಕೆಲವು ದಿನಗಳಿಂದ ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದ ಆರ್ಭಟ ತೀವ್ರಗೊಂಡಿದ್ದು, ಮಂಗಳವಾರವೂ ಉಳ್ಳಾಲದ ಕೈಕೋ, ಕಿಲೆರಿಯಾನಗರದಲ್ಲಿ ಸಮುದ್ರ ರೌದ್ರಾವತಾರ ತೋರಿದ್ದು ಕೈಕೋ ಬಳಿ ಹಲವಾರು ಮನೆಗಳು ಹಾನಿಗೊಂಡು ಭೀಫಾತುಮ್ಮ ಎಂಬವರ ಮನೆ ಸಮುದ್ರ ಪಾಲಾಗಿದೆ.

ಕಳೆದ ಕೆಲವು ದಿನಗಳಿಂದ ಉಳ್ಳಾಲದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಸಮುದ್ರದ ಅಲೆಗಳು ಉಳ್ಳಾಲದ ಕೈಕೋ, ಕಿಲೇರಿಯಾನಗರ, ಮುಕ್ಕಚ್ಚೇರಿ, ಸಿಗ್ರೌಂಡ್, ಸೋಮೇಶ್ವರ ಉಚ್ಚಿಲದ ಪೆರಿಬೈಲು ಬಳಿ ದಡಕ್ಕಪ್ಪಳಿಸುತ್ತಿವೆ. ಕೈಕೋ ಮತ್ತು ಕಿಲೇರಿಯಾನಗರದಲ್ಲಿ ಮನೆಗಳು ಕುಸಿದರೆ, ಪೆರಿಬೈಲು ಬಳಿ ರಸ್ತೆ ಕುಸಿಯುವ ಭೀತಿಯಲ್ಲಿತ್ತು. ಸಮುದ್ರದ ಆಲೆಗಳು ಮಂಗಳವಾರವೂ ಮುಂದುವರೆದಿದ್ದು ಬೀಫಾತುಮ್ಮ ಅವರ ಮನೆ ಕುಸಿಯುವ ಮೂಲಕ ಈ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಲ್ಲಿ 15 ಮನೆಗಳು ಕುಸಿದಿವೆ.

ಸೋಮೇಶ್ವರ ಪೆರಿಬೈಲು ಬಳಿ ಮಂಗಳವಾರ ತಾತ್ಕಾಳಿಕ ಕಲ್ಲು ಹಾಕುವ ಕಾರ್ಯ ಅರಂಭಗೊಂಡಿದೆ. ಉಳ್ಳಾಲ ಕೈಕೋದಲ್ಲಿ ಹಾನಿಯಾದ ಮನೆಗಳಿಂದ ಎಲ್ಲರೂ ಸ್ಥಳಾಂತರಗೊಂಡಿದ್ದಾರೆ ಹಾಗೂ ಆಪಾಯದಲ್ಲಿರುವ ಕೆಲವು ಮನೆಗಳ ಸದಸ್ಯರು ಹಗಲಿನಲ್ಲಿ ಮನೆಯಲ್ಲಿದುಕೊಂಡು ಸಂಜೆ ವೇಳೆಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗಂಜಿ ಕೇಂದ್ರಕ್ಕೆ ಜನರಿಲ್ಲ : ಒಂಭತ್ತುಕೆರೆ ಶಾಲೆಯಲ್ಲಿ ಉಳ್ಳಾಲ ನಗರಸಭೆಯಿಂದ ಗಂಜಿಕೇಂದ್ರವನ್ನು ಅರಂಭಿಸಲಾಗಿದ್ದರೂ, ಜನರು ಆತ್ತ ಕಡೆ ಸುಳಿದಿಲ್ಲ. ಉಳ್ಳಾಲ ದರ್ಗಾದಲ್ಲೂ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರೆ ನಿರಾಶ್ರಿತರು ಸಂಬಂಧಿಗಳ ಮನೆಗಳಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಶಾಶ್ವತ ಕಾಮಗಾರಿ ನಡೆದ ಮೊಗವೀರಪಟ್ಣದಲ್ಲೂ ಮನೆಗಳು ಅಪಾಯಕರಿ ಸ್ಥಿತಿಯಲ್ಲಿದ್ದು ಸುಮಾರು 5 ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಒಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ಕಡಲ್ಕೊರೆತದ ಆರ್ಭಟದಿಂದಾಗಿ ಉಳ್ಳಾಲ ಭಾಗದ ಕಡಲ ತಡಿಯ ಜನರು ಆತಂಕದಿಂದ ದಿನದೂಡುವಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X