Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯ ಸೂಚನೆ...

ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯ ಸೂಚನೆ ನೀಡಿದ ಧೋನಿ?

ವಾರ್ತಾಭಾರತಿವಾರ್ತಾಭಾರತಿ18 July 2018 7:39 PM IST
share
ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯ ಸೂಚನೆ ನೀಡಿದ ಧೋನಿ?

ಲೀಡ್ಸ್, ಜು.18: ಭಾರತ ತಂಡ ಹೆಡ್ಡಿಂಗ್ಲೆಯಲ್ಲಿ 8 ವಿಕೆಟ್‌ಗಳಿಂದ ಸೋಲುವ ಮೂಲಕ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಪಂದ್ಯದ ಕೊನೆಯಲ್ಲಿ ಪೆವಿಲಿಯನ್‌ಗೆ ವಾಪಸಾಗುವ ವೇಳೆ ಮಾಜಿ ನಾಯಕ ಎಂಎಸ್ ಧೋನಿ ಅಂಪೈರ್‌ರಿಂದ ಚೆಂಡನ್ನು ಕೇಳಿ ಪಡೆದಿರುವುದು ಚರ್ಚಾಸ್ಪದ ವಿಷಯವಾಗಿದೆ.

ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿಯ ಈ ವರ್ತನೆಯು ಹಲವು ಊಹಾಪೋಹಕ್ಕೆ ಕಾರಣವಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಹಿರಿಯ ಆಟಗಾರ ಶೀಘ್ರವೇ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಸೂಚನೆ ಇದಾಗಿದೆ ಎಂದು ನಂಬಿದ್ದಾರೆ.

ಉಭಯ ತಂಡಗಳು ಪಂದ್ಯ ಕೊನೆಗೊಂಡ ಬಳಿಕ ಡ್ರೆಸ್ಸಿಂಗ್ ರೂಮ್‌ನತ್ತ ಹೆಜ್ಜೆ ಇಡುತ್ತಿದ್ದಾಗ ಧೋನಿ ಅಂಪೈರ್‌ರಿಂದ ಚೆಂಡನ್ನು ಕೇಳಿ ಪಡೆದರು. ಅವರ ಈ ವರ್ತನೆಯು ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ನಿವೃತ್ತಿಯ ಅನುಮಾನವನ್ನು ಹುಟ್ಟುಹಾಕಿದೆ. 2014ರ ಆಗಸ್ಟ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಕೊನೆಯ ಟೆಸ್ಟ್ ಪಂದ್ಯ ಆಡಿದ್ದ ಸಂದರ್ಭದಲ್ಲಿ ಆ ಪಂದ್ಯ ಡ್ರಾನಲ್ಲಿ ಕೊನೆಗೊಂಡಿದ್ದರೂ ಪಂದ್ಯದ ಸ್ಟಂಪ್‌ನ್ನು ಧೋನಿ ಹಿಡಿದುಕೊಂಡು ಪೆವಿಲಿಯನ್‌ಗೆ•ತೆರಳಿದ್ದರು. ಸಾಮಾನ್ಯವಾಗಿ ಆಟಗಾರರು ಸ್ಮರಣೀಯ ಸಂದರ್ಭ ಹಾಗೂ ಪಂದ್ಯ ಗೆದ್ದ ವೇಳೆ ಸ್ಟಂಪ್‌ನ್ನು ತೆಗೆದುಕೊಳ್ಳುತ್ತಾರೆ.

ಧೋನಿ ಅವರು ಅಂಪೈರ್‌ರಿಂದ ಚೆಂಡನ್ನು ಪಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಧಾನಗತಿಯ ಇನಿಂಗ್ಸ್ ಹಾಗೂ ಈ ಹಿಂದಿನ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಕಂಡುಬಾರದ ಕಾರಣ ಧೋನಿ ಇಂಗ್ಲೆಂಡ್ ಪ್ರವಾಸದ ವೇಳೆ ನಿರಂತರ ಟೀಕೆಗೆ ಗುರಿಯಾಗಿದ್ದರು.

 ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ 37 ರನ್ ಗಳಿಸಿದ್ದ ಧೋನಿ ಅಭಿಮಾನಿಗಳ ಅಪಹಾಸ್ಯಕ್ಕೆ ಈಡಾಗಿದ್ದರು. ಆಗ ನಾಯಕ ವಿರಾಟ್ ಕೊಹ್ಲಿ ಹಾಗೂ ಸಹಾಯಕ ಕೋಚ್ ಸಂಜಯ್ ಬಂಗಾರ್ ಅವರು ಧೋನಿಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು. ಸರಣಿ ನಿರ್ಣಾಯಕ 3ನೇ ಪಂದ್ಯದಲ್ಲಿ ಧೋನಿ 42 ರನ್ ಗಳಿಸಿದ್ದಾರೆ. ಆದರೆ, ಅವರು ಸ್ಪಿನ್ನರ್‌ಗಳ ಎದುರು ಹೆಚ್ಚು ಡಾಟ್‌ಬಾಲ್‌ಗಳನ್ನು ಆಡಿದ್ದರು. ಧೋನಿ 3ನೇ ಪಂದ್ಯದಲ್ಲಿ 66 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 42 ರನ್ ಗಳಿಸಿದ್ದರು. ಡೇವಿಡ್ ವಿಲ್ಲಿ ಬೌಲಿಂಗ್‌ನಲ್ಲಿ ಜೋಸ್ ಬಟ್ಲರ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು. ಭಾರತ 8 ವಿಕೆಟ್‌ಗೆ 258 ರನ್ ಗಳಿಸಿತ್ತು. ತನ್ನ ತಂಡ 25 ರಿಂದ 30 ರನ್ ಕೊರತೆ ಎದುರಿಸಿತ್ತು ಎಂದು ಕೊಹ್ಲಿ•ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X