Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಔಷಧ ಕ್ಷೇತ್ರದಲ್ಲಿ ವಿದೇಶದ ಅವಲಂಬನೆ...

ಔಷಧ ಕ್ಷೇತ್ರದಲ್ಲಿ ವಿದೇಶದ ಅವಲಂಬನೆ ಬೇಡ: ಕರ್ನಾಟಕ ಕೇಂದ್ರೀಯ ವಿ.ವಿ ಕುಲಪತಿ ಎನ್.ಆರ್.ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ18 July 2018 9:21 PM IST
share
ಔಷಧ ಕ್ಷೇತ್ರದಲ್ಲಿ ವಿದೇಶದ ಅವಲಂಬನೆ ಬೇಡ: ಕರ್ನಾಟಕ ಕೇಂದ್ರೀಯ ವಿ.ವಿ ಕುಲಪತಿ ಎನ್.ಆರ್.ಶೆಟ್ಟಿ

ಬೆಂಗಳೂರು, ಜು.19: ದೇಶದ ಔಷಧ ಕ್ಷೇತ್ರದ ಪರಂಪರೆಯು 3 ಸಾವಿರ ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿದೆ. ಆದಾಗ್ಯು ಔಷಧ ಕ್ಷೇತ್ರದಲ್ಲಿ ವಿದೇಶಿ ಔಷಧಿಗಳತ್ತ ಮುಖ ಮಾಡಿರುವುದು ಸರಿಯಲ್ಲವೆಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಎನ್.ಆರ್.ಶೆಟ್ಟಿ ಅಭಿಪ್ರಾಯಿಸಿದರು.

ಬುಧವಾರ ವಿ.ಶಿವರಾಮ್ ಸಂಶೋಧನಾ ಸಂಸ್ಥೆ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಔಷಧೀಯ ಗಿಡಗಳ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಔಷಧಿ ಕ್ಷೇತ್ರದ ಬೆಳವಣಿಗೆಗೆ ವಿದೇಶಗಳೊಂದಿಗೆ ಅವಲಂಬನೆ ಆಗುವ ಅಗತ್ಯವಿಲ್ಲ. ನಮ್ಮ ಪರಂಪರೆಯ ಜ್ಞಾನವನ್ನು ಮತ್ತೊಮ್ಮೆ ಪಡೆದುಕೊಳ್ಳುವಂತಹ ಕೆಲಸವಾಗಬೇಕಿದೆ ಎಂದು ತಿಳಿಸಿದರು.

ಗಿಡಮೂಲಿಕೆಗಳ ಮೂಲಕ ಔಷಧಿ ತಯಾರಿಕೆಯಲ್ಲಿ ದೇಶವು ಅಗಾಧವಾದ ಪಾಂಡಿತ್ಯವನ್ನು ಹೊಂದಿದೆ. ಆದರೆ, ವಿದೇಶಿ ಆಕ್ರಮಣ ಹಾಗೂ ಇತ್ತೀಚಿನ ಆಧುನೀಕರಣ, ಜಾಗತೀಕರಣದ ಪರಿಣಾಮದಿಂದಾಗಿ ನಮ್ಮ ಔಷಧಿ ಹಾಗೂ ಜ್ಞಾನ ಅಳಿವಿನ ಅಂಚಿಗೆ ತಲುಪಿದೆ. ಈಗ ಅದನ್ನು ಪುನರ್ ಸಂಶೋಧಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಆಶಿಸಿದರು.

ಸಾವಿರ ವರ್ಷಗಳ ಹಿಂದೆಯೆ ದೇಶದಲ್ಲಿ 300ರೀತಿಯ ಶಸ್ತ್ರಚಿಕಿತ್ಸಾ ಪದ್ಧತಿಯಿತ್ತು. ಮೂಳೆ ಮುರಿತ ಸೇರಿದಂತೆ ಎಲ್ಲ ರೀತಿಯ ಗಂಭೀರ ಖಾಯಿಲೆಗಳಿಗೆ ಗಿಡಮೂಲಿಕೆಗಳಿಂದ ಔಷಧಿ ನೀಡಲಾಗುತ್ತಿತ್ತು. ನಮ್ಮ ಔಷಧಿಗಳ ಕುರಿತು ಅಧ್ಯಯನಕ್ಕಾಗಿ ನಳಂದಾ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ಆದರೆ, ಈಗ ನಾವು ವಿದೇಶಗಳಿಗೆ ಹೋಗಿ ಕಲಿಯಬೇಕಾದಂತಹ ಪರಿಸ್ಥಿತಿ ಬಂದಿದೆ ಎಂದು ಅವರು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಕೆ.ಭೈರಪ್ಪ ಮಾತನಾಡಿ, ಔಷಧ ಕ್ಷೇತ್ರದಲ್ಲಿ ದೇಶದ ಪರಂಪರೆ ಶ್ರೀಮಂತವಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀರ ಹಿಂದುಳಿದಿರುವುದು ಆತಂಕಕ್ಕೆ ಈಡು ಮಾಡಿದೆ. ಸಿಂಗಾಪುರ್, ಸ್ವೀಡನ್ ಸೇರಿದಂತೆ ಸಣ್ಣ ದೇಶಗಳು ಆರೋಗ್ಯದಲ್ಲಿ ಉತ್ತಮ ಸ್ಥಾನ ಪಡೆದಿರುವಾಗ ನಮ್ಮಲ್ಲಿ ಯಾಕೆ ಹೀಗಾಗಿದೆ ಎಂಬುದನ್ನು ಚರ್ಚಿಸಿ, ಸೂಕ್ತ ಪರಿಹಾರೋಪಾಯಗಳನ್ನು ಪಡೆದುಕೊಳ್ಳಲು ಸಕಾಲವೆಂದು ತಿಳಿಸಿದರು. ಈ ವೇಳೆ ಬೆಂವಿವಿ ಉಪಕುಲಪತಿ ಡಾ.ಕೆ.ಆರ್.ವೇಣುಗೋಪಾಲ್, ಪರಿಷತ್‌ಸದಸ್ಯ ಆರ್.ಚೌಡರೆಡ್ಡಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X