Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಲ್ಲೆಯ ಹಿಂದೆ ಜಾರ್ಖಂಡ್ ಸರಕಾರದ...

ಹಲ್ಲೆಯ ಹಿಂದೆ ಜಾರ್ಖಂಡ್ ಸರಕಾರದ ಪಿತೂರಿ: ಸ್ವಾಮಿ ಅಗ್ನಿವೇಶ್

ವಾರ್ತಾಭಾರತಿವಾರ್ತಾಭಾರತಿ18 July 2018 9:48 PM IST
share
ಹಲ್ಲೆಯ ಹಿಂದೆ ಜಾರ್ಖಂಡ್ ಸರಕಾರದ ಪಿತೂರಿ: ಸ್ವಾಮಿ ಅಗ್ನಿವೇಶ್

ರಾಂಚಿ, ಜು. 18: ಪಾಕೂರ್‌ನಲ್ಲಿ ಮಂಗಳವಾರ ಭಾರತೀಯ ಯುವ ಜನತಾ ಮೋರ್ಚಾ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್, ಈ ಘಟನೆ ರಾಜ್ಯ ಸರಕಾರದ ಪೂರ್ವಯೋಜಿತ ಪಿತೂರಿ ಎಂದು ವ್ಯಾಖ್ಯಾನಿಸಿದ್ದಾರೆ ಹಾಗೂ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

 ಮಂಗಳವಾರ ಬೆಳಗ್ಗೆ ರೈಲಿನಲ್ಲಿ ರಾಂಚಿಗೆ ತಲುಪಿದ ಸ್ವಾಮಿ ಅಗ್ನಿವೇಶ್ ಅವರನ್ನು ಮಾಜಿ ಕೇಂದ್ರ ಸಚಿವ ಸುಬೋಧ್ ಕಾಂತ್ ಸಹಾಯ್ ಹಾಗೂ ಜಾರ್ಖಂಡ್ ವಿಕಾಸ ಮೋರ್ಚಾ ವರಿಷ್ಠ ಬಾಬುಲಾಲ್ ಮರಾಂಡಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಬೆಂಬಲಿಸಿದ್ದರು. ‘‘ಮುಖ್ಯಮಂತ್ರಿ ರಘುವರ ದಾಸ್ ಹಾಗೂ ಪಾಕುರ್‌ನ ಜಿಲ್ಲಾಡಳಿತಕ್ಕೆ ನಾನು ಆಗಮಿಸುವ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಆದರೆ, ಯಾವುದೇ ಭದ್ರತೆ ಏರ್ಪಡಿಸಿಲ್ಲ. ಆದುದರಿಂದ ಇದು ರಾಜ್ಯ ಸರಕಾರದ ಪೂರ್ವಯೋಜಿತ ಪಿತೂರಿ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಜಿಲ್ಲಾಡಳಿತದ ಜವಾಬ್ದಾರಿ. ಅಲ್ಲದೆ ಅವರು ನನಗೆ ಮುನ್ನೆಚ್ಚರಿಕೆ ನೀಡಬೇಕಾಗಿತ್ತು’’ ಎಂದು ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ.

 ‘‘ಥಳಿಸಿದ ಗುಂಪು ನನ್ನನ್ನು ಹತ್ಯೆಗೈಯಲು ಯೋಜಿಸಿತ್ತು. ಪಾಕುರ್‌ನಲ್ಲಿ ನನ್ನ ಜೊತೆಗಿದ್ದ ಬೆಂಬಲಿಗರು ಹಲ್ಲೆ ನಡೆಸಿದ 8ರಿಂದ 10 ಜನರ ಹೆಸರು ಹೇಳಿದರೂ ಇದುವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ’’ ಎಂದು ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ.

ಸ್ವಾಮಿ ಅಗ್ನಿವೇಶ್ ‘ವಂಚಕ’, ‘ವಿದೇಶಿ ಏಜೆಂಟ್’

 ಭಾರತೀಯ ಯುವ ಜನತಾ ಮೋರ್ಚಾ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸ್ವಾಮಿ ಅಗ್ನಿವೇಶ್‌ಗೆ ಹಲ್ಲೆ ನಡೆಸಿದ ಒಂದು ದಿನದ ಬಳಿಕ ರಾಜ್ಯ ನಗರಾಭಿವೃದ್ಧಿ ಸಚಿವ ಸಿ.ಪಿ. ಸಿಂಗ್ ಅವರು, ಅಗ್ನಿವೇಶ್ ‘ವಂಚಕ’ ಹಾಗೂ ‘ವಿದೇಶಿ ಏಜೆಂಟ್’ ಎಂದು ಟೀಕಿಸಿದ್ದಾರೆ. ನನಗೆ ತಿಳಿದ ಮಟ್ಟಿಗೆ ಸ್ವಾಮಿ ಅಗ್ನಿವೇಶ್ ಅವರು ವಿದೇಶಿ ದೇಣಿಗೆಯಿಂದ ಬದುಕುತ್ತಿರುವವರು. ಸಾಮಾನ್ಯ ಜನರನ್ನು ವಂಚಿಸಲು ಅವರು ಕೇಸರಿ ಬಟ್ಟೆ ತೊಡುತ್ತಿದ್ದಾರೆ. ಅವರು ವಂಚಕ. ಸ್ವಾಮಿ ಅಲ್ಲ. ಜನಪ್ರಿಯತೆ ಪಡೆಯುವ ಉದ್ದೇಶದಿಂದ ಅವರೇ ದಾಳಿಯ ನಾಟಕ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X