Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭಿವೃದ್ಧಿಗೆ ಸಚಿವ ಸ್ಥಾನದ...

ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿಲ್ಲ: ಶಾಸಕ ಶಾಮನೂರು ಶಿವಶಂಕರಪ್ಪ

ವಾರ್ತಾಭಾರತಿವಾರ್ತಾಭಾರತಿ18 July 2018 10:15 PM IST
share
ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿಲ್ಲ: ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ,ಜು.18: ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿಲ್ಲ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು. 

ಬುಧವಾರ 9 ಮತ್ತು 10ನೇ ವಾರ್ಡ್‍ನಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ದಾವಣಗೆರೆ ಜಿಲ್ಲೆಗೆ ಉಸ್ತುವಾರಿ ಸಚಿವ ಸ್ಥಾನದ ಕೊರತೆ ಇಲ್ಲದಂತೆ ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಸ್ತೆ, ಚರಂಡಿಗಳು ಕಾಂಕ್ರೀಟೀಕರಣ ಆಗುತ್ತಿವೆ. ಈ ಎಲ್ಲಾ ಕಾಮಗಾರಿಗಳಿಗೆ ಹಿಂದಿನ ಸರ್ಕಾರದಿಂದ ಅನುದಾನ ತರಲಾಗಿದ್ದು, ಅನುದಾನ ಕೊರತೆ ಉಂಟಾಗುವುದಿಲ್ಲ. ಅಗತ್ಯ ಬಿದ್ದರೆ ಅನುದಾನ ತರಲಾಗುವುದು ಎಂದರು.

ಮುಂದಿನ 6 ತಿಂಗಳೊಳಗಾಗಿ ದಾವಣಗೆರೆಗೆ ದಿನದ 24 ಗಂಟೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು. ಮೂಲಸೌಲಭ್ಯಗಳಿಗೆ ಸಹ ಒತ್ತು ಕೊಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೆಲಸದ ಒತ್ತಡದಿಂದಾಗಿ ಕಣ್ಣೀರು ಹಾಕುತ್ತಿದ್ದಾರೆ. ಹೊರತಾಗಿ ಕಾಂಗ್ರೆಸ್‍ನ ಒತ್ತಡವಿಲ್ಲ ಎಂದು ಅವರೇ ಸ್ಪಷ್ಟ ಪಡಿಸಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ವಿತರಣೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಮನೂರು, ಸರ್ಕಾರ ಇದೀಗ ತಾನೇ ರಚನೆಯಾಗಿದೆ. ಕೊಟ್ಟ ಆಶ್ವಾಸನೆ ಈಡೇರಿಸಲು ಸ್ವಲ್ಪಮಟ್ಟದ ಕಾಲಾವಾಕಾಶ ಬೇಕಿದೆ. ಕೂಸು ಹುಟ್ಟಲು ಒಂಭತ್ತು ತಿಂಗಳು ಹೇಗೆ ಸಮಯಬೇಕು ಅದೇ ರೀತಿ ಎಲ್ಲಾ ಭರವಸೆ ಈಡೇರಿಸಲು ಸಮಯ ಬೇಕು. ನಮ್ಮ ಸರ್ಕಾರ ಉಚಿತ ಬಸ್ ಪಾಸ್ ವಿತರಣೆ ಮಾಡುವುದು ಖಂಡಿತ ಎಂದು ಭರವಸೆ ನೀಡಿದರು.

ಪಾಲಿಕೆ ಸದಸ್ಯರಾದ ಲಕ್ಷ್ಮೀದೇವಿ ಬಿ. ವೀರಣ್ಣ, ಅನಿತಾಬಾಯಿ, ದಿನೇಶ್ ಕೆ. ಶೆಟ್ಟಿ,  ಡೂಡಾ ಮಾಜಿ ಅಧ್ಯಕ್ಷ ಮಾಲತೇಶ್ ಜಾಧವ್, ನಗರಸಭಾ ಮಾಜಿ ಅಧ್ಯಕ್ಷ ಬಿ. ವೀರಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಎಸ್.ಎನ್. ಚಂದ್ರಪ್ಪ, ಡೂಡಾ ಮಾಜಿ ಸದಸ್ಯ ವಿನಾಯಕ ಪೈಲ್ವಾನ್, ಗೌಡ್ರು ಚನ್ನಬಸಪ್ಪ, ವಾರ್ಡ್ ಅಧ್ಯಕ್ಷ ಡಿಶ್ ಮಂಜುನಾಥ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X