Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರಿಗಳು ಮಸೂದೆ ರೂಪಿಸುವ ಕೆಟ್ಟ...

ಅಧಿಕಾರಿಗಳು ಮಸೂದೆ ರೂಪಿಸುವ ಕೆಟ್ಟ ಪದ್ಧತಿ ನಮ್ಮಲ್ಲಿದೆ: ವರುಣ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ19 July 2018 8:29 PM IST
share
ಅಧಿಕಾರಿಗಳು ಮಸೂದೆ ರೂಪಿಸುವ ಕೆಟ್ಟ ಪದ್ಧತಿ ನಮ್ಮಲ್ಲಿದೆ: ವರುಣ್ ಗಾಂಧಿ

ಬೆಂಗಳೂರು, ಜು.19: ಒಂದೊಂದು ಇಲಾಖೆಯಲ್ಲಿ ಕೆಲವೇ ತಿಂಗಳಿರುವ, ಸಮರ್ಪಕ ಮಾಹಿತಿ ಇಲ್ಲದ ಅಧಿಕಾರಿಗಳು ಮಸೂದೆ ರೂಪಿಸುತ್ತಿರುವುದು ನಮ್ಮ ದೇಶದ ವಿಪರ್ಯಾಸ ಎಂದು ಸಂಸದ ವರುಣ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು, ಒಂದು ಕ್ಷೇತ್ರದ ಬಗ್ಗೆ ಸಮಗ್ರವಾಗಿ ತಿಳಿದಿರುವವರು, ತಜ್ಞರು ಆಯಾ ಕ್ಷೇತ್ರಗಳ ಮಸೂದೆಗಳನ್ನು ರಚಿಸಬೇಕು. ಕಾಯ್ದೆಗಳು ರೂಪುಗೊಂಡ ನಂತರ ಅವುಗಳನ್ನು ಅನುಷ್ಠಾನಗೊಳಿಸುವುದು ಅಧಿಕಾರಿಗಳ ಕೆಲಸ. ಆದರೆ, ನಮ್ಮಲ್ಲಿ ಹೀಗಾಗುತ್ತಿಲ್ಲ ಎಂದು ಹೇಳಿದರು.

ದಶಕಗಳ ಹಿಂದೆ ರಾಜಕೀಯ ಎನ್ನುವುದು ಜ್ಞಾನದ ಭಂಡಾರವಾಗಿತ್ತು. ಆದರೆ, ಈಗಿನ ಸಂಸತ್ತು ಹೇಗಿರುತ್ತದೆಂದರೆ, ಅಧಿವೇಶನ ಪ್ರಾರಂಭದಲ್ಲಿ ಒಬ್ಬ ಈ ಮಸೂದೆ ಬರುತ್ತಿದೆ, ಯಾರು ಮಾತನಾಡುತ್ತೀರಾ ಇದರ ಬಗ್ಗೆ ಎಂದು ಕೂಗುತ್ತಾ ಬರುತ್ತಾನೆ. ಅದಕ್ಕೆ ಸಂಬಂಧಿಸಿದವರು ಮಾತನಾಡುತ್ತಾರೆ ಎಂದು ವಾಸ್ತವ ಬಿಚ್ಚಿಟ್ಟರು.

ನಮ್ಮ ದೇಶದ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಯಾಗಬೇಕಿದೆ. ಕಳೆದ 15 ವರ್ಷಗಳಲ್ಲಿ ಶೇ.66ರಷ್ಟು ಮಂದಿ ಐಎಎಸ್, ಐಪಿಎಸ್ ಆಗಿದ್ದಾರೆ. ಅವರಲ್ಲಿ ಬಹುತೇಕರು ಓದಿರುವುದು ಖಾಸಗಿ ಶಾಲೆಗಳಲ್ಲಿ. ಎಷ್ಟು ಜನರಿಗೆ ಖಾಸಗಿ ಶಾಲೆಗಳಲ್ಲಿ ಓದುವ ಅವಕಾಶ ದೊರೆಯುತ್ತದೆ? ಹೀಗಾಗಿ ಅತ್ಯಂತ ಕಡಿಮೆ ದರದಲ್ಲಿ, ಉತ್ತಮ ಶಿಕ್ಷಣ ದೊರೆಯುವ ವ್ಯವಸ್ಥೆ ರೂಪಿಸುವ ಬಗ್ಗೆ ನಾವೆಲ್ಲ ಚಿಂತಿಸಬೇಕು ಎಂದು ಹೇಳಿದರು.

ಎಲ್ಲಾ ಮಕ್ಕಳಿಗೂ ಶಿಕ್ಷಣ ಸಿಗಬೇಕು ಎನ್ನುವ ದೃಷ್ಟಿಯಿಂದ ಜಾರಿಗೊಳಿಸಲಾದ ಆರ್‌ಟಿಇ ಸಹ ಸರಿಯಾಗಿ ಉಪಯೋಗವಾಗುತ್ತಿಲ್ಲ. ಶೇ.29ರಷ್ಟು ಶಾಲೆಗಳಲ್ಲಿ ಮಾತ್ರ ಆರ್‌ಟಿಇ ದಾಖಲಾತಿ ಪೂರ್ಣಪ್ರಮಾಣದಲ್ಲಿದೆ. ಯುಕೆಜಿಯಲ್ಲಿ ಶೇ 100ರಷ್ಟಿದ್ದ ದಾಖಲಾತಿ ಹತ್ತನೆ ತರಗತಿಗಾಗಲೇ ಶೇ.50ಕ್ಕೆ ಬಂದಿರುತ್ತದೆ ಎಂದು ಮಾಹಿತಿ ನೀಡಿದರು.

ಚುನಾವಣೆಯಲ್ಲಿ ಕೋಟಿಗಟ್ಟಲೇ ಹಣ ಸುರಿಯುವ ಅಭ್ಯರ್ಥಿ, ಅಧಿಕಾರಕ್ಕೆ ಬಂದ ನಂತರ ಅದನ್ನು ವಾಪಸು ಪಡೆಯುವ ಬಗ್ಗೆ ಚಿಂತಿಸುತ್ತಾನೆ. ಖರ್ಚಿನ ಮೇಲೆ ಆಯೋಗ ಎಷ್ಟೇ ಕಡಿವಾಣ ಹಾಕಿದರೂ, ಯಾವುದಾದರೊಂದು ಮಾರ್ಗದಲ್ಲಿ ಹಣ ಖರ್ಚು ಮಾಡುತ್ತಾನೆ. ಹಾಗಾಗಿ ಖರ್ಚು ಮಾಡುಲು ಇರುವ ದಾರಿಗಳನ್ನು ಬಂದ್ ಮಾಡಬೇಕು ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X