Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಆರೋಗ್ಯ ಮತ್ತು ಕುಟುಂಬ...

ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಲಿಪಿಕ ನೌಕರರ ಸಂಘದ ಉದ್ಘಾಟನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ19 July 2018 9:13 PM IST
share
ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಲಿಪಿಕ ನೌಕರರ ಸಂಘದ ಉದ್ಘಾಟನಾ ಸಮಾರಂಭ

ದಾವಣಗೆರೆ,ಜು.19: ಆರೋಗ್ಯ ಇಲಾಖೆ ನೌಕರರದ್ದು ಒಂದು ರೀತಿಯ ತುರ್ತು ಸೇವೆ ಇದ್ದಂತೆ. ಲಿಪಿಕ ನೌಕರರು ದಿನದ 24 ಗಂಟೆ ಕಾರ್ಯನಿರ್ವಹಿಸದೇ ಇರಬಹುದು. ಆದರೆ, 24 ಗಂಟೆ ನಿರ್ವಹಿಸುವ ಇತರೆ ಸಿಬ್ಬಂದಿಗೆ ಬೆನ್ನೆಲುಬು ಆಗಿ ಕಾರ್ಯನಿರ್ವಹಿಸುವುದು ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಹೇಳಿದರು.

ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಲಿಪಿಕ ನೌಕರರ ಸಂಘದ ಉದ್ಘಾಟನಾ ಸಮಾರಂಭ, ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಲಿಪಿಕ ನೌಕರರು ಬೇರೆ ಇತರರು ಬೇರೆ ಎಂಬ ಭಾವನೆ ಬೇಡ. ಎಲ್ಲಾ ನೌಕರರು ಸರ್ಕಾರದ ಒಂದು ಭಾಗ. ಆದ್ದರಿಂದ ಎಲ್ಲರೂ ಒಟ್ಟಾಗಿ ಕೈಜೋಡಿಸುವ ಮುಖಾ ಜನತೆಗೆ ಸುರಕ್ಷಿತ ಆರೋಗ್ಯ ಸೇವೆ ನೀಡಿ, ಆರೋಗ್ಯ ಸಮಾಜ ನಿರ್ಮಿಸಬೇಕೆಂದ ಅವರು, ನಮ್ಮ ಸಮಾಜದಲ್ಲಿ ಸಂಘಗಳಿಗೆ ಕೊರತೆಯಿಲ್ಲ. ಆದರೆ, ಸಂಘದ ಮುಖ್ಯ ಉದ್ದೇಶಗಳೇನು ಎಂಬುದನ್ನು ಎಲ್ಲರು ಮೊದಲು ಮನಗಾಣಬೇಕು. ಸರ್ಕಾರಿ ನೌಕರರನ್ನು ನೌಕರರಲ್ಲದೇ ಇರುವ ಶೇ. 90ರಷ್ಟು ಜನ ಗಮನಿಸುತ್ತಿರುತ್ತಾರೆ. ಆದ್ದರಿಂದ ಅವರಿಗೆ ನಾವು ಯಾವ ಸೇವೆ ನೀಡುತ್ತೇವೆ ಎಂಬುದು ಮುಖ್ಯ. ಇತರರಿಗೆ ಹೋಲಿಸಿದರೆ ಸರ್ಕಾರಿ ನೌಕರರು ಪುಣ್ಯವಂತರು. ಸರ್ಕಾರದಿಂದ ಎಲ್ಲಾ ಸವಲತ್ತು ಪಡೆಯುತ್ತೇವೆ. ಆದರೆ, ಸವಲತ್ತು ನೀಡಿದ ಸಮಾಜಕ್ಕೆ ನಾವೇನು ನೀಡುತ್ತೇವೆ ಎಂಬುದು ಅತೀಮುಖ್ಯ ಎಂದರು.

ನಿವೃತ್ತಿಯ ನಂತರ ನೀವೆಷ್ಟು ಸಂಪಾದನೆ ಮಾಡಿದ್ದೀರಿ ಎಂದು ಯಾರೂ ನಿಮ್ಮನ್ನು ಕೇಳುವುದಿಲ್ಲ. ಆದ್ದರಿಂದ ಕೆಲಸದ ಒತ್ತಡದ ನಡುವೆಯೂ ನಿಮ್ಮ ನಿಮ್ಮ ಕುಟುಂಬಕ್ಕೂ ಆದ್ಯತೆ ಹಾಗೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದರು.

ಸಂಘದ ಗೌರವಾಧ್ಯಕ್ಷ ನಿಜಲಿಂಗಪ್ಪ ಪ್ರಾಸ್ತಾವಿಕ ಮಾತನಾಡಿ, ನಮ್ಮ ಸಂಘ ನೌಕರರ ಹಿತರಕ್ಷಣೆಯ ಜೊತೆಗೆ ಇಲಾಖೆ, ಜಿಲ್ಲಾಡಳಿತ, ಆಸ್ಪತ್ರೆಗೆ ಪೂರಕವಾಗಿ ಸಹ ಕಾರ್ಯನಿರ್ವಹಿಸಬೇಕು. ಸಂಘದಿಂದ ವಿಶೇಷ ಕಾರ್ಯಾಗಾರ, ಪುರಸ್ಕಾರ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ತ್ರಿಪುಲಾಂಭ, ಚಿಗಟೇರಿ ಜಿಲ್ಲಾಸ್ಪತ್ರೆಯ ಅಧೀಕ್ಷಕಿ ಡಾ. ನೀಲಾಂಬಿಕೆ ಎಚ್.ಡಿ., ಆರೋಗ್ಯ ಮತ್ತು ಕು.ಕ. ಇಲಾಖೆ ಲಿಪಿಕ ನೌಕರರ ಸಂಘದ ಕಾರ್ಯಾಧ್ಯಕ್ಷ ಎ. ಪುಟ್ಟಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಆರ್. ಶ್ರೀನಿವಾಸ್, ರಾಜ್ಯ ಆರೋಗ್ಯ ಮತ್ತು ಕು.ಕ. ಹಾಗೂ ವೈ.ಶಿ. ಇಲಾಖೆ ಲಿಪಿಕ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ಪುರುಷೋತ್ತಮ, ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಹಾಲೇಶಪ್ಪ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಗಂಗಾಧರ, ಶಿವಾಜಿರಾವ್ ಮತ್ತಿತರರಿದ್ದರು.

ಲಿಪಿಕ ನೌಕರರ ಸಂಘದ ಅಧ್ಯಕ್ಷ ಎಸ್. ನಾಗರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ಹಕ್ಕು ಕಾಯ್ದೆ ವಿಷಯ ಕುರಿತು ರಾಜ್ಯ ಸಂಪನ್ಮೂಲ ವ್ಯಕ್ತಿ ಕಾಚಾಪುರ ರಂಗಪ್ಪ ಮಾತನಾಡಿದರು. ಇದೇ ಸಂದರ್ಭ ಪ್ರತಿಭಾನ್ವಿತದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಮಾಚಾರ್ ಪ್ರಾರ್ಥಿಸಿದರು. ವೆಂಕಟೇಶ್ ಸ್ವಾಗತಿಸಿ, ಆನಂದ ಋಗ್ವೇದಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X