Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ, ಚೀನಾಗಳ ಪ್ರತೀಕಾರಾತ್ಮಕ...

ಭಾರತ, ಚೀನಾಗಳ ಪ್ರತೀಕಾರಾತ್ಮಕ ತೆರಿಗೆಯಿಂದ ಅಮೆರಿಕಕ್ಕೆ ಪೆಟ್ಟು: ಅಮೆರಿಕ ಸಂಸದ ಡೇವ್ ರೀಚರ್ಟ್

ವಾರ್ತಾಭಾರತಿವಾರ್ತಾಭಾರತಿ19 July 2018 9:22 PM IST
share

ವಾಶಿಂಗ್ಟನ್, ಜು. 19: ಭಾರತ ಮತ್ತು ಚೀನಾಗಳು ಅಮೆರಿಕದ ಉತ್ಪನ್ನಗಳ ಆಮದಿನ ಮೇಲೆ ವಿಧಿಸಿರುವ ಪ್ರತೀಕಾರಾತ್ಮಕ ತೆರಿಗೆಗಳು ಅಮೆರಿಕದ ಕೃಷಿ ಉತ್ಪನ್ನಗಳ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿವೆ ಎಂಬುದಾಗಿ ಅಮೆರಿಕದ ಪ್ರಭಾವಿ ಸಂಸದರೊಬ್ಬರು ಗುರುವಾರ ಹೇಳಿದ್ದಾರೆ ಹಾಗೂ ಅಮೆರಿಕದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಟ್ರಂಪ್ ಆಡಳಿತವನ್ನು ಒತ್ತಾಯಿಸಿದ್ದಾರೆ.

ಟ್ರಂಪ್ ಆಡಳಿತವು ಮಾರ್ಚ್‌ನಲ್ಲಿ ಅಲ್ಯುಮಿನಿಯಮ್ ಮತ್ತು ಉಕ್ಕು ಆಮದುಗಳ ಮೇಲೆ ಹೆಚ್ಚುವರಿ ತೆರಿಗೆಗಳನ್ನು ವಿಧಿಸಿತ್ತು. ಇದು ಚೀನಾ ಸೇರಿದಂತೆ ಹಲವು ದೇಶಗಳೊಂದಿಗೆ ಅಮೆರಿಕದ ವ್ಯಾಪಾರ ಸಮರಕ್ಕೆ ಕಾರಣವಾಯಿತು.

ಎಪ್ರಿಲ್‌ನಲ್ಲಿ ಟ್ರಂಪ್ ಇನ್ನೂ ಸುಮಾರು 1,300 ಚೀನಾ ಉತ್ಪನ್ನಗಳ ಮೇಲೆ ಹೆಚ್ಚುವರಿ ಆಮದು ಸುಂಕ ವಿಧಿಸಿದರು ಹಾಗೂ ಇನ್ನಷ್ಟು ವಸ್ತುಗಳ ಮೇಲೆ ಆಮದು ಸುಂಕ ವಿಧಿಸುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ ಚೀನಾ ಅಮೆರಿಕದಿಂದ ಆಮದು ಮಾಡಲಾಗುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಆಮದು ಸುಂಕ ವಿಧಿಸಿತು.

ಕಳೆದ ತಿಂಗಳು ಭಾರತ 30 ವಸ್ತುಗಳ ಪರಿಷ್ಕೃತ ಪಟ್ಟಿಯೊಂದನ್ನು ಡಬ್ಲುಟಿಒಗೆ ಸಲ್ಲಿಸಿ, ಅವುಗಳ ಆಮದು ಸುಂಕವನ್ನು 50 ಶೇಕಡದಷ್ಟು ಹೆಚ್ಚಿಸುವ ಪ್ರಸ್ತಾಪವಿದೆ ಎಂದು ಹೇಳಿತ್ತು. ಈ ವಸ್ತುಗಳಲ್ಲಿ ಮೋಟರ್‌ಸೈಕಲ್, ನಿರ್ದಿಷ್ಟ ಕಬ್ಬಿಣ ಮತ್ತು ಉಕ್ಕಿನ ಸಲಕರಣೆಗಳು, ಬೋರಿಕ್ ಆ್ಯಸಿಡ್ ಮತ್ತು ಅಲಸಂಡೆ ಸೇರಿವೆ.

ಅಮೆರಿಕದ ರೈತರ ಮೇಲೆ ಮೊದಲ ಪರಿಣಾಮ

ಅಮೆರಿಕದ ರೈತರು, ಪ್ರಾಣಿಗಳ ಸಾಕಣೆದಾರರು ಮತ್ತು ಬೆಳೆಗಾರರು ಈಗ ಅಂತಾರಾಷ್ಟ್ರೀಯ ವ್ಯಾಪಾರ ಸಮರದ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಸಂಸದ ಹಾಗೂ ಉಪಸಮಿತಿಯೊಂದರ ಅಧ್ಯಕ್ಷ ಡೇವ್ ರೀಚರ್ಟ್ ಹೇಳಿದ್ದಾರೆ.

 ‘ಅಮೆರಿಕದ ಕೃಷಿ ಮತ್ತು ಗ್ರಾಮೀಣ ಸಮುದಾಯಗಳ ಮೇಲೆ ಆಮದು ಸುಂಕಗಳ ಪರಿಣಾಮ’ ಎಂಬ ವಿಷಯದಲ್ಲಿ ಅಮೆರಿಕದ ಸಂಸತ್ ಕಾಂಗ್ರೆಸ್‌ಗೆ ಅವರು ವಿವರಣೆ ನೀಡುತ್ತಿದ್ದರು.

‘‘ಅಮೆರಿಕದ ನೂತನ ವ್ಯಾಪಾರ ನೀತಿಗಳಿಗೆ ಜಗತ್ತಿನಾದ್ಯಂತ ದೇಶಗಳು ಪ್ರತಿಕ್ರಿಯಿಸುತ್ತಿವೆ. ಪ್ರತೀಕಾರಾತ್ಮಕ ತೆರಿಗೆಗಳ ಪರಿಣಾಮವನ್ನು ಮೊದಲು ಎದುರಿಸುವವರು ರೈತರೇ ಆಗಿದ್ದಾರೆ. ಐರೋಪ್ಯ ಒಕ್ಕೂಟ, ಚೀನಾ, ಮೆಕ್ಸಿಕೊ, ಕೆನಡ, ಟರ್ಕಿ, ರಶ್ಯ ಮತ್ತು ಭಾರತ ಮುಂತಾದ ದೇಶಗಳಿಂದ ಅಮೆರಿಕದ ಕೃಷಿ ಕ್ಷೇತ್ರವು ಪತೀಕಾರಾತ್ಮಕ ತೆರಿಗೆಗಳ ಬೆದರಿಕೆಯನ್ನು ಎದುರಿಸುತ್ತಿದೆ’’ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X