Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಮಠದಲ್ಲಿ ಸಾವಿರಾರು ಮಂದಿಯಿಂದ...

ಶ್ರೀಮಠದಲ್ಲಿ ಸಾವಿರಾರು ಮಂದಿಯಿಂದ ಶಿರೂರು ಸ್ವಾಮೀಜಿಯ ಅಂತಿಮ ದರ್ಶನ

ವಾರ್ತಾಭಾರತಿವಾರ್ತಾಭಾರತಿ19 July 2018 10:17 PM IST
share
ಶ್ರೀಮಠದಲ್ಲಿ ಸಾವಿರಾರು ಮಂದಿಯಿಂದ ಶಿರೂರು ಸ್ವಾಮೀಜಿಯ ಅಂತಿಮ ದರ್ಶನ

ಉಡುಪಿ, ಜು.19: ಇಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದ ಶಿರೂರು ಮಠದ ಶ್ರೀಲಕ್ಷ್ಮೀವರತೀರ್ಥ ಸ್ವಾಮೀಜಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಪಾರ್ಥಿವ ಶರೀರವನ್ನು ಸಂಜೆ 4:00 ಗಂಟೆ ಸುಮಾರಿಗೆ ರಥಬೀದಿಯಲ್ಲಿರುವ ಶಿರೂರು ಮಠಕ್ಕೆ ತೆಗೆದುಕೊಂಡು ಬರಲಾಯಿತು. ಶಿರೂರು ಶ್ರೀಗಳ ಪಾರ್ಥಿಕ ಶರೀರವನ್ನು ಶಿರೂರು ಮಠದ ದ್ವಂದ್ವ ಮಠವಾದ ಸೋದೆ ಮಠ ನೀಡಿದ ಬಿದಿರಿನ ಬುಟ್ಟಿಯಲ್ಲಿ ಕುಳ್ಳಿರಿಸಿ ತರಲಾಗಿತ್ತು.

ಮಣಿಪಾಲ ಶವಾಗಾರದಿಂದ ಅಲಂಕೃತ ತೆರೆದ ಜೀಪಿನಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ಮಠಕ್ಕೆ ಕರೆತರುವಾಗ ಮಣಿಪಾಲ-ಉಡುಪಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ಜನರು ಅವರ ಅಂತಿಮ ದರ್ಶನ ಪಡೆದರು. ಕಲ್ಸಂಕ, ಬಡಗುಪೇಟೆಯ ಮೂಲಕ ಪಾರ್ಥಿವ ಶರೀರವನ್ನು ಶಿರೂರು ಮಠಕ್ಕೆ ತಂದು ಕೆಲವು ಸಾಂಪ್ರದಾಯಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಮಠದೊಳಗಿನ ಗುಡಿಯ ಮುಂದೆ ಇರಿಸಿ ದೇವರಿಗೆ ಆರತಿ ಬೆಳಗಲಾಯಿತು.

ಬಳಿಕ ಅಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಿಇಒ ಶಿವಾನಂದ ಕಾಪಸಿ, ಜಿಪಂ ಅಧ್ಯಕ್ಷ ದಿನಕರಬಾಬು, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅವರು ಅಂತಿಮ ದರ್ಶನ ಪಡೆದರು. ಅನಂತರ ಮಠದಲ್ಲಿ ನೆರೆದಿದ್ದ ನೂರಾರು ಮಂದಿ ಅಭಿಮಾನಿಗಳು, ಭಕ್ತರು ಅವರ ಅಂತಿಮ ದರ್ಶನ ಪಡೆದರು.

ಬಳಿಕ ಪಾರ್ಥಿವ ಶರೀರವನ್ನು ರಥಬೀದಿಯ ಎದುರು ಮಠದ ಜಗಲಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ರಥಬೀದಿಯಲ್ಲಿ ಇಂದು ಅಪರಾಹ್ನದಿಂದಲೇ ಕಾದು ಕುಳಿತಿದ್ದ ಸಾವಿರಾರು ಮಂದಿ ಸರದಿ ಸಾಲಿನಲ್ಲಿ ಬಂದು ಸ್ವಾಮೀಜಿಯ ಅಂತಿಮ ದರ್ಶನ ಪಡೆದರು. ಶಿರೂರು ಮಠ ಹಾಗೂ ರಥಬೀದಿಯಲ್ಲಿ ಪೊಲೀಸರ ಭದ್ರೆಯನ್ನು ವ್ಯವಸ್ಥೆ ಗೊಳಿಸಲಾಗಿತ್ತು.

ಪಲಿಮಾರು ಶ್ರೀಗಳಿಂದ ತುಳಸಿ ಮಾಲಾರ್ಪಣೆ: ಸಾರ್ವಜನಿಕರ ದರ್ಶನದ ಬಳಿಕ ಶಿರೂರುಶ್ರೀಗಳ ಪಾರ್ಥಿವ ಶರೀರವನ್ನು ಅಲ್ಲೇ ಹತ್ತಿರದಲ್ಲಿದ್ದ ಕನಕ ಗೋಪುರಕ್ಕೆ ತಂದು ಕನಕನ ಕಿಂಡಿಯ ಎದಿರು ಇರಿಸಲಾಯಿತು. ಇಲ್ಲಿಗೆ ಆಗಮಿಸಿದ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಕನಕನ ಕಿಂಡಿಯ ಮೂಲಕ ದೇವರ ದರ್ಶನ ಮಾಡಿಸಿ ಆರತಿಯನ್ನು ಬೆಳಗಿಸಿ ಹರಿಪಾದಗೈದ ಶಿರೂರು ಶ್ರೀಪಾದರ ದೇಹಕ್ಕೆ ತುಳಸಿ ಮಾಲಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಾಪು ಇವರು ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿದರು.

ನಂತರ ರಥಬೀದಿಗೆ ಒಂದು ಸುತ್ತು ಬಂದು ವಿದ್ಯೋದಯ ಶಾಲಾ ಮಾರ್ಗವಾಗಿ ಕಲ್ಸಂಕಕ್ಕೆ ಸಾಗಿ ಅಲ್ಲಿಂದ ಹಿರಿಯಡ್ಕದ ಸಮೀಪ ಇರುವ ಶಿರೂರು ಮೂಲ ಮಠಕ್ಕೆ ತೆರೆದ ಜೀಪಿನಲ್ಲಿ ಪಾರ್ಥಿಕ ಶರೀರವನ್ನು ಅಂತಿಮ ಕ್ರಿಯೆಗಾಗಿ ಕೊಂಡೊಯ್ಯಲಾಯಿತು.

ಶಿರೂರು ಶ್ರೀಗಳು ಉಡುಪಿಯ ಅಷ್ಟಮಠಗಳ ಸ್ವಾಮೀಜಿಗಳಲ್ಲಿ ಒಬ್ಬರಾಗಿದ್ದರೂ, ಅವರ ಅಂತಿಮ ದರ್ಶನಕ್ಕೆ ಪರ್ಯಾಯ ಪಲಿಮಾರು ಶ್ರೀಗಳನ್ನು ಹೊರತು ಪಡಿಸಿ ದ್ವಂದ್ವ ಮಠವಾದ ಸೋದೆ ಮಠದ ಸ್ವಾಮೀಜಿ ಸೇರಿದಂತೆ ಯಾರೊಬ್ಬರು ಬಾರದೇ ತಮ್ಮ ಅಸಮಧಾನವನ್ನು ಹೊರಹಾಕಿದರು. ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥರು ದೂರದ ಹುಬ್ಬಳ್ಳಿಯಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X