Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಇನ್ನು ಮುಂದೆ ಒಮ್ಮೆಗೆ 5 ಚಾಟ್ ಗಳಿಗೆ...

ಇನ್ನು ಮುಂದೆ ಒಮ್ಮೆಗೆ 5 ಚಾಟ್ ಗಳಿಗೆ ಮಾತ್ರ ಮೆಸೇಜ್ ಫಾರ್ವರ್ಡ್ ಮಾಡಲು ಅವಕಾಶ

ವಾಟ್ಸ್ಯಾಪ್ ನ ಹೊಸ ಕ್ರಮದ ಬಗ್ಗೆ ತಿಳಿದುಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ20 July 2018 12:18 PM IST
share
ಇನ್ನು ಮುಂದೆ ಒಮ್ಮೆಗೆ 5 ಚಾಟ್ ಗಳಿಗೆ ಮಾತ್ರ ಮೆಸೇಜ್ ಫಾರ್ವರ್ಡ್ ಮಾಡಲು ಅವಕಾಶ

ಹೊಸದಿಲ್ಲಿ, ಜು.20: ಭಾರತದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶಗಳನ್ನು ನಂಬಿ ಹಲವಾರು ಗುಂಪು ಥಳಿತ ಪ್ರಕರಣಗಳು ನಡೆದಿರುವ ಹಿನ್ನೆಲೆಯಲ್ಲಿ ವಾಟ್ಸ್ಯಾಪ್ ತನ್ನ ಭಾರತೀಯ ಬಳಕೆದಾರರಿಗೆ ಒಮ್ಮೆಗೆ ಐದಕ್ಕಿಂತ ಹೆಚ್ಚು ಚಾಟ್ ಗಳಿಗೆ ಸಂದೇಶಗಳನ್ನು ಫಾರ್ವರ್ಡ್ ಮಾಡಲು ಅನುಮತಿ ನೀಡದೇ ಇರಲು ನಿರ್ಧರಿಸಿದೆ.  ಅಷ್ಟೇ ಅಲ್ಲದೆ ಮೀಡಿಯಾ ಮೆಸೇಜ್ ಪಕ್ಕದಲ್ಲಿರುವ ಕ್ವಿಕ್ ಫಾರ್ವರ್ಡ್  ಬಟನ್ ಅನ್ನೂ  ತೆಗೆದು ಹಾಕಿ ನಕಲಿ ಸುದ್ದಿಗಳು ಹರಡದಂತೆ ಕ್ರಮ ಕೈಗೊಳ್ಳುವುದಾಗಿ ಸಂಸ್ಥೆ ತಿಳಿಸಿದೆ.

ತನ್ನ ಬ್ಲಾಗ್ ಪೋಸ್ಟ್ ಒಂದರಲ್ಲಿ ಈ ಬಗ್ಗೆ ಹೇಳಿಕೊಂಡ ವಾಟ್ಸ್ಯಾಪ್,  ವಿಶ್ವದ ಇತರ ಯಾವುದೇ ದೇಶಕ್ಕಿಂತ ಭಾರತದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮೆಸೇಜುಗಳು, ಫೋಟೋಗಳು ಹಾಗೂ ವೀಡಿಯೊಗಳು ಫಾರ್ವರ್ಡ್ ಆಗುತ್ತಿವೆ. ವಿಶ್ವದಾದ್ಯಂತ ವಾಟ್ಸ್ಯಾಪ್ ಗೆ ಒಂದು ಬಿಲಿಯನ್ ಬಳಕೆದಾರರಿದ್ದರೆ ಭಾರತದಲ್ಲಿ ಈ ಸಂಖ್ಯೆ 200 ಮಿಲಿಯನ್ ಗೂ ಅಧಿಕ.

ನಕಲಿ ಸುದ್ದಿಗಳನ್ನು ನಂಬಿ ದೇಶದಲ್ಲಿ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಭಾರತ ಸರಕಾರ ಈಗಾಗಲೇ ವಾಟ್ಸ್ಯಾಪ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ಇತ್ತೀಚೆಗೆ ಇನ್ನೊಂದು ನೋಟಿಸ್ ಜಾರಿಗೊಳಿಸಿರುವ ಕೇಂದ್ರ ಈ ಸಮಸ್ಯೆಗೆ ಯಾವ ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿತ್ತು.

ಸರಕಾರದ ಎರಡನೇ ನೋಟಿಸಿಗೆ ಇನ್ನಷ್ಟೇ ಉತ್ತರಿಸಬೇಕಿರುವ ವಾಟ್ಸ್ಯಾಪ್ ಮೊದಲ ನೋಟಿಸಿಗೆ ಈ ಹಿಂದೆಯೇ ಸ್ಪಂದಿಸಿದ್ದು  ಸರಕಾರ, ನಾಗರಿಕ ಸಮಾಜ ಮತ್ತು ತಂತ್ರಜ್ಞಾನ ಕಂಪೆನಿಗಳ ಸಹಕಾರದಿಂದ  ನಕಲಿ ಸುದ್ದಿಗಳನ್ನು ತಡೆಯಬಹುದು. ತನಗೆ ಸ್ಪ್ಯಾಮ್ ನಿಯಂತ್ರಿಸುವ ಸಾಮರ್ಥ್ಯವಿದೆಯಾದರೂ ಖಾಸಗಿ ಸಂದೇಶಗಳನ್ನು ತಿಳಿಯುವುದು ಅಸಾಧ್ಯ, ಬಳಕೆದಾರರ ವರದಿಗಳ ಆಧಾರದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X