Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಪ್ಪು ಮಾಹಿತಿ ಒದಗಿಸಿ ವಿವಾಹ ಮಾಡಿದ...

ತಪ್ಪು ಮಾಹಿತಿ ಒದಗಿಸಿ ವಿವಾಹ ಮಾಡಿದ ವಿಚಾರ: ವಿಚ್ಛೇದನ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪತಿ

ವಾರ್ತಾಭಾರತಿವಾರ್ತಾಭಾರತಿ20 July 2018 10:25 PM IST
share
ತಪ್ಪು ಮಾಹಿತಿ ಒದಗಿಸಿ ವಿವಾಹ ಮಾಡಿದ ವಿಚಾರ: ವಿಚ್ಛೇದನ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪತಿ

ಬೆಂಗಳೂರು, ಜು.20: ಮದುವೆ ವೇಳೆ ನನ್ನ ಪತ್ನಿಯ ವಯಸ್ಸು ಹಾಗೂ ಜಾತಕ ಕುರಿತು ನನಗೆ ತಪ್ಪು ಮಾಹಿತಿ ಒದಗಿಸಿ ಮದುವೆ ಮಾಡಿಸಿದ್ದಾರೆ. ಸತ್ಯಾಂಶ ಮರೆ ಮಾಡಿ ಮದುವೆ ನೆರವೇರಿಸಿರುವ ಕಾರಣ ನನಗೆ ವಿಚ್ಛೇದನ ಮಂಜೂರು ಮಾಡಿ’ ಹೀಗೆಂದು ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಗೆ ಅರ್ಜಿ ದಾಖಲಿಸಿದ್ದಾರೆ.

ವಿವಾಹ ವಿಚ್ಛೇದನಕ್ಕಾಗಿ ಇಂತಹದೊಂದು ಅಂಶ ಮುಂದಿಟ್ಟುಕೊಂಡು ಹೈಕೋರ್ಟ್ ಮೆಟ್ಟಿಲೇರಿದವರು ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿ. ಅರ್ಜಿದಾರನ ಈ ಮನವಿ ಆಲಿಸಿದ ನ್ಯಾಯಮೂರ್ತಿ ಬೋಪಣ್ಣ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ, ಅರ್ಜಿದಾರನ ಪತ್ನಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿದೆ. ಹಾಗೆಯೇ, ವ್ಯಾಜ್ಯದ ವೆಚ್ಚಕ್ಕೆಂದು ಪತ್ನಿಗೆ 10 ಸಾವಿರ ರೂ. ಪಾವತಿಸುವಂತೆಯೂ ರವಿ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ರವಿ ಹಾಗೂ ಶೃತಿ(ಇಬ್ಬರ ಹೆಸರು ಬದಲಿಸಲಾಗಿದೆ) ಅವರು ವಧು-ವರರ ಕೇಂದ್ರದ ಮೂಲಕ ಪರಿಚಿತರಾಗಿದ್ದರು. ನಂತರ ಪೋಷಕರ ಒಪ್ಪಿಗೆ ಮೇರೆಗೆ 2013ರಲ್ಲಿ ಮದುವೆ ಮಾಡಿಕೊಂಡಿದ್ದರು. ಆದರೆ, ಅದೇ ವರ್ಷ ವಿವಾಹ ವಿಚ್ಛೇದನ ಕೋರಿ ಶಿವಮೊಗ್ಗದ ಕೌಟುಂಬಿಕ ನ್ಯಾಯಾಲಯಕ್ಕೆ ರವಿ ಅರ್ಜಿ ಸಲ್ಲಿಸಿದ್ದರು.

ನನ್ನ ಪತ್ನಿ ಶೃತಿಯು ಹುಟ್ಟಿರುವುದು 1985ನೆ ವರ್ಷದಲ್ಲಿ. ಆದರೆ, 1987ರಲ್ಲಿ ಹುಟ್ಟಿರುವುದಾಗಿ ಆಕೆಯ ಪೋಷಕರು ವಧು-ವರರ ಕೇಂದ್ರಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. 1985ರಲ್ಲಿ ಶೃತಿ ಹುಟ್ಟಿರುವುದನ್ನು ಆಕೆಯ ಶಾಲಾ ದಾಖಲೆಗಳು ದೃಢಪಡಿಸುತ್ತವೆ. ಜತೆಗೆ, ನನ್ನ ಹಾಗೂ ಶೃತಿಯ ಜಾತಕವೂ ಹೊಂದಿಕೆಯಾಗಿರಲಿಲ್ಲ. ಜಾತಕ ಸರಿ ಹೊಂದುತ್ತದೆ ಎಂದು ತಿಳಿಸಲಾಗಿತ್ತು. ಹೀಗಾಗಿ, ಸತ್ಯಾಂಶವನ್ನು ಮರೆ ಮಾಚಿ ಮಾದುವೆ ಮಾಡಿರುವುದರಿಂದ ನನ್ನ ಹಾಗೂ ಶೃತಿಯ ಮದುವೆಯನ್ನು ಅನೂರ್ಜಿತಗೊಳಿಸಿ, ವಿಚ್ಛೇದನ ಮಂಜೂರು ಮಾಡಬೇಕು ಎಂದು ತನ್ನ ಅರ್ಜಿಯಲ್ಲಿ ರವಿ ಕೋರಿದ್ದರು.

ರವಿ ಅವರ ಮನವಿಯನ್ನು ಶಿವಮೊಗ್ಗ ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿತ್ತು. ಶೃತಿಯ ಅವರ ಹುಟ್ಟಿದ ದಿನಾಂಕ ಹಾಗೂ ವರ್ಷದ ಕುರಿತ ದಾಖಲೆಗಳನ್ನು ತಹಶೀಲ್ದಾರ್ ಅವರೇ ಪರಿಶೀಲಿಸಿ ದೃಢೀಕರಣ ಮಾಡಬೇಕಿದೆ. ತಹಶೀಲ್ದಾರ್ ಅವರಿಂದ ದೃಢೀಕರಿಸದ ಹಿನ್ನೆಲೆಯಲ್ಲಿ ಮದುವೆ ಅನೂರ್ಜಿತಗೊಳಿಸಿ, ವಿಚ್ಛೇದನ ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಕೌಟುಂಬಿಕ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರವಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ವಿಚಾರಣೆ ವೇಳೆ ರವಿ ಅವರ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಪೀಠ, ಸಾಮಾನ್ಯವಾಗಿ ವಿಚ್ಛೇದನ ಪ್ರಕರಣದಲ್ಲಿ ದಂಪತಿಯನ್ನು ರಾಜೀಸಂಧಾನಕ್ಕಾಗಿ ಸಂಧಾನಕಾರರ ಬಳಿಗೆ ಕಳುಹಿಸಿಕೊಡಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ದಂಪತಿಯನ್ನು ಸಂಧಾನಕಾರರ ಬದಲಿಗೆ ಜ್ಯೋತಿಷಿಯೊಬ್ಬರ ಬಳಿಗೆ ಕಳುಹಿಸಿಕೊಡಬೇಕು ಎಂದು ಹಾಸ್ಯ ಚಟಾಕಿ ಹಾರಿಸಿತು. ಇದರಿಂದ ಕೋರ್ಟ್ ಹಾಲ್ ನಗೆಗಡಲಲ್ಲಿ ತೇಲಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X