Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ: ಉಚಿತ ಬಸ್‍ಪಾಸ್ ವಿತರಣೆಗೆ...

ಕೋಲಾರ: ಉಚಿತ ಬಸ್‍ಪಾಸ್ ವಿತರಣೆಗೆ ಆಗ್ರಹಿಸಿ ಎಸ್‍ಎಫ್‍ಐ ಧರಣಿ

ವಾರ್ತಾಭಾರತಿವಾರ್ತಾಭಾರತಿ20 July 2018 10:37 PM IST
share
ಕೋಲಾರ: ಉಚಿತ ಬಸ್‍ಪಾಸ್ ವಿತರಣೆಗೆ ಆಗ್ರಹಿಸಿ ಎಸ್‍ಎಫ್‍ಐ ಧರಣಿ

ಕೋಲಾರ,ಜು.20: ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಎಸ್‍ಎಫ್‍ಐ ಸಂಘಟನೆ ವತಿಯಿಂದ ನಗರದ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ನಗರದ ಕಾಲೇಜು ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕೂಡಲೇ ಬಸ್ ಪಾಸ್ ವಿತರಣೆಗೆ ಕ್ರಮಕೈಗೊಳ್ಳಬೇಕು, ಅಂತರಾಜ್ಯ ನಾಮಫಲಕವಿರುವ ಬಸ್‍ಗಳಲ್ಲಿ ವಿದ್ಯಾರ್ಥಿಗಳ ಓಡಾಟಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಸೇವೆ ನೀಡುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಎಸ್‍ಎಫ್‍ಐ ಮುಖಂಡರು, ಉಚಿತ ಬಸ್‍ಪಾಸ್ ನೀಡುವ ಕುರಿತು ನಿರಂತರವಾಗಿ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದರೂ ಸಹ ರಾಜ್ಯ ಸರಕಾರವು ಬಜೆಟ್‍ನಲ್ಲಿ ಸಂಪೂರ್ಣವಾಗಿ ಕಡೆಗಣಿಸಿ, ಬಸ್‍ಪಾಸ್ ನೀಡದೆ ವಂಚಿಸಿದೆ ಎಂದು ಆರೋಪಿಸಿದರು.

690 ಕೋಟಿ ರೂ.ಗಳನ್ನು ನೀಡಿದರೆ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಈ ಯೋಜನೆಗೆ ಸರಕಾರ ಹಣದ ಕೊರತೆಯ ಸಬೂಬು ಹೇಳುವುದು ಸರಿಯಲ್ಲ. ಸರಕಾರ ನೀಡುವ ಉಚಿತ ಬಸ್‍ಪಾಸ್‍ನಿಂದಾಗಿ ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರ ಮಕ್ಕಳ ಶೈಕ್ಷಣಿಗೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು.

ವಿದ್ಯಾರ್ಥಿಗಳು ಉಚಿತ ಬಸ್‍ಪಾಸ್ ಸಿಗುತ್ತದೆ ಎಂಬ ಭರವಸೆಯಿಂದಾಗಿ ಇಲ್ಲಿಯವರೆಗೂ ಕಾದು, ಇದೀಗ ಹಣ ನೀಡಿ ಬಸ್‍ಪಾಸ್‍ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕೂಡಲೇ ಉಚಿತ ಬಸ್‍ಪಾಸ್ ನೀಡುವ ಕುರಿತು ಘೋಷಿಸಿ, ಹಣ ಮೀಸಲಿಡಬೇಕು ಎಂದು ಆಗ್ರಹಿಸಿದ ಅವರು, ಇಲ್ಲವಾದಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಂಡು ವಿಧಾನಸೌಧ ಚಲೋ ಹಮ್ಮಿಕೊಳ್ಳಬೇಕಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ವಿದ್ಯಾರ್ಥಿಗಳನ್ನು ಕಂಡರೆ ಕೆಲ ಚಾಲಕರು, ನಿರ್ವಾಹಕರು ಬಸ್ ನಿಲ್ಲಿಸದೆ ಹೋಗುತ್ತಿದ್ದಾರೆ. ಜತೆಗೆ ಅಂತರಾಜ್ಯ ವಾಹನ ಎಂದು ಫಲಕ ಅಳವಡಿಸಿರುವ ಬಸ್ಸುಗಳಲ್ಲಿ ವಿದ್ಯಾರ್ಥಿಗಳ ಓಡಾಟಕ್ಕೆ ಅವಕಾಶ ನೀಡದಿರುವುದು ಗಂಭೀರವಾದ ಸಮಸ್ಯೆಯಾಗಿದೆ. ಕೂಡಲೇ ಸಮಸ್ಯೆಗಳನ್ನು ಬಗೆಹರಿಸಿ, ಓಡಾಟಕ್ಕೆ ಅವಕಾಶ ಮಾಡಿಕೊಡಬೇಕು. ಗ್ರಾಮೀಣ ಭಾಗದ ಬಹುತೇಕ ಹಳ್ಳಿಗಳಿಗೆ ಬಸ್ ಸೌಲಭ್ಯ ಸಮರ್ಪಕವಾಗಿಲ್ಲ. ವಿದ್ಯಾರ್ಥಿಗಳು, ಸಾರ್ವಜನಿಕರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಕೂಡಲೇ ಸಹಾಯವಾಣಿಯನ್ನು ಆರಂಭಿಸಿದರೆ, ಜನರು ಸಮಸ್ಯೆಗಳನ್ನು ಹೇಳಿಕೊಳ್ಳಲು ಅನುಕೂಲ ಆಗುತ್ತದೆ. ಕರೆ ಬಂದ ತಕ್ಷಣ ಕೂಡಲೇ ಪರಿಶೀಲಿಸಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಕೆ.ವಾಸುದೇವರೆಡ್ಡಿ, ಕಾರ್ಯದರ್ಶಿ ಎನ್.ಶಿವಪ್ಪ, ತಾಲೂಕು ಅಧ್ಯಕ್ಷೆ ಗಾಯಿತ್ರಿ, ಕಾರ್ಯದರ್ಶಿ ಶ್ರೀಕಾಂತ್, ಮುಖಂಡರಾದ ಮಣಿ, ಭರತ್, ಅವಿನಾಶ್, ಕಾವ್ಯಾಂಜಲಿ, ಗೀತಾ, ಶ್ರಾವಣಿ, ಮಾಲಾ, ಸುಶ್ಮಿತಾ, ಸಹನ, ಎಸ್.ಅಂಕಿತ, ರಮ್ಯ ಮತ್ತಿತರರು ಉಪಸ್ಥಿತರಿದ್ದರು.

ಉಚಿತ ಬಸ್‍ಪಾಸ್‍ಗೆ ಆಗ್ರಹಿಸಿ ಎಸ್‍ಎಫ್‍ಐ ವತಿಯಿಂದ ಮುತ್ತಿಗೆ ಹಾಕಲಾಗುತ್ತದೆ ಎನ್ನುವ ಮಾಹಿತಿ ಇದ್ದುದರಿಂದ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಗೇಟ್‍ಗೆ ಶುಕ್ರವಾರ ಬೀಗ ಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡ ಸಂಘಟನೆಯ ಮುಖಂಡರು ಸಿಬ್ಬಂದಿಯ ವಿರೋಧದ ನಡುವೆಯೂ ಗೇಟ್ ಹಾರಿ ಒಳ ನುಗ್ಗಿ, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಚಕಮಕಿಗಳು ನಡೆದವು.

ಸ್ಥಳಕ್ಕಾಗಮಿಸಿದ ನಗರಠಾಣೆ ವೃತ್ತ ನಿರೀಕ್ಷಕ ಲೋಕೇಶ್, ನೀವು ಈ ರೀತಿ ವರ್ತಿಸುವುದು ಸರಿಯಲ್ಲ. ಅಧಿಕಾರಿಗಳು ಇಲ್ಲಿಗೆ ಬರುತ್ತಾರೆ, ಮನವಿ ಸ್ವೀಕರಿಸುತ್ತಾರೆ. ಕಾನೂನು ಮೀರಿದರೆ ನಾವೂ ಸಹ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಬಳಿಕ ಪ್ರತಿಭಟನಾಕಾರರು ಸಮಾಧಾನಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X