Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ​ಫುಟ್ಬಾಲ್: ಚೀನಾ ವಿರುದ್ಧ ಪ್ರದರ್ಶನ...

​ಫುಟ್ಬಾಲ್: ಚೀನಾ ವಿರುದ್ಧ ಪ್ರದರ್ಶನ ಪಂದ್ಯ ಆಡಲು ಭಾರತ ತಯಾರಿ

ವಾರ್ತಾಭಾರತಿವಾರ್ತಾಭಾರತಿ20 July 2018 11:46 PM IST
share
​ಫುಟ್ಬಾಲ್: ಚೀನಾ ವಿರುದ್ಧ ಪ್ರದರ್ಶನ ಪಂದ್ಯ ಆಡಲು ಭಾರತ ತಯಾರಿ

ಹೊಸದಿಲ್ಲಿ, ಜು.20: 2019ರಲ್ಲಿ ನಡೆಯುವ ಏಶ್ಯಾಕಪ್‌ನ ಪೂರ್ವ ತಯಾರಿಯ ಭಾಗವಾಗಿ ಅಕ್ಟೋಬರ್‌ನಲ್ಲಿ ಭಾರತದ ಫುಟ್ಬಾಲ್ ತಂಡ ಚೀನಾ ವಿರುದ್ಧ ಅಂತರ್‌ರಾಷ್ಟ್ರೀಯ ಪ್ರದರ್ಶನ ಪಂದ್ಯವನ್ನಾಡಲು ನಿರ್ಧರಿಸಿದೆ ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಶುಕ್ರವಾರ ತಿಳಿಸಿದೆ.

ಫಿಫಾ ರ್ಯಾಂಕಿನಲ್ಲಿ 97ನೇ ಸ್ಥಾನದಲ್ಲಿರುವ ಭಾರತ 75ನೇ ರ್ಯಾಂಕಿನ ಚೀನಾ ವಿರುದ್ಧ ನಡೆಯಲಿರುವ ಸೌಹಾರ್ದ ಪಂದ್ಯ ವನ್ನು ಆಡಲು ಬೀಜಿಂಗ್‌ಗೆ ಪ್ರಯಾಣ ಬೆಳೆಸಲಿದೆ.

ಮುಂಬರುವ ದಿನಗಳಲ್ಲಿ ಪ್ರದರ್ಶನ ಪಂದ್ಯದ ದಿನಾಂಕ ವನ್ನು ಘೋಷಿಸಲಾಗುತ್ತದೆ. ಎಐಎಫ್‌ಎಫ್ ಅಕ್ಟೋಬರ್ 13 ರಂದು ಪಂದ್ಯ ನಡೆಸಲು ದಿನ ನಿಗದಿಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ಹಾಗೂ ಚೀನಾ 17 ಬಾರಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ನೆಲದಲ್ಲಿ ಆಡಿದ್ದವು. 1997ರಲ್ಲಿ ಕೊಚ್ಚಿಯಲ್ಲಿ ನಡೆದ ನೆಹರೂ ಕಪ್‌ನಲ್ಲಿ ಕೊನೆಯ ಬಾರಿ ಎರಡೂ ತಂಡಗಳು ಆಡಿದ್ದವು.

ಭಾರತದ ಅಂಡರ್-16 ಫುಟ್ಬಾಲ್ ತಂಡ ನಾಲ್ಕು ರಾಷ್ಟ್ರಗಳ ಆಹ್ವಾನಿತ ಟೂರ್ನಮೆಂಟ್‌ನಲ್ಲಿ ಭಾಗವಹಿಸಲು ಇತ್ತೀಚೆಗೆ ಚೀನಾಕ್ಕೆ ಭೇಟಿ ನೀಡಿತ್ತು. ಟೂರ್ನಿಯಲ್ಲಿ ಥಾಯ್ಲೆಂಡ್ ಹಾಗೂ ದಕ್ಷಿಣ ಕೊರಿಯಾ ತಂಡಗಳು ಭಾಗವಹಿಸಿವೆ.

‘‘ಚೀನಾ ಹಾಗೂ ಭಾರತ ಈಗ ಜಾಗತಿಕ ಮಟ್ಟದಲ್ಲಿ ವೇಗ ವಾಗಿ ಬೆಳೆಯುತ್ತಿರುವ ಎರಡು ಉದಯೋನ್ಮುಖ ಫುಟ್ಬಾಲ್ ತಂಡಗಳಾಗಿವೆ. ಚೀನಾದ ಫುಟ್ಬಾಲ್ ಸಂಸ್ಥೆಯೊಂದಿಗೆ ತಿಂಗಳ ಕಾಲ ನಡೆದ ಚರ್ಚೆಯ ಬಳಿಕ ಒಮ್ಮತಕ್ಕೆ ಬಂದಿರುವುದು ಸಂತೋಷದ ವಿಚಾರ’’ ಎಂದು ಎಐಎಫ್‌ಎಫ್ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ ಹೇಳಿದ್ದಾರೆ.

ಭಾರತ ತಂಡ ಚೀನಾ ವಿರುದ್ಧ ಇನ್ನಷ್ಟೇ ಗೆಲುವಿನ ಖಾತೆ ತೆರೆಯಬೇಕಾಗಿದೆ. ಕಳೆದ 17 ಪಂದ್ಯಗಳಲ್ಲಿ ಚೀನಾ 12ರಲ್ಲಿ ಜಯ ಸಾಧಿಸಿದ್ದು ಉಳಿದ 5 ಪಂದ್ಯ ಗಳು ಡ್ರಾನಲ್ಲಿ ಕೊನೆಗೊಂಡಿವೆ. ಭಾರತ ಫುಟ್ಬಾಲ್ ತಂಡ ಕಳೆದ ಕೆಲವು ವರ್ಷಗಳಿಂದ ಅಜೇಯ ದಾಖಲೆ ಕಾಯ್ದುಕೊಂಡಿದೆ. 2016ರ ಜೂನ್‌ನಿಂದ2017ರ ನವೆಂಬರ್‌ನ ತನಕ 12 ಅಧಿಕೃತ ಪಂದ್ಯ ಗಳಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X