Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲಿ ಪಡೆಗಳಿಂದ ಗಾಝಾ ನಗರದ ಮೇಲೆ...

ಇಸ್ರೇಲಿ ಪಡೆಗಳಿಂದ ಗಾಝಾ ನಗರದ ಮೇಲೆ ಸರಣಿ ದಾಳಿ

3 ಹಮಾಸ್ ಸದಸ್ಯರು ಮೃತ್ಯು; ಪ್ರತಿಭಟನೆಯಲ್ಲಿ ಓರ್ವ ಫೆಲೆಸ್ತೀನ್ ಬಲಿ

ವಾರ್ತಾಭಾರತಿವಾರ್ತಾಭಾರತಿ21 July 2018 8:22 PM IST
share
ಇಸ್ರೇಲಿ ಪಡೆಗಳಿಂದ ಗಾಝಾ ನಗರದ ಮೇಲೆ ಸರಣಿ ದಾಳಿ

ಗಾಝಾ ಸಿಟಿ (ಫೆಲೆಸ್ತೀನ್), ಜು. 21: ಇಸ್ರೇಲಿ ಪಡೆಗಳು ಶುಕ್ರವಾರ ಗಾಝಾ ಪಟ್ಟಿಯಲ್ಲಿ ಸರಣಿ ದಾಳಿಗಳನ್ನು ನಡೆಸಿದ್ದು, ಹಮಾಸ್ ಸಂಘಟನೆಯ ಮೂವರು ಸದಸ್ಯರು ಮೃತಪಟ್ಟಿದ್ದಾರೆ.

ಗಾಝಾ ಸಿಟಿಯ ಆಕಾಶದಲ್ಲಿ ಬೆಂಕಿಯುಂಡೆಗಳು ಸ್ಫೋಟಗೊಂಡರೆ, ತನ್ನ ಭೂಭಾಗಗಳತ್ತ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಈ ನಡುವೆ, ಮಧ್ಯಪ್ರವೇಶಿಸಿರುವ ವಿಶ್ವಸಂಸ್ಥೆಯು ಸಂಘರ್ಷ ವಲಯದಿಂದ ಹಿಂದೆ ಸರಿಯುವಂತೆ ಸಂಬಂಧಪಟ್ಟ ಎಲ್ಲ ಪಕ್ಷಗಳನ್ನು ಒತ್ತಾಯಿಸಿದೆ.

ಇಸ್ರೇಲ್ ಜೊತೆಗಿನ ಗಡಿ ಸಮೀಪ ಪ್ರತಿಭಟನೆ ಮಾಡುತ್ತಿದ್ದ ಫೆಲೆಸ್ತೀನಿಯರ ಮೇಲೆ ಇಸ್ರೇಲ್ ಪಡೆಗಳು ಗುಂಡು ಹಾರಿಸಿದಾಗ ಇನ್ನೋರ್ವ ಫೆಲೆಸ್ತೀನಿ ಮೃತಪಟ್ಟಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಹಮಾಸ್ ಹೊಸದಾಗಿ ಕ್ಷಿಪಣಿ ಹಾರಿಸಿದರೆ ‘ಮತ್ತಷ್ಟು ಕಠಿಣ’ ಪ್ರತಿಕ್ರಿಯೆಯನ್ನು ನೀಡುವುದಾಗಿ ಇಸ್ರೇಲ್ ರಕ್ಷಣಾ ಸಚಿವ ಅವಿಗ್ಡರ್ ಲೀಬರ್‌ಮನ್ ಎಚ್ಚರಿಸಿದ್ದಾರೆ. ಈಗಾಗಲೇ ಫೆಲೆಸ್ತೀನ್ ನೆಲದಿಂದ ಮೂರು ಕ್ಷಿಪಣಿಗಳು ಇಸ್ರೇಲ್ ಭೂಭಾಗದತ್ತ ಹಾರಿವೆ ಎಂದು ಇಸ್ರೇಲ್ ಸೇನೆ ಹೇಳಿದೆ. ಆ ಪೈಕಿ ಎರಡು ಕ್ಷಿಪಣಿಗಳನ್ನು ಇಸ್ರೇಲ್ ಸೇನೆ ಹೊಡೆದುರುಳಿಸಿದೆ.

ಗಾಝಾ-ಇಸ್ರೇಲ್ ಗಡಿಯಲ್ಲಿ ಹೊಸದಾಗಿ ಪ್ರತಿಭಟನೆಗಳು ನಡೆದ ವೇಳೆ, ತನ್ನ ಸೈನಿಕರ ಮೇಲೆ ಗುಂಡಿನ ದಾಳಿ ನಡೆದಾಗ ತನ್ನ ವಿಮಾನ ಮತ್ತು ಟ್ಯಾಂಕ್‌ಗಳು ಪ್ರತಿದಾಳಿ ನಡೆಸಿದವು ಎಂದು ಇಸ್ರೇಲ್ ಸೇನೆ ಹೇಳಿದೆ.

ಎಲ್ಲರೂ ಸಂಘರ್ಷದ ಹೊಸ್ತಿಲಿನಿಂದ ಹಿಂದೆ ಸರಿಯಬೇಕು: ವಿಶ್ವಸಂಸ್ಥೆ

ವಲಯದಲ್ಲಿ ಸಂಘರ್ಷ ಸ್ಫೋಟಗೊಳ್ಳದಂತೆ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆಯಲ್ಲಿ ವಿಶ್ವಸಂಸ್ಥೆಯ ಪ್ರತಿನಿಧಿಯಾಗಿರುವ ನಿಕೊಲೇ ಮ್ಲಾದೆನೊವ್ ಹೇಳಿದ್ದಾರೆ.

‘‘ಗಾಝಾದಲ್ಲಿರುವ ಪ್ರತಿಯೊಬ್ಬರೂ ಸಂಘರ್ಷದ ಹೊಸ್ತಿಲಿನಿಂದ ಹಿಂದೆ ಬರಬೇಕಾದ ಅಗತ್ಯವಿದೆ. ಮುಂದಿನ ವಾರವಲ್ಲ, ನಾಳೆಯಲ್ಲ, ಇಂದೇ ಸಂಘರ್ಷ ನಿಲ್ಲಿಸಬೇಕು’’ ಎಂದು ಅವರು ಹೇಳಿದರು.

‘‘ಫೆಲೆಸ್ತೀನಿಯರು ಮತ್ತು ಇಸ್ರೇಲಿಗರನ್ನು ಇನ್ನೊಂದು ಯುದ್ಧಕ್ಕೆ ಪ್ರಚೋದಿಸುವವರು ಯಶಸ್ವಿಯಾಗಬಾರದು’’ ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X