Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ಆಲೋಚನೆಗಳೊಂದಿಗೆ ದಸರಾ ಆಚರಣೆಗೆ...

ಹೊಸ ಆಲೋಚನೆಗಳೊಂದಿಗೆ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಅಭಿರಾಮ್ ಜಿ.ಶಂಕರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2018 10:00 PM IST
share
ಹೊಸ ಆಲೋಚನೆಗಳೊಂದಿಗೆ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಅಭಿರಾಮ್ ಜಿ.ಶಂಕರ್ ಸೂಚನೆ

ಮೈಸೂರು,ಜು.21: ಜಂಬೂಸಾವರಿಯನ್ನು ಈ ಬಾರಿ ಇನ್ನೂ ಹೆಚ್ಚು ಆಕರ್ಷಕವಾಗಿ ಆಚರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ. ಹೀಗಾಗಿ ಹೊಸ ಆಲೋಚನೆಗಳೊಂದಿಗೆ ದಸರಾ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ  ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಹೊಸ ಚಿಂತನೆ ಹಾಗೂ ವಿನೂತನ ಮಿತವ್ಯಯ ಖರ್ಚಿನಲ್ಲಿ ಈ ಬಾರಿಯ ದಸರಾ ಆಚರಿಸಲು ಅಧಿಕಾರಿಗಳು ಬೇಕಿರುವ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಿ. ದಸರಾ-2018 ರ ಕಾರ್ಯಕಾರಿ ಸಮಿತಿ ಸಭೆ ನಡೆದ ನಂತರ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ಹೇಳಿದರು.

ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತ್ ಕಾರ್ಯಕ್ರಮದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ವಿಶಿಷ್ಟ ಹಾಗೂ ವಿಭಿನ್ನವಾಗಿರಲಿ. ನೃತ್ಯದೊಂದಿಗೆ ಜೂಡೋ, ಮಾರ್ಷಲ್ ಆರ್ಟ್ಸ್ ಬಳಸಿಕೊಂಡು ಕಾರ್ಯಕ್ರಮ ನಡೆಸಬಹುದು. ಅದರ ಬಗ್ಗೆಯೂ ಹೆಚ್ಚು ಗಮನಹರಿಸುವಂತೆ ಹೇಳಿದರು.

ಕಾಮನ್ ವೆಲ್ತ್ ಕ್ರೀಡೆ ಹಾಗೂ ಇನ್ನಿತರ ಕ್ರೀಡಾ ಕೂಟದಲ್ಲಿ ಫೈರೋ ಟೆಕ್ನಿಷಿಯನ್‍ಗಳು ಹೊಗೆ ರಹಿತ ಪರಿಸರ ಸ್ನೇಹಿ ವಿದ್ಯುನ್ಮಾನ ಪಟಾಕಿಗಳನ್ನು ಬಳಸುತ್ತಾರೆ. ಇದನ್ನು ಈ ಬಾರಿ ಪಂಜಿನ ಕವಾಯತ್‍ನಲ್ಲಿ ಬಳಸಿಕೊಳ್ಳಬಹುದು. ಈ ರೀತಿಯ ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ದಸರಾ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರವಾಸಿಗರು ಭಾಗವಹಿಸಲು ಕಾರ್ಯಕ್ರಮವನ್ನು ರೂಪಿಸಿಕೊಂಡು ದಸರಾದ 15 ದಿನ ಮೊದಲು ಆಹ್ವಾನ ಪತ್ರಿಕೆಗಳು ಸಿದ್ಧಗೊಂಡು ವಿತರಣೆಯಾಗಬೇಕು. ಇದಕ್ಕಾಗಿ ಕಾರ್ಯಕ್ರಮ ಯೋಜನೆಗಳ ರೂಪು ರೇಷುಗಳನ್ನು ಸಿದ್ಧಮಾಡಿಕೊಳ್ಳಿ ಎಂದರು.

ದಸರಾ ದೀಪಾಲಂಕಾರದ ಸಂದರ್ಭದಲ್ಲಿ ಮರಗಳಿಗೆ ಹಾಗೂ ಪಕ್ಷಿಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ದೀಪಾಲಂಕಾರದಿಂದ ಯಾವುದೇ ಜೀವಕ್ಕೂ ತೊಂದರೆಯಾಗದಂತೆ ಪರಿಸರ ಸ್ನೇಹಿ ದೀಪಾಲಂಕಾರ ಮಾಡುವಂತೆ ತಿಳಿಸಿದರು. ದಸರಾ ಚಲನಚಿತ್ರೋತ್ಸವದಲ್ಲಿ ಕಳೆದ ಬಾರಿ ಚಲನಚಿತ್ರಗಳು ಪ್ರದರ್ಶನಗೊಂಡಿದೆ. ಈ ಬಾರಿ ಕಾರ್ಯಾಗಾರಗಳನ್ನು ಆಯೋಜಿಸಿ, ಪರಿಣಿತರಿಂದ ಚಲನಚಿತ್ರ ನಿರ್ಮಾಣ, ನಿರ್ದೇಶನ, ಸಂಕಲನ ಹಾಗೂ ಛಾಯಗ್ರಾಹಣ ಮುಂತಾದ ವಿಷಯಗಳ ಬಗ್ಗೆ ತಿಳಿಸಿ ಎಂದರು.

ಸಭೆಯಲ್ಲಿ ಜಿ.ಪಂ. ಸಿಇಓ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್, ಮೈಸೂರು ನಗರ ಉಪ ಪೊಲೀಸ್ ಆಯುಕ್ತ ವಿಕ್ರಂ ಅಮ್ಟೆ,  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕಾಂತರಾಜು, ಮೈಸೂರು ಮಹಾನಗರಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್, ವನ್ಯಜೀವಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಸಿದ್ದರಾಮಪ್ಪ ಸೇರಿದಂಗೆ ಇನ್ನಿತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X