Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರೂರು ಸ್ವಾಮೀಜಿ ಸಂಶಯಾಸ್ಪದ ಸಾವಿನ...

ಶಿರೂರು ಸ್ವಾಮೀಜಿ ಸಂಶಯಾಸ್ಪದ ಸಾವಿನ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಕೇಮಾರು, ವಜ್ರದೇಹಿ ಸ್ವಾಮೀಜಿಯಿಂದ ಎಸ್ಪಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ21 July 2018 10:07 PM IST
share
ಶಿರೂರು ಸ್ವಾಮೀಜಿ ಸಂಶಯಾಸ್ಪದ ಸಾವಿನ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಉಡುಪಿ, ಜು.21: ಶಿರೂರು ಸ್ವಾಮೀಜಿಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರಾವಳಿಯ ಸಂತರ ಪರವಾಗಿ ಕೇಮಾರು ಮಠದ ಶ್ರೀಈಶ ವಿಠಲ ಸ್ವಾಮೀಜಿ ಹಾಗೂ ವಜ್ರದೇಹಿ ಶ್ರೀರಾಜಶೇಖರಾನಂದ ಸ್ವಾಮೀಜಿ ಇಂದು ಉಡುಪಿ ಎಸ್ಪಿ ಕಚೇರಿಗೆ ಆಗಮಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಮಾರು ಸ್ವಾಮೀಜಿ, ಎಸ್ಪಿಗೆ ಈ ಪ್ರಕರಣದ ಬಗ್ಗೆ ಮೌಖಿಕವಾಗಿ ಮನವಿ ಮಾಡಿದ್ದೇವೆ. ಈ ಪ್ರಕರಣದ ಹಿಂದೆ ಹೆಣ್ಣಾಗಲಿ, ಗಂಡಾಗಲಿ ಯಾರೇ ಇದ್ದರೂ ನಿಷ್ಪಕ್ಷಪಾತ ತನಿಖೆ ಮಾಡ ಬೇಕೆಂದು ಒತ್ತಾಯಿಸಿದ್ದೇವೆ. ಅದಕ್ಕೆ ಎಸ್ಪಿಯವರು ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು.

ಆರೋಪಿಗಳು ತಪ್ಪಿಸಿಕೊಳ್ಳದಂತೆ ಪ್ರಕರಣವನ್ನು ಬಲಿಷ್ಠಗೊಳಿಸಲು ಹೊಸದಾಗಿ ದೂರು ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದೇವೆ. ಆದರೆ ಎಸ್ಪಿಯವರು ಬೇಡ ಎಂದು ಹೇಳಿದ್ದಾರೆ. ಎಫ್‌ಎಸ್‌ಎಲ್ ಮತ್ತು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ವಾಮೀಜಿ ವಿಷದಿಂದ ಸತ್ತಿದ್ದಾರೆ ಎಂಬುದು ದೃಢಪಟ್ಟರೆ ಪ್ರಕರಣವು ತನ್ನಿಂದ ತಾನೆ ವರ್ಗಾವಣೆಯಾಗುತ್ತದೆ. ಆಗ ನಾವು ಮರು ಹೇಳಿಕೆಗಳನ್ನು ಪಡೆದುಕೊಳ್ಳುತ್ತೇವೆ ಎಂಬುದಾಗಿ ಎಸ್ಪಿ ತಿಳಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು.

ಈಗ ಸ್ವಾಮೀಜಿಯ ಬ್ರಹ್ಮಚರ್ಯ ಹಾಗೂ ಅವರ ನಡತೆಯನ್ನು ಪ್ರಶ್ನಿಸುವ ಸಂದರ್ಭ ಅಲ್ಲ. ಯಾಕೆಂದರೆ ಅವರು ವಿಧಿವಶರಾಗಿದ್ದಾರೆ. ಸತ್ತ ನಂತರ ಅಪಪ್ರಚಾರ ಮಾಡುವುದು ಯಾವುದೇ ವ್ಯಕ್ತಿಗೂ ಭೂಷಣ ಅಲ್ಲ. ಈಗ ಬೇಕಾಗಿರುವುದು ಸ್ವಾಮೀಜಿ ಸೇವಿಸಿದ ಆಹಾರದಲ್ಲಿ ಹೇಗೆ ವಿಷ ಸೇರಿಕೊಂಡಿದೆ ಎಂಬುದು. ಅದಕ್ಕೆ ನ್ಯಾಯ ಸಿಗಬೇಕು. ಅಪಪ್ರಚಾರದಿಂದ ತನಿಖೆಯ ಹಾದಿ ತಪ್ಪಬಾರದು. ಅದನ್ನು ಗಣನೆಗೆ ತೆಗೆದುಕೊಳ್ಳಬಾರದು ಎಂದು ಎಸ್ಪಿಗೆ ಮನವಿ ಮಾಡಲಾಗಿದೆ. ನಮಗೆ ಸರಿಯಾದ ತನಿಖೆ ಆಗಬೇಕು ಎಂದು ಕೇಮಾರು ಸ್ವಾಮೀಜಿ ತಿಳಿಸಿದರು.

ಅಷ್ಟ ಮಠಾಧೀಶರ ಬಗ್ಗೆ ನಾವು ಯಾವುದೇ ಮಾಧ್ಯಮದಲ್ಲಿ ಆರೋಪವೂ ಮಾಡಿಲ್ಲ, ಅವರ ಬಗ್ಗೆ ಕೀಳಾಗಿಯೂ ಮಾತನಾಡಿಲ್ಲ. ಅವರ ಬಗ್ಗೆ ನಮಗೆ ಗೌರವ ಇದೆ. ಸತ್ತ ನಂತರ ನೂನ್ಯತೆಗಳ ಬಗ್ಗೆ ಮಾತನಾಡುವುದು ಬೇಡ ಎಂದು ಪೇಜಾವರ ಸ್ವಾಮೀಜಿಯ ಶಿಷ್ಯನಾಗಿ ನಾನು ಅವರೊಂದಿಗೆ ಮನವಿ ಮಾಡುತ್ತಿದ್ದೇನೆ. ಹಿಂದು ಯುವಕರು ಸತ್ತಾಗ, ಸಮಾಜದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿರುವ ಸ್ವಾಮೀಜಿ, ಶಿರೂರು ಸ್ವಾಮೀಜಿ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಬೇಕು. ಮಠದ ಅಂಗಳದಲ್ಲಿ ಒಬ್ಬ ವ್ಯಕ್ತಿಗೆ ಆಗಿರುವ ಅನ್ಯಾಯಕ್ಕೆ ಎಲ್ಲರು ಒಟ್ಟಾಗಿ ನ್ಯಾಯ ಕೊಡಬೇಕು. ಅದಕ್ಕೆ ಎಲ್ಲ ಮಠಾಧಿಪತಿಗಳು ಕೈಜೋಡಿಸಬೇಕು ಎಂದು ಅವರು ಒತ್ತಾಯಿಸಿದರು.

ವಜ್ರದೇಹಿ ಶ್ರೀರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಶಿರೂರು ಸ್ವಾಮೀಜಿ ಸಾವಿನ ಸಂಶಯದ ನಿವಾರಣೆಗಾಗಿ ಎಸ್ಪಿ ಭೇಟಿ ಮಾಡಿದ್ದೇವೆ. ಕಾನೂನು ಸರಿಯಾದ ದಿಕ್ಕಿನಲ್ಲಿ ಸಾಗಬೇಕು. ಆರೋಪಿಗಳ ಪತ್ತೆ ಇಲಾಖೆ ತನಿಖೆಯಿಂದ ಮಾತ್ರ ಸಾಧ್ಯ. ನಮ್ಮ ಮನವಿಗೆ ಎಸ್ಪಿ ಒಳ್ಳೆಯ ರೀತಿಯಲ್ಲಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದ ಸತ್ಯಾಸತ್ಯತೆ ನಿಷ್ಪಕ್ಷಪಾತ ವಾಗಿ ಸಮಾಜದ ಮುಂದೆ ಬರಬೇಕೆಂಬ ದೃಷ್ಠಿಯಿಂದ ಈ ಪ್ರಯತ್ನ ಮಾಡಿದ್ದೇವೆ. ಇದಕ್ಕೆ ಬೇಕಾದ ಪ್ರತಿಫಲ ನಮಗೆ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು.

12ಕೋಟಿ ಸಾಲದ ವ್ಯವಹಾರ
ಕಲ್ಸಂಕದ ಬಳಿ ಇರುವ ಕನಕ ಮಾಲ್‌ನ ಸಾಲದ ವ್ಯವಹಾರಕ್ಕೆ ಸಂಬಂಧಿಸಿ ಮುಂಬೈ ಉದ್ಯಮಿಯ ಕಿರಿಕಿರಿ ಬಗ್ಗೆಯೂ ಎಸ್ಪಿ ಜೊತೆ ನಾವು ಹೇಳಿದ್ದೇವೆ. ಕನಕ ಮಾಲ್‌ಗೆ ಸಂಬಂಧಿಸಿ ಈ ವಾರದಲ್ಲಿ 10-12ಕೋಟಿ ರೂ. ಬ್ಯಾಂಕ್ ಸಾಲ ಪಾವತಿಸಲು ಸ್ವಾಮೀಜಿಗೆ ಆ ಉದ್ಯಮಿ ನೀಡುವವರಿದ್ದರು ಎಂದು ಕೇಮಾರು ಸ್ವಾಮೀಜಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X