Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಮಳೆಹಾನಿ ನಡುವೆಯೇ ಕಾಡಾನೆಗಳ...

ಮಡಿಕೇರಿ: ಮಳೆಹಾನಿ ನಡುವೆಯೇ ಕಾಡಾನೆಗಳ ಉಪಟಳಕ್ಕೆ ಬೆಳೆಗಾರರು ಕಂಗಾಲು

ಹಾಲುಗುಂದ, ಚೆಟ್ಟಳ್ಳಿಯಲ್ಲಿ ಗಜ ಸವಾರಿ

ವಾರ್ತಾಭಾರತಿವಾರ್ತಾಭಾರತಿ21 July 2018 10:51 PM IST
share
ಮಡಿಕೇರಿ: ಮಳೆಹಾನಿ ನಡುವೆಯೇ ಕಾಡಾನೆಗಳ ಉಪಟಳಕ್ಕೆ ಬೆಳೆಗಾರರು ಕಂಗಾಲು

ಮಡಿಕೇರಿ, ಜು.21: ಭಾರೀ ಗಾಳಿ ಮಳೆಯ ಸಂಕಷ್ಟದ ನಡುವೆಯೇ ಕೃಷಿಕ ಸಮೂಹ ಕಾಡಾನೆ ಹಾವಳಿಯಿಂದ ಬಸವಳಿದಿದ್ದು, ಮೂರ್ನಾಡು ಸಮೀಪದ ಹಾಲುಗುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಕ್ಕಿ ಗ್ರಾಮದ ಭತ್ತ ಮತ್ತು ಕಾಫಿ ಕೃಷಿ ಕಾಡಾನೆಗಳಿಂದ ಧ್ವಂಸ ಗೊಂಡಿವೆ.

ಕಾವೇರಿ ನದಿಪಾತ್ರದ ಕೊಂಡಂಗೇರಿಯಿಂದ ವೀರಾಜಪೇಟೆಗೆ ತೆರಳುವ ಮಾರ್ಗದ ನಡುವೆ ಬರುವ ಬಟ್ಟೆಮಕ್ಕಿ ಕಾಡಾನೆ ಹಾವಳಿಗೆ ಒಳಗಾಗುವ ಪ್ರದೇಶವಲ್ಲ. ಹೀಗಿದ್ದೂ ಕಳೆದ ವಾರದಿಂದ ಅಂದಾಜು ಮೂರರಿಂದ ನಾಲ್ಕು ಆನೆಗಳ ಹಿಂಡೊಂದು ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುತ್ತಾ, ಕೃಷಿ ಭೂಮಿ ಮತ್ತು ತೋಟಗಳಿಗೆ ದಾಳಿ ನಡೆಸುತ್ತಿದ್ದು, ಗ್ರಾಮೀಣರ ನಿದ್ದೆಗೆಡಿಸಿದೆ.

ನಾಟಿಗೆ ಪೈರೇ ಇಲ್ಲದ ಸ್ಥಿತಿ: ಬಟ್ಟೆಮಕ್ಕಿ ಗ್ರಾಮದ ಸುಬ್ರಾಯ, ದಿವಾಕರ್, ರವೀಂದ್ರ, ರಾಮಮೂರ್ತಿ ಸೇರಿದಂತೆ ಹಲ ಗ್ರಾಮಸ್ಥರು ತಮ್ಮ ಗದ್ದೆಗಳಲ್ಲಿ ಸಜ್ಜುಗೊಳಿಸಿದ್ದ ಸಸಿ ಮಡಿಗಳು ಕಾಡಾನೆಗಳ ದಾಳಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಾಟಿ ಕಾರ್ಯ ನಡೆಸಬೇಕಿತ್ತಾದರೂ, ಕಾಡಾನೆಗಳಿಂದ ಸಸಿ ಮಡಿಗಳು ನೆಲಕಚ್ಚಿದ್ದು, ನಾಟಿಗೆ ಪೈರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಫಿ, ಬಾಳೆಗೆ ಕುತ್ತು- ಬಟ್ಟೆಮಕ್ಕಿ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಉಪಟಳದಿಂದ, ಕಾಫಿ ಗಿಡಗಳು ಮುರಿದು ಹಾಳಾಗಿದ್ದರೆ, ಬಾಳೆ ಸೇರಿದಂತೆ ವಿವಿಧ ಉಪ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಗ್ರಾಮಸ್ಥರು ಮತ್ತು ಕಾರ್ಮಿಕರು ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸಲು ಆತಂಕ ಪಡುವಂತಾಗಿದೆ.

ಸಮಸ್ಯೆ ಬಗೆಹರಿಕೆಗೆ ಆಗ್ರಹ: ಗ್ರಾಮ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಗ್ರಾಮ ವ್ಯಾಪ್ತಿಯಿಂದ ಅಟ್ಟಲು ಅರಣ್ಯ ಇಲಾಖೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಕೃಷಿ ಹಾನಿಗೆ ಅಗತ್ಯ ಪರಿಹಾರ ಒದಗಿಸಲು ಸರ್ಕಾರ ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಚೆಟ್ಟಳ್ಳಿಯಲ್ಲೂ ಕಾಡಾನೆ ಉಪಟಳ

ಚೇರಳ ಶ್ರೀಮಂಗಲ ಗ್ರಾಮ ಚೆಟ್ಟಳ್ಳಿಯ ಪೇರಿಯನ ಉದಯ ಹಾಗೂ ಪೇರಿಯ ಪ್ರಕಾಶ್ ಎಂಬವರ ಕಾಫಿ ತೋಟದಲ್ಲಿ 3ರಿಂದ 4 ಕಾಡಾನೆಗಳು ಕಾಣಿಸಿಕೊಂಡಿವೆ. ಕಾಫಿ, ಅಡಿಕೆ ಸೇರಿದಂತೆ ಹಲವು ಬಗೆಯ ಹಣ್ಣಿನ ಗಿಡಗಳು, ಬಾಳೆ ಗಿಡಗಳನೆಲ್ಲ ನಾಶಪಡಿಸಿದ್ದು, ಸುಮಾರು 1 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ ಎಂದು ತೋಟದ ಮಾಲಿಕರು ತಿಳಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾಡಾನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X