Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಘಪರಿವಾರದಿಂದ ಬೆದರಿಕೆ: ಕಾದಂಬರಿ...

ಸಂಘಪರಿವಾರದಿಂದ ಬೆದರಿಕೆ: ಕಾದಂಬರಿ ಹಿಂಪಡೆದ ಕೇರಳದ ಲೇಖಕ

ವಾರ್ತಾಭಾರತಿವಾರ್ತಾಭಾರತಿ21 July 2018 11:36 PM IST
share
ಸಂಘಪರಿವಾರದಿಂದ  ಬೆದರಿಕೆ: ಕಾದಂಬರಿ ಹಿಂಪಡೆದ ಕೇರಳದ ಲೇಖಕ

ತಿರುವನಂತಪುರಂ, ಜು.21: ವಾರ ಪತ್ರಿಕೆಯೊಂದರಲ್ಲಿ ಧಾರಾವಾಹಿಯಾಗಿ ಸರಣಿಯಲ್ಲಿ ಪ್ರಕಟವಾಗುತ್ತಿದ್ದ ತನ್ನ ಕಾದಂಬರಿಗೆ ಸಂಘಪರಿವಾರದಿಂದ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಕೇರಳದ ಸಣ್ಣ ಕತೆಗಳ ಲೇಖಕರೊಬ್ಬರು ತಮ್ಮ ಕಾದಂಬರಿಯನ್ನೇ ಹಿಂಪಡೆದುಕೊಂಡಿದ್ದಾರೆ.

 ಲೇಖಕ ಎಸ್.ಹರೀಶ್ ಅವರ ಪ್ರಥಮ ಕಾದಂಬರಿ ‘ಮೀಶಾ’ (ಮೀಸೆ) ಸರಣಿ ರೂಪದಲ್ಲಿ ಮಾತೃಭೂಮಿ ಎಂಬ ವಾರ ಪತ್ರಿಕೆಯಲ್ಲಿ ಪ್ರಕಟವಾಗುತ್ತಿತ್ತು. ಸದ್ಯ ಲೇಖಕರು ತಮ್ಮ ಕಾದಂಬರಿಯನ್ನು ಪ್ರಕಟಿಸದಂತೆ ಸೂಚಿಸಿರುವುದಾಗಿ ಪತ್ರಿಕೆಯ ಸಂಪಾದಕ ಕಮಲ್ ರಾಮ್ ಸಜೀವ್ ಟ್ವೀಟ್ ಮಾಡಿದ್ದಾರೆ.

 ಎಸ್ ಹರೀಶ್ ತಮ್ಮ ಕಾದಂಬರಿಯನ್ನು ಹಿಂಪಡೆದುಕೊಂಡಿದ್ದಾರೆ. ಸಾಹಿತ್ಯದ ಸಾಮೂಹಿಕ ಹತ್ಯೆ ನಡೆಸಲಾಗುತ್ತಿದೆ. ಕೇರಳದ ಸಾಂಸ್ಕೃತಿಕ ಇತಿಹಾಸದಲ್ಲೇ ಇದು ಕರಾಳ ದಿನ, ಮುಂದೆ ಕತ್ತಲ ದಿನಗಳು ಬರಲಿವೆ ಎಂದು ಸಜೀವ್ ಟ್ವೀಟ್ ಮಾಡಿದ್ದಾರೆ. ಲೇಖಕ ಹರೀಶ್ ಪತ್ರಿಕೆಯ ಸಂಪಾದಕರಿಗೆ ಬರೆದಿರುವ ಪತ್ರದಲ್ಲಿ, ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ಸೈಬರ್ ದಾಳಿ ನಡೆಸಲಾಗುತ್ತಿದೆ. ಅದರ ಒತ್ತಡವನ್ನು ಸಹಿಸಲಾಗುತ್ತಿಲ್ಲ. ಹಾಗಾಗಿ ಕಾದಂಬರಿಯನ್ನು ಹಿಂಪಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಕಾದಂಬರಿಯಲ್ಲಿ ದೇವಾಲಯಗಳಿಗೆ ಭೇಟಿ ನೀಡುವ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಬರೆಯಲಾಗಿದೆ ಎಂದು ಸಂಘಪರಿವಾರ ಆರೋಪಿಸಿವೆ. ಈ ಗುಂಪುಗಳು ಸಾಮಾಜಿಕ ಜಾಲತಾಣಗಳಲ್ಲಿ ಲೇಖಕರು ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿವೆ ಮತ್ತು ಬೆದರಿಕೆ ಹಾಕಿವೆ ಎಂದು ಆರೋಪಿಸಲಾಗಿದೆ.

ಘಟನೆಯ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ನ ಸಂಸದ ಶಶಿ ತರೂರ್, ನಾನು ಹಿಂದುತ್ವ ತಾಲಿಬಾನ್‌ನ ಉಗಮದ ಬಗ್ಗೆ ನೀಡಿರುವ ಎಚ್ಚರಿಕೆಯನ್ನು ನಂಬದವರಿಗೆ ಈಗ ಮಲಯಾಳಂ ಲೇಖಕನಿಗೆ ಎದುರಾಗಿರುವ ಸಂಕಷ್ಟದಿಂದಾದರೂ (ಅದಕ್ಕೂ ಮಿಗಿಲಾಗಿ ಲೇಖಕರ ಕೈಯನ್ನು ಕಡಿಯುವುದಾಗಿ ಬೆದರಿಕೆ ಹಾಕಿರುವುದು)ಪರಿಸ್ಥಿತಿಯ ಅರಿವಾಗಬಹುದು ಎಂದು ತಿಳಿಸಿದ್ದಾರೆ. ಹಿಂದು ಐಕ್ಯ ವೇದಿ ಸಂಘಟನೆಗೆ ಸೇರಿದ ಕಾರ್ಯಕರ್ತರು ಎಂದು ಶಂಕಿಸಲಾಗಿರುವ ಕೆಲವರು ಕೊಚ್ಚಿ ತ್ರಿಪುನಿತುರದಲ್ಲಿ ಇತ್ತೀಚೆಗೆ ಮಾತೃಭೂಮಿ ಸಮೂಹ ಆಯೋಜಿಸಿದ್ದ ಪುಸ್ತಕ ಪ್ರದರ್ಶನಕ್ಕೆ ಅಡ್ಡಿಪಡಿಸುವ ಮೂಲಕ ಕಾದಂಬರಿಯ ವಿರುದ್ಧ ಪ್ರತಿಭಟನೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X