Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಹಿತಿ ತಂತ್ರಜ್ಞಾನಕ್ಕೆ ಸಮನಾಗಿ ಕನ್ನಡ...

ಮಾಹಿತಿ ತಂತ್ರಜ್ಞಾನಕ್ಕೆ ಸಮನಾಗಿ ಕನ್ನಡ ತಂತ್ರಾಂಶ ಅಭಿವೃದ್ಧಿಯಾಗಬೇಕು: ಡಾ.ಎಚ್.ಹೊನ್ನೇಗೌಡ

ವಾರ್ತಾಭಾರತಿವಾರ್ತಾಭಾರತಿ22 July 2018 6:25 PM IST
share
ಮಾಹಿತಿ ತಂತ್ರಜ್ಞಾನಕ್ಕೆ ಸಮನಾಗಿ ಕನ್ನಡ ತಂತ್ರಾಂಶ ಅಭಿವೃದ್ಧಿಯಾಗಬೇಕು: ಡಾ.ಎಚ್.ಹೊನ್ನೇಗೌಡ

ಬೆಂಗಳೂರು, ಜು. 22: ಮುಂದಿನ ಐದು ವರ್ಷದಲ್ಲಿ ಬೆಂಗಳೂರು ಮಾಹಿತಿ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಹೊರ ಹೊಮ್ಮಲಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಅನುಕೂಲವಾಗುವಂತೆ ಕನ್ನಡದಲ್ಲಿ ತಂತ್ರಾಂಶಗಳನ್ನು ಅಭಿವೃದ್ದಿ ಪಡಿಸಬೇಕಿದೆ ಎಂದು ಬೆಂಗಳೂರು ಮಾಹಿತಿ ಮತ್ತು ತಂತ್ರಜ್ಙಾನ ಇಲಾಖೆಯ ನಿರ್ದೇಶಕ ಡಾ.ಎಚ್.ಹೊನ್ನೇಗೌಡ ತಿಳಿಸಿದರು.

ರವಿವಾರ ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಲೇಖಕ ಮಹದೇವಯ್ಯ ಅವರ ‘ಕಂಪ್ಯೂಟರ್ ಸಾಕ್ಷರತೆ’ ಪುಸ್ತಕ ಲೋಕಾರ್ಪಣಾಗೊಳಿಸಿ ಮಾತನಾಡಿದ ಅವರು, ಅಮೇರಿಕಾ ಮತ್ತು ರಷ್ಯಾ ನಂತರ ಹೆಚ್ಚು ನವೋದ್ಯಮ ಕಂಪನಿಗಳನ್ನು ಭಾರತ ಹೊಂದಿದ್ದು, ಅದರಲ್ಲೂ ಬೆಂಗಳೂರು ನವೋದ್ಯಮ ನಗರಿಯೆಂದು ಬಿರುದು ಪಡೆದಿದೆ. ಇದರ ಜತೆಗೆ ಕನ್ನಡ ಭಾಷೆಯನ್ನು ನವೋದ್ಯಮಕ್ಕೆ ಅನುಕೂಲವಾಗುವಂತೆ ಅಭಿವೃದ್ಧಿ ಪಡಿಸುವಂತಹ ಕೆಲಸವಾಗಬೇಕು ಎಂದು ತಿಳಿಸಿದರು.

ಭಾರತ ಯುವಜನತೆಯಿಂದ ಕೂಡಿರುವ ದೇಶವಾಗಿದ್ದು, ಇವರನ್ನೆ ಸಂಪನ್ಮೂಲವನ್ನಾಗಿ ಪರಿವರ್ತಿಸಬೇಕಿದೆ. ಪ್ರತಿದಿನ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಂತೆ ಯುವಕರನ್ನು ಸಜ್ಜುಗೊಳಿಸಬೇಕಿದೆ. ಆ ನಿಟ್ಟಿನಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಅವರು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ವೇಣುಗೋಪಾಲ್ ಮಾತನಾಡಿ, 37 ವರ್ಷ ಕಂಪ್ಯೂಟರ್ ಸೈನ್ಸ್ ಪಾಠ ಮಾಡಿದ್ದೇನೆ. ಆದರೂ ವಿಜ್ಞಾನದ ಕುರಿತು ಕನ್ನಡದಲ್ಲಿ ಪುಸ್ತಕ ಬರೆಯುವುದು ಎಷ್ಟು ಕಷ್ಟವೆಂದು ಬರೆದವರಿಗೆ ಮಾತ್ರ ಅರಿವಾಗುತ್ತದೆ. ವಿಜ್ಞಾನದ ಪರಿಭಾಷೆಗೆ ಕನ್ನಡ ಪದಗಳನ್ನು ಹೊಂದಿಸುವುದು ಕಷ್ಟಸಾಧ್ಯವೆಂದು ಅಭಿಪ್ರಾಯಿಸಿದರು.

ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸುವುದು ಸುಲಭದ ಮಾತಲ್ಲ. ನಮ್ಮ ಭಾಷೆಯ ಕುರಿತು ವಿಶೇಷ ಅಭಿಮಾನ ವಿದ್ದರೆ ಮಾತ್ರ ಎಲ್ಲ ತಡೆತಡೆಗಳನ್ನು ಮೀರಿ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಯುವ ಜನತೆ ವಿಶೇಷವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಲೇಖಕ ಮಹದೇವಯ್ಯ ಮಾತನಾಡಿ, ಯಾವುದೆ ವಿಷಯದ ಕುರಿತು ಪುಸ್ತಕ ಬರೆಯಲು ಸೃಜನಾತ್ಮಕವಾದ ಮನಸು ಹಾಗೂ ಮನೆಯಲ್ಲಿ ಉತ್ತಮ ವಾತಾವರಣ ಇರಬೇಕು. ಒಂದು ಪುಸ್ತಕದ ಪ್ರಕಟನೆಯ ಹಿಂದೆ ಸಾಕಷ್ಟು ಜನರ ಅನುಭವ, ಪರಿಶ್ರಮ ಇರುತ್ತದೆ ಎಂದು ತಿಳಿಸಿದರು.

ವಿಜ್ಞಾನಿ ಹಾಲ್ದೊಡ್ಡಿ ಸುಧೀಂದ್ರ ಮಾತನಾಡಿ, ಯಾವುದೇ ಬರಹಗಾರ ಪುಸ್ತಕ ಬರೆಯಬೇಕಾದರೆ ಭಾಷಾಜ್ಞಾನದ ಜತೆಗೆ ಹಿಡಿತ ಇರಬೇಕು. ಇಂಗ್ಲಿಷ್‌ನಲ್ಲಿ ಕಂಪ್ಯೂಟರ್ ಪುಸ್ತಕಗಳು ಬೇಕಾದಷ್ಟು ಇದೆ. ಆದರೆ ಕನ್ನಡದಲ್ಲಿ ಬೆರಳೆಣಿಕೆಯಷ್ಟಿದೆ. ಕಂಪ್ಯೂಟರ್ ಜ್ಞಾನ ಪ್ರತಿಯೊಂದು ವಲಯಕ್ಕೂ ವ್ಯಾಪಿಸಿರುವ ಹಿನ್ನೆಲೆಯಲಿ ಕನ್ನಡದಲ್ಲಿ ಕಂಪ್ಯೂಟರ್ ಜ್ಞಾನವನ್ನು ಪರಿಚಯಿಸುವ ಅಗತ್ಯವಿದೆ ಎಂದು ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆಯುತ್ತಿರುವ ವೇಗಕ್ಕೆ ಕನ್ನಡ ಭಾಷೆಯನ್ನು ಸಮನಾಗಿ ಕೊಂಡೊಯ್ಯಬೇಕಾಗಿದೆ. ಈ ನಿಟ್ಟಿನಲ್ಲಿ ನಾಡಿನ ಸಾಹಿತಿಗಳು, ಬರಹಗಾರರು ಒಟ್ಟಾಗಿ ಶ್ರಮಿಸಬೇಕಾಗಿದೆ ಎಂದು ಅವರು ಆಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X