Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೋಟರಿ ವತಿಯಿಂದ ಹೊನಲು ಬೆಳಕಿನ ಕಬಡ್ಡಿ...

ರೋಟರಿ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜನೆ: ಮಂಜುನಾಥ ಆಚಾರ್ಯ

ಬಂಟ್ವಾಳ ತಾ ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ22 July 2018 7:22 PM IST
share
ರೋಟರಿ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜನೆ: ಮಂಜುನಾಥ ಆಚಾರ್ಯ

 ಬಂಟ್ವಾಳ, ಜು. 22 : ದ.ಕ.ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಮತ್ತು ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್‌ನ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ರೋಟರಿ ಬಾಲ ಭವನ ಸಭಾಂಗಣದಲ್ಲಿ ರವಿವಾರ ಜರಗಿತು.

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ನೆಲದ ನೆಚ್ಚಿನ ಕ್ರೀಡೆಯಾದ ಕಬಡ್ಡಿಯನ್ನು ಎಲ್ಲರೂ ಪ್ರೀತಿಸಬೇಕು.ಬಂಟ್ವಾಳ ರೋಟರಿ ಕ್ಲಬ್ 50ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಬಂಟ್ವಾಳದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜಿಸಲಾಗುವುದು ಎಂದು ಹೇಳಿದರು.

ಜಿ.ಪಂ.ಸದಸ್ಯ, ಎಸೋಸಿಯೇಶನ್ ಉಪಾಧ್ಯಕ್ಷ, ಎಂ.ತುಂಗಪ್ಪ ಬಂಗೇರ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಸಂಘ ಸಂಸ್ಥೆಗಳು ದೇಶೀ ಕ್ರೀಡೆಯಾದ ಕಬಡ್ಡಿ ಪಂದ್ಯಾಟಗಳನ್ನು ಸಂಘಟಿಸಿ ಕಬಡ್ಡಿ ಆಟಗಾರರರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಎಸೋಸಿಯೇಶನ್ ಅಧ್ಯಕ್ಷ ರೋ ಪ್ರಕಾಶ ಕಾರಂತ ಅವರು ಅಧ್ಯಕ್ಷತೆ ವಹಿಸಿಮಾತನಾಡಿ, ತಾಲೂಕು ಎಸೋಸಿಯೇಷನ್ ಮೂಲಕ ತಾಲೂಕಿನಿಂದ ಉತ್ತಮ ಆಟಗಾರರನ್ನು ಆಯ್ಕೆ ಮಾಡಿ ಜಿಲ್ಲಾ ತಂಡಕ್ಕೆ ಆಯ್ಕೆ ಮಾಡಲಾಗುವುದು. ಕಬಡ್ಡಿ ಆಟಗಾರರು ಮತ್ತು ತೀರ್ಪುಗಾರರು ಕಬಡ್ಡಿ ಕ್ರೀಡೆ ಉಳಿಸಿ ಬೆಳೆಸಲು ಸಹಕಾರಿಗಳಾಗಬೇಕು. ಕಬಡ್ಡಿ ಪಂದ್ಯಾಟಗಳಲ್ಲಿ ಶಿಸ್ತಿಗೆ ಪ್ರಾಮುಖ್ಯತೆ ನೀಡಬೇಕು ಎಂದ ಅವರು ಎಸೋಸಿಯೇಷನ್ ನಿಂದ ಕಬಡ್ಡಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ, ಗೌರವಿಸಲಾಗಿದೆ ಎಂದು ಹೇಳಿದರು.

ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಅಂತಾರಾಷ್ಟ್ರೀಯ ಆಟಗಾರ ಉದಯ ಚೌಟ ಅವರು ಮಾತನಾಡಿ, ಕಬಡ್ಡಿ ಆಟಗಾರರು ತಮ್ಮನ್ನು ಮಾರಿಕೊಳ್ಳುವ ಕಾರ್ಯ ಮಾಡಬಾರದು. ಸಂಪಾದನೆಗೋಸ್ಕರ ಕಬಡ್ಡಿಯನ್ನು ಆಯ್ಕೆ ಮಾಡಬೇಡಿ, ಕಬಡ್ಡಿಯಲ್ಲಿ ತೊಡಗಿಸಿ ಕೊಂಡು ಸಾಧನೆ ಮಾಡಿದಾಗ ಸಂಪಾದನೆಯಾಗುತ್ತದೆ ಎಂದು ಹೇಳಿದರು.

ಎಸೋಸಿಯೇಶನ್ ಜಿಲ್ಲಾ ಧ್ಯಕ್ಷ ರತನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಸಲಹೆಗಾರ ಕೃಷ್ಣಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಬಡ್ಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಪಾಂಡುರಂಗ ಹನುಮಂತಪ್ಪ ಬಾವಿ, ಮಲ್ಲಿಕಾರ್ಜುನ ಭರಮಪ್ಪ ಗಾಣಿಗೇರ, ಸಿದ್ದಪ್ಪ ಫಕೀರಪ್ಪ ಜಲಗೇರ, ಸುಶ್ಮಿತಾ, ಮೊದಿನ್ ಬಾದ್‌ಷಾ ಹಾಗೂ ತರಬೇತುದಾರ ಆಸಿಫ್ ಪಡಂಗಡಿ, ತೀರ್ಪುಗಾರರ ಮಂಡಳಿ ಜಿಲ್ಲಾ ಸಂಚಾಲಕರಾಗಿ ಆಯ್ಕೆಯಾದ ಕೃಷ್ಣಪ್ಪ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ಸಂಘಟಕರಾದ ಹಸೈನಾರ್ ಕುಕ್ಕಾಜೆ, ಸುದೀಪ್ ಶೆಟ್ಟಿ ಕೊಡಾಜೆ, ತುಂಗಪ್ಪ ಬಂಗೇರ, ಲತೀಫ್ ನೇರಳಕಟ್ಟೆ ಅವರನ್ನು ಅಭಿನಂದಿಸಲಾಯಿತು. ನಿಧನ ಹೊಂದಿದ ಕಬಡ್ಡಿ ಆಟಗಾರ ದೀಕ್ಷಿತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಇದೆ ವೇಳೆ ಮುಂದಿನ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.  ಕಾರ್ಯಾಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು. ಬಾಲಕೃಷ್ಣ ನರಿಕೊಂಬು ವರದಿ ವಾಚಿಸಿದರು. ತಾಲೂಕು ಕೋಶಾಧಿಕಾರಿ ಬಾಬು ಮಾಸ್ಟರ್ ಲೆಕ್ಕ ಪತ್ರ ಮಂಡಿಸಿದರು. ನೂತನ ಕಾರ್ಯದರ್ಶಿ ಚಂದ್ರಶೇಖರ ಕರ್ಣ ವಂದಿಸಿದರು. ಕಾರ್ಯಕಾರಿ ಸದಸ್ಯ ಸೇಸಪ್ಪ ಮಾಸ್ಟರ್ ಅತಿಥಿಗಳನ್ನು ಪರಿಚಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X