Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಗವಿಕಲ ವ್ಯಕ್ತಿಗಳ ಹಕ್ಕು ಕಾಯ್ದೆ...

ಅಂಗವಿಕಲ ವ್ಯಕ್ತಿಗಳ ಹಕ್ಕು ಕಾಯ್ದೆ ಸೂಚನೆ ಪ್ರಕಟಣೆಗೆ ರಾಜ್ಯಗಳ ನಿರಾಸಕ್ತಿ

ವಾರ್ತಾಭಾರತಿವಾರ್ತಾಭಾರತಿ22 July 2018 8:08 PM IST
share

ಹೊಸದಿಲ್ಲಿ, ಜು.22: ಅಂಗವಿಕಲ ವ್ಯಕ್ತಿಗಳ ಹಕ್ಕು (ಆರ್‌ಪಿಡಬ್ಲೂಡಿ) ಕಾಯ್ದೆಯ ನಿಯಮಗಳ ಬಗ್ಗೆ ಪ್ರಕಟಣೆ ಜಾರಿಗೊಳಿಸುವ ಸೂಚನೆಯನ್ನು ಕೇವಲ 10 ರಾಜ್ಯಗಳು ಮಾತ್ರ ಪಾಲಿಸಿದ್ದು, ಬಹುತೇಕ ರಾಜ್ಯಗಳು ನಿರಾಸಕ್ತಿ ತೋರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2016ರ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡಿದ್ದ ಕಾಯ್ದೆಯನ್ನು ಜಾರಿಗೊಳಿಸುವಂತೆ 2017ರ ಎಪ್ರಿಲ್‌ನಲ್ಲಿ ಸೂಚನೆ ಹೊರಡಿಸಲಾಗಿತ್ತು. ಬಳಿಕ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಯಮಗಳನ್ನು ಕಳೆದ ವರ್ಷದ ಜೂನ್‌ನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಪ್ರಕಟಿಸಿತ್ತು. ಆರ್‌ಪಿಡಬ್ಲ್ಯುಡಿ ಕಾಯ್ದೆಯ ಕುರಿತು ಪ್ರಪ್ರಥಮ ರಾಷ್ಟ್ರೀಯ ಅಂಗವೈಕಲ್ಯ ವಿಚಾರ ವಿಮರ್ಶೆ ಸಭೆ ಗುರುವಾರ ನಡೆದಿದ್ದು, ಬಹುತೇಕ ರಾಜ್ಯಗಳು ಸೂಚನೆಯನ್ನು ಪಾಲಿಸದಿರುವುದನ್ನು ಪ್ರಸ್ತಾವಿಸಲಾಯಿತು. ನ್ಯಾಷನಲ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಎಂಪ್ಲಾಯ್‌ಮೆಂಟ್ ಫಾರ್ ಡಿಸೇಬಲ್ಡ್ ಪೀಪಲ್(ಎನ್‌ಸಿಪಿಇಡಿಪಿ) ಸಭೆಯನ್ನು ಸಂಯೋಜಿಸಿದ್ದು ಬ್ರಿಟನ್‌ನ ಡಿಎಫ್‌ಐಡಿ, ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆ, ಸಾಮಾಜಿಕ ನ್ಯಾಯ ಇಲಾಖೆ, ಎಂಫಾಸಿಸ್, ಆ್ಯಕ್ಸಿಸ್ ಬ್ಯಾಂಕ್ ಮತ್ತು ಲಿಯೋನಾರ್ಡ್ ಚೆಶೈರ್ ಸಹಕಾರದಲ್ಲಿ ಸಭೆ ನಡೆಯಿತು.

ತೆಲಂಗಾಣ, ಒರಿಸ್ಸಾ, ಛತ್ತೀಸ್‌ಗಢ, ಬಿಹಾರ, ಗುಜರಾತ್, ಉ.ಪ್ರದೇಶ, ಮೇಘಾಲಯ ಸೇರಿದಂತೆ ದೇಶದ ಕೇವಲ ಮೂರನೇ ಒಂದರಷ್ಟು ರಾಜ್ಯಗಳು(29 ರಾಜ್ಯಗಳಲ್ಲಿ 10 ಮಾತ್ರ) ಆರ್‌ಪಿಡಬ್ಲ್ಯುಡಿ ಕಾಯ್ದೆಯ ನಿಯಮಗಳ ಬಗ್ಗೆ ಪ್ರಕಟಣೆ ನೀಡಿವೆ. ಕಾಯ್ದೆ ಜಾರಿಗೊಂಡ ಆರು ತಿಂಗಳೊಳಗೆ ಪ್ರಕಟಣೆ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಲಾಗಿತ್ತು ಎಂದು ಎನ್‌ಸಿಪಿಇಡಿಪಿ ಸದಸ್ಯರು ತಿಳಿಸಿದ್ದಾರೆ.

ಭಾರತವು ಅಂಗವಿಕಲ ವ್ಯಕ್ತಿಗಳಿಗೆ ಉದ್ಯೋಗ ಮೀಸಲಾತಿ ನೀಡುತ್ತಿರುವ ಏಕೈಕ ದೇಶವಾಗಿರುವ ಕಾರಣ ಎಲ್ಲಾ ರಾಜ್ಯಗಳು ನಿಯಮಗಳ ಕುರಿತ ಪ್ರಕಟಣೆ ನೀಡಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಡಿಇಪಿಡಬ್ಲ್ಯುಡಿ ಕಾರ್ಯದರ್ಶಿ ಶಕುಂತಳಾ ಗ್ಯಾಮ್ಲಿನ್ ಹೇಳಿದ್ದಾರೆ. ಶೇ.3ರಿಂದ 4ರಷ್ಟು ಮಾನದಂಡದ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಸರಕಾರಿ ಉದ್ಯೋಗದಲ್ಲಿ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು, ಹಾಗೂ ಶೇ.3ರಿಂದ 5ರಷ್ಟು ಪ್ರಮಾಣದ ಅಂಗವೈಕಲ್ಯ ಹೊಂದಿರುವವರಿಗೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಕಾಯ್ದೆಯಡಿ ಅವಕಾಶವಿದೆ. ಅಲ್ಲದೆ ಮಾನದಂಡದ ಅಂಗವೈಕಲ್ಯ ಹೊಂದಿರುವ 6ರಿಂದ 18 ವರ್ಷದೊಳಗಿನ ಪ್ರತೀ ಮಕ್ಕಳಿಗೂ ಉಚಿತ ಶಿಕ್ಷಣ ಪಡೆಯುವ ಹಕ್ಕು ನೀಡಲಾಗಿದೆ ಮತ್ತು ಅಂಗವೈಕಲ್ಯದ ವಿಧಗಳನ್ನು 7ರಿಂದ 21ಕ್ಕೆ ಹೆಚ್ಚಿಸಲಾಗಿದೆ.

ಕಾಯ್ದೆಯಲ್ಲಿ ತಿಳಿಸಲಾಗಿರುವ ಯಾವುದೇ ವಿಷಯಗಳನ್ನು ಉಲ್ಲಂಘಿಸುವವರಿಗೆ ಗರಿಷ್ಟ 5 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X