Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಸ್‌ಎನ್‌ಎಲ್ ಹೊಸ ಪ್ಲಾನ್...

ಬಿಎಸ್‌ಎನ್‌ಎಲ್ ಹೊಸ ಪ್ಲಾನ್ ಬಿಡುಗಡೆಗೊಳಿಸಿದ ಬಾಬಾ ರಾಮ್‌ದೇವ್

ವಾರ್ತಾಭಾರತಿವಾರ್ತಾಭಾರತಿ22 July 2018 8:21 PM IST
share
ಬಿಎಸ್‌ಎನ್‌ಎಲ್ ಹೊಸ ಪ್ಲಾನ್ ಬಿಡುಗಡೆಗೊಳಿಸಿದ ಬಾಬಾ ರಾಮ್‌ದೇವ್

ಬೆಂಗಳೂರು, ಜು.22: ಯೋಗಗುರು ಬಾಬಾ ರಾಮ್‌ದೇವ್ ಹಾಗೂ ಬಿಎಸ್‌ಎನ್‌ಎಲ್ ಕರ್ನಾಟಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಆರ್.ಮಣಿ ಅವರು ನಗರದ ಅರಮನೆ ಮೈದಾನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ‘ಬಿಎಸ್‌ಎನ್‌ಎಲ್’ನ ಹೊಸ ಪ್ಲಾನ್‌ಗಳನ್ನು ಬಿಡುಗಡೆ ಮಾಡಿದರು.

ಬಿಎಸ್‌ಎನ್‌ಎಲ್‌ನವರು ಕಾಮನ್ ಯೂಸೇಜ್ ಗ್ರೂಪ್ ಯೋಜನೆಯಡಿ ನೂರಾರು, ಸಾವಿರಾರು ಮಂದಿಯನ್ನು ಒಳಗೊಂಡ ಸಮೂಹಗಳಿಗೆ ವಿಶೇಷ ಪ್ಲಾನ್ ರೂಪಿಸಿ ನೀಡುತ್ತಿದೆ. ಅದರಂತೆ ಪತಂಜಲಿ ಸಂಸ್ಥೆಗೆಂದೇ ಪ್ಯಾನ್ ಭಾರತ್ ಯೋಜನೆಯನ್ನು ಕಳೆದ ಮೇ ತಿಂಗಳಲ್ಲಿ ಹರಿದ್ವಾರದಲ್ಲಿ ಆರಂಭಿಸಲಾಗಿತ್ತು. ಮಹಾರಾಷ್ಟ್ರ, ಕೇರಳದಲ್ಲೂ ಆರಂಭವಾಗಿದೆ. ಪತಂಜಲಿ ಸಂಸ್ಥೆಯಡಿ ರಾಜ್ಯದಲ್ಲಿರುವ ಸದಸ್ಯರಿಗಾಗಿ ನಿಗಮದ ಕರ್ನಾಟಕದ ವೃತ್ತದಿಂದ ‘ಪತಂಜಲಿ ಬಿಎಸ್‌ಎನ್‌ಎಲ್ ಪ್ಲಾನ್’ ರೂಪಿಸಲಾಗಿದೆ ಎಂದು ಬಿಎಸ್‌ಎನ್‌ಎಲ್ ಉಪ ಪ್ರಧಾನ ವ್ಯವಸ್ಥಾಪಕಿ ಹೇಮಾದ್ರಿ ಹೇಳಿದರು.

ಪತಂಜಲಿ ಸಮೂಹದಡಿ ರಾಜ್ಯದಲ್ಲಿ 27 ಸಾವಿರಕ್ಕೂ ಹೆಚ್ಚು ಮಳಿಗೆ, ಕೇಂದ್ರಗಳಿವೆ ಎಂಬ ಮಾಹಿತಿ ಇದೆ. ಸದಸ್ಯತ್ವ ಗುರುತಿನ ಚೀಟಿ ಆಧರಿಸಿ ಒಬ್ಬರಿಗೆ ಒಂದು ಸಿಮ್ ನೀಡಲಾಗುತ್ತದೆ. ಅಪರಿಮಿತ ಉಚಿತ ಕರೆ, ದೇಶಾದ್ಯಂತ ಉಚಿತ ರೋಮಿಂಗ್ ಸೌಲಭ್ಯ, ನಿತ್ಯ 2 ಜಿಬಿ ಡೇಟಾ, ನಿತ್ಯ 100 ಉಚಿತ ಎಸ್‌ಎಂಎಸ್ ಹಾಗೂ ಉಚಿತ ಪತಂಜಲಿ ಪಿಆರ್‌ಬಿಟಿ ಸೌಲಭ್ಯವಿರಲಿದೆ. ಸದ್ಯ ಮಾರುಕಟ್ಟೆಯಲ್ಲಿ ಅತಿ ಮಿತವ್ಯಯದ ಪ್ಲಾನ್ ಇದಾಗಿದೆ ಎಂದು ಹೇಳಿದರು.

ಬಿಎಸ್‌ಎನ್‌ಎಲ್ ಬೆಂಗಳೂರು ಟೆಲಿಕಾಂ ಜಿಲ್ಲೆಯ ಪ್ರಿನ್ಸಿಪಲ್ ಜನರಲ್ ಮ್ಯಾನೇಜರ್ ಜನಾರ್ಧನ ರಾವ್, ಪ್ರಧಾನ ವ್ಯವಸ್ಥಾಪಕ (ಮಾರಾಟ ಮತ್ತು ಮಾರ್ಕೆಟಿಂಗ್) ಸುರೇಂದ್ರನ್, ಕರ್ನಾಟಕ ವೃತ್ತದ ಪ್ರಧಾನ ವ್ಯವಸ್ಥಾಪಕ (ಮಾರಾಟ ಮತ್ತು ಮಾರ್ಕೆಟಿಂಗ್) ವಿವೇಕ್ ಜೈಸ್ವಾಲ್, ಪ್ರಧಾನ ವ್ಯವಸ್ಥಾಪಕ (ಮೊಬೈಲ್ ಸರ್ವಿಸ್) ಬಿ.ವೆಂಕಟೇಶ್ವರಲು, ಭಾರತ್ ಸ್ವಾಭಿಮಾನ್ ನ್ಯಾಸ್ ಕರ್ನಾಟಕ ಮುಖ್ಯಸ್ಥ ಶಾಂತಿಲಾಲ್ ಜೈನ್, ಪ್ರಮುಖರಾದ ಜೈದೀಪ್ ಆರ್ಯ, ಮಂಜುನಾಥ್ ಇತರರು ಉಪಸ್ಥಿತರಿದ್ದರು.

ಪ್ಲಾನ್ ಬಗೆಗಿನ ವಿವರ: 144 ರೂ. - 30 ದಿನ, 792 ರೂ.- 180  ದಿನ, 1584 ರೂ.- 365 ದಿನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X