Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಐ ವಿಶೇಷ ನಿರ್ದೇಶಕ ಅಸ್ಥಾನಾರ ತಂಡದ...

ಸಿಬಿಐ ವಿಶೇಷ ನಿರ್ದೇಶಕ ಅಸ್ಥಾನಾರ ತಂಡದ ಸದಸ್ಯರ ಅಧಿಕಾರಾವಧಿ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ22 July 2018 8:46 PM IST
share
ಸಿಬಿಐ ವಿಶೇಷ ನಿರ್ದೇಶಕ ಅಸ್ಥಾನಾರ ತಂಡದ ಸದಸ್ಯರ ಅಧಿಕಾರಾವಧಿ ವಿಸ್ತರಣೆ

 ಹೊಸದಿಲ್ಲಿ,ಜು.22: ಸಿಬಿಐ ನಿರ್ದೇಶಕ ಅಲೋಕ ವರ್ಮಾ ಮತ್ತು ಎರಡನೇ ಅತ್ಯಂತ ಹಿರಿಯ ಅಧಿಕಾರಿಯಾಗಿರುವ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟದ ವರದಿಗಳ ನಡುವೆಯೇ ಕೇಂದ್ರ ಜಾಗೃತ ಆಯೋಗ(ಸಿವಿಸಿ)ವು ಕೆಲವು ಪ್ರಮುಖ ಸಿಬಿಐ ಅಧಿಕಾರಿಗಳ ಅಧಿಕಾರಾವಧಿ ವಿಸ್ತರಣೆಗೆ ಹಸಿರು ನಿಶಾನೆಯನ್ನು ತೋರಿಸಿದೆ. ಇವರ ಪೈಕಿ ಅಸ್ಥಾನಾರ ತಂಡದ ಸದಸ್ಯರಾಗಿ ಕೆಲವು ಪ್ರಮುಖ ಪ್ರಕರಣಗಳನ್ನು ನಿರ್ವಹಿಸಿದ್ದ ಅಧಿಕಾರಿಗಳೂ ಸೇರಿದ್ದಾರೆ.

ಕೇಂದ್ರ ಜಾಗೃತ ಆಯುಕ್ತ ಕೆ.ವಿ.ಚೌಧರಿ ನೇತೃತ್ವದ ಸಮಿತಿಯಿಂದ ಅಧಿಕಾರಾವಧಿ ವಿಸ್ತರಣೆಗೊಂಡಿರುವವರಲ್ಲಿ ಇತ್ತೀಚಿಗೆ ತನ್ನ ಕೇಡರ್ ರಾಜ್ಯ ತ್ರಿಪುರಾಕ್ಕೆ ಮರು ನಿಯೋಜಿಸಲ್ಪಟ್ಟಿದ್ದ, ಆದರೆ ಶೀಘ್ರವೇ ವಾಪಸ್ ಕರೆಸಿಕೊಳ್ಳಲಾಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಅನಿಷ್ ಪ್ರಸಾದ್ ಅವರೂ ಸೇರಿದ್ದಾರೆ. ಉದ್ಯಮಿ ವಿಜಯ ಮಲ್ಯ ಪ್ರಕರಣ ಸೇರಿದಂತೆ ಪ್ರಮುಖ ಪ್ರಕರಣಗಳ ತನಿಖೆಯಲ್ಲಿ ಅಸ್ಥಾನಾ ಜೊತೆ ನಿಕಟವಾಗಿ ಕಾರ್ಯಾಚರಿಸಿದ್ದ ಇತರ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ಪ್ರಭಾರ ಅವಧಿಯನ್ನೂ ಸಮಿತಿಯು ವಿಸ್ತರಿಸಿದೆ.

ಗುಜರಾತ್ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ವರ್ಮಾ ಅವರ ಅನುಪಸ್ಥಿತಿಯಲ್ಲಿ ಅಸ್ಥಾನಾ ಅವರು ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಸಿಬಿಐ ಸಿವಿಸಿಗೆ ಪತ್ರ ಬರೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆಗಳು ನಡೆದಿವೆ.

ಸಿಬಿಐ ನಿರ್ದೇಶಕರು ಸಮಿತಿಗೆ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ. ಸಿವಿಸಿಯಿಂದ ಅಧಿಕಾರಾವಧಿ ವಿಸ್ತರಣೆ ಪಡೆದವರಲ್ಲಿ ಜಂಟಿ ನಿರ್ದೇಶಕರಾದ ಎವೈವಿ ಕೃಷ್ಣ ಮತ್ತು ಸಾಯಿ ಮನೋಹರ ಅರ್ಮಾನೆ ಅವರೂ ಸೇರಿದ್ದಾರೆ.

ಅರ್ಮಾನೆ ಅವರು ವಿಜಯ ಮಲ್ಯ ಆರೋಪಿಯಾಗಿರುವ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಥಾನಾ ನೇತೃತ್ವದ ವಿಶೇಷ ತನಿಖಾ ತಂಡದ ಭಾಗವಾಗಿದ್ದಾರೆ.

ಇನ್ನೋರ್ವ ಜಂಟಿ ನಿರ್ದೇಶಕ ಮನೀಷ ಕಿಶೋರ ಸಿನ್ಹಾ ಅವರೂ ಅಧಿಕಾರಾವಧಿಯ ವಿಸ್ತರಣೆಯನ್ನು ಪಡೆದಿದ್ದಾರೆ.

ಕಲ್ಲಿದ್ದಲು ಗಣಿ ಹಗರಣದ ತನಿಖೆ ನಡೆಸುತ್ತಿರುವ ಐಪಿಎಸ್ ಅಧಿಕಾರಿ ಪ್ರೇಮಕುಮಾರ ಗೌತಮ ಅವರ ಅಧಿಕಾರಾವಧಿಯನ್ನೂ ವಿಸ್ತರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X