Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಕಟ್ಟ ಜಂಕ್ಷನನ್ನು ಸುಸಜ್ಜಿತವಾಗಿ...

ಕಲ್ಕಟ್ಟ ಜಂಕ್ಷನನ್ನು ಸುಸಜ್ಜಿತವಾಗಿ ರೂಪಿಸಲಾಗುವುದು: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ22 July 2018 8:47 PM IST
share
ಕಲ್ಕಟ್ಟ ಜಂಕ್ಷನನ್ನು ಸುಸಜ್ಜಿತವಾಗಿ ರೂಪಿಸಲಾಗುವುದು: ಸಚಿವ ಖಾದರ್

ಉಳ್ಳಾಲ, ಜು. 22: ಕಲ್ಕಟ್ಟ ಜಂಕ್ಷನನ್ನು ಸುಸಜ್ಜಿತವಾಗಿ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ರೂಪಿಸಲಾಗುವುದು, ವಿಶೇಷ ಅನುದಾನ ಮಂಜೂರುಗೊಳಿಸಿದ ತಕ್ಷಣವೇ ಜಂಕ್ಷನ್ನಿನ ಚಿತ್ರಣ ಬದಲಾವಣೆಯಾಗಲಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಅವರು ಕಲ್ಕಟ್ಟದ ಎಸ್ಸೆಸ್ಸೆಫ್ ಮತ್ತು ತಕ್ವತುಲ್ ಇಸ್ಲಾಂ ಯಂಗ್‌ಮೇನ್ಸ್ ಅಸೋಶಿಯೆಷನ್ ಇವರು ಮಂಜನಾಡಿ ಗ್ರಾಮದ ಕಲ್ಕಟ್ಟದಲ್ಲಿ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣ ಉದ್ಘಾಟಿಸಿ ಮಾತನಾಡಿದರು.

ಎಸ್ಸೆಸ್ಸೆಫ್ ಸಂಘಟನೆ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕವಾಗಿ ತೊಡಗಿಸಿಕೊಂಡು ಪ್ರವಾದಿಯವರ ಸದ್ಗುಣಗಳ ಅಳವಡಿಸಿಕೊಂಡು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದೆ. ಇದೀಗ ಎಲ್ಲಾ ಧರ್ಮದ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಬಸ್ಸು ನಿಲ್ದಾಣದ ವ್ಯವಸ್ಥೆಯನ್ನು ಕಲ್ಪಿಸುವ ಮುಖೇನ ವಿವಿಧ ಸಂಘಟನೆಗಳಿಗೆ ಆದರ್ಶವಾಗಿ ನಿಂತಿದೆ. ಕಲ್ಕಟ್ಟ ಪ್ರದೇಶ ಮಂಜನಾಡಿ ಗ್ರಾಮದ ಕೇಂದ್ರ ಭಾಗವಾಗಿದೆ. ಮಂಗಳಾಂತಿ ಎರಡು ಕಣ್ಣುಗಳಾಗಿ ಪರಿವರ್ತನೆಯಾಗಿದೆ. ಪ್ರದೇಶದ ದೇವಸ್ಥಾನ ಮತ್ತು ಮಸೀದಿಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಎಲ್ಲಾ ಧರ್ಮದವರು ಸೇರಿಕೊಂಡು ನಡೆಸುತ್ತಾ ಬರುವುದು ಗ್ರಾಮದ ಜನರ ಸಹೋದರತೆಗೆ ಸಾಕ್ಷಿಯಾಗಿದೆ. ಕಲ್ಕಟ್ಟ ಜಂಕ್ಷನ್ನಿನ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡುವುದು ಹಾಗೂ ಹೈಮಾಸ್ಕ್ ಬೆಳಕು, ಚರಂಡಿ ವ್ಯವಸ್ಥೆ, ಇಂಟರ್‌ಲಾಕ್ ಅಳವಡಿಸಿ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದರು.

ಇಲ್ಯಾಸ್ ಜುಮಾ ಮಸೀದಿ ಅಧ್ಯಕ್ಷ ಇಝ್ಝುದ್ದೀನ್ ಅಹ್ಸನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇಲ್ಯಾಸ್ ಜುಮಾ ಮಸೀದಿ ಅಧ್ಯಕ್ಷ ಪಿ.ಐ ಮನ್ಸೂರು ರಕ್ಷಿದಿ, ಮಂಜನಾಡಿ ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಅಡಳಿತ ಮುಖ್ಯಸ್ಥ ರಾಮ್ ಮೋಹನ್ ಆಳ್ವ ತೆವುನಾಡು ಗುತ್ತು, ಪಾನೀರ್ ದಯಮಾತೆ ಇಗರ್ಜಿಯ ಧರ್ಮಗುರು ಫಾ.ಡೆನಿಸ್ ಸುವಾರಿಸ್, ಅಲ್ಪಸಂಖ್ಯಾತ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹಾಜಿ ಎನ್.ಎಸ್ ಕರೀಂ, ವಕ್ಫ್ ಸಲಹಾ ಸಮಿತಿ ದ.ಕ ಉಪಾಧ್ಯಕ್ಷ ಅಹ್ಮದ್ ಬಾವಾ, ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಅಸೈ, ಇಲ್ಯಾಸ್ ಜುಮಾ ಮಸೀದಿ ಉಪಾಧ್ಯಕ್ಷರುಗಳಾದ ಹಾಜಿ ಎ.ಎಂ ಕುಂಞ ಬಾವಾ, ಮುಹಮ್ಮದ್ ಅಶ್ರಫ್ ಕಟ್ಟೆ, ಕಾರ್ಯದರ್ಶಿ ಬಶೀರ್, ಮಂಜನಾಡಿ ಗ್ರಾ.ಪಂ ಸದಸ್ಯ ಕೆ.ಪಿ ಅಶ್ರಫ್ , ಅಬ್ದುಲ್ ಖಾದರ್, ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ, ಎಸ್‌ವೈಎಸ್ ಕಲ್ಕಟ್ಟ ಶಾಖೆಯ ಅಧ್ಯಕ್ಷ ಮೋನು, ಪ್ರ.ಕಾರ್ಯದರ್ಶಿ ಇಬ್ರಾಹೀಂ ಮದನಿ, ಕೋಶಾಧಿಕಾರಿ ನಾಸೀರ್, ಎಸ್ಸೆಸ್ಸೆಫ್ ಕಲ್ಕಟ್ಟ ಘಟಕದ ಅಧ್ಯಕ್ಷ ಕೆ.ಎಂ ಮುಹಮ್ಮದ್ ಶರೀಫ್, ಕಾರ್ಯದರ್ಶಿ ಬದ್ರುಲ್ ಮುನೀರ್ ತಟ್ಲ ಮುಂತಾದವರು ಉಪಸ್ಥಿತರಿದರು.

ಈ ಸಂದರ್ಭ ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾಗಿ ಅಯ್ಕೆಯಾದ ಯು.ಟಿ ಖಾದರ್‌ರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಫ್ ರಾಜ್ಯ ಮುಖಂಡ ಅಬ್ದುರ್ರಹ್ಮಾನ್ ಮುಸ್ಲಿಯಾರ್ ರಝ್ವಿ ಸ್ವಾಗತಿಸಿದರು.ಮುಹಮ್ಮದ್ ಮಾಸ್ಟರ್ ಕಲ್ಕಟ್ಟ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X