Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳನ್ನು ಕೇವಲ ಪಠ್ಯಗಳಿಗೆ...

ಮಕ್ಕಳನ್ನು ಕೇವಲ ಪಠ್ಯಗಳಿಗೆ ಸೀಮಿತಗೊಳಿಸುವ ಪ್ರಯತ್ನ ಅಪಾಯಕಾರಿ: ಕವಿ ದುಂಡಿರಾಜ್

ವಾರ್ತಾಭಾರತಿವಾರ್ತಾಭಾರತಿ22 July 2018 8:57 PM IST
share
ಮಕ್ಕಳನ್ನು ಕೇವಲ ಪಠ್ಯಗಳಿಗೆ ಸೀಮಿತಗೊಳಿಸುವ ಪ್ರಯತ್ನ ಅಪಾಯಕಾರಿ: ಕವಿ ದುಂಡಿರಾಜ್

ಬೆಂಗಳೂರು, ಜು. 22: ಪೋಷಕರು ಮಕ್ಕಳು ಭವಿಷ್ಯ ಹಾಳು ಮಾಡಿಕೊಳ್ಳುತ್ತಾರೆ ಎಂಬ ದೃಷ್ಟಿಯಿಂದ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿಲ್ಲ ಎಂದು ಹಾಸ್ಯ ಕವಿ ದುಂಡಿರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ವಾಡಿಯಾ ಸಭಾಂಗಣದಲ್ಲಿ ಅನುಪಮಾ ಮಂಗಳವೇಧಿ ಅವರ ಅನುಪಮ ಕಥನ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಪೋಷಕರು ಮಕ್ಕಳಿಗೆ ಸಾಂಸ್ಕೃತಿಕವಾಗಿ ಬೆಳೆಯಲು ಅಪಾರವಾದ ಪ್ರೋತ್ಸಾಹ ನೀಡುತ್ತಿದ್ದರು. ನಾಟಕ, ನೃತ್ಯ, ಹಾಡು, ಕುಣಿತ ಎಲ್ಲದಕ್ಕೂ ಸಹಕಾರ ನೀಡುತ್ತಿದ್ದರು ಎಂದು ಹೇಳಿದರು. 

ಹಿಂದಿನ ದಿನಗಳಲ್ಲಿ ಪೋಷಕರು ನಮ್ಮ ಮಕ್ಕಳು ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅಥವಾ ಸರ್.ಎಂ.ವಿಶ್ವೇಶ್ವರಯ್ಯ ರೀತಿಯಲ್ಲಿ ಬೆಳೆಯಬೇಕು ಎಂದು ಆಶಿಸುತ್ತಿದ್ದರು. ಆದರೆ, ಇಂದಿನ ಪೋಷಕರು ನಮ್ಮ ಮಕ್ಕಳು ಡಾಕ್ಟರ್, ಎಂಜಿನಿಯರ್ ಆಗಬೇಕು ಎನ್ನುತ್ತಿದ್ದಾರೆ. ಕೇವಲ ಪಠ್ಯಗಳಿಗೆ ಸೀಮಿತಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ದುಂಡಿರಾಜ್ ತಿಳಿಸಿದರು.

ಅಮೆರಿಕಾ ಸೇರಿದಂತೆ ಹೊರ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೆ ಮಾತೃಭಾಷೆ ಬಗ್ಗೆ ಅಪಾರವಾದ ಪ್ರೀತಿಯಿರುತ್ತದೆ. ಕರ್ನಾಟಕದಲ್ಲಿ ಮೂರು-ನಾಲ್ಕು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಿಂತ, ಹೊರ ದೇಶದಲ್ಲಿ ಒಂದು ಕನ್ನಡದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅತ್ಯಂತ ಹೆಚ್ಚು ಆನಂದ, ಸಂತೋಷವನ್ನು ಪಡುತ್ತಾರೆ. ಆ ನಿಟ್ಟಿನಲ್ಲಿ ಅನುಪಮಾ ಅವರದ್ದು, ಧಾರಾಳವಾದ ಪ್ರೀತಿಯುಳ್ಳ ಸಂಬಂಧವಾಗಿದೆ. ಆಧುನೀಕರಣ ವಿನ್ಯಾಸದ ಮೂಲಕ ಅತ್ಯುತ್ತಮವಾಗಿ ಪುಸ್ತಕ ಮೂಡಿಬಂದಿದ್ದು, ಅನುಪಮಾ ಅವರ ಜೀವನದ ಚಿತ್ರಣವನ್ನು ಬಿಚ್ಚಿಡಲಾಗಿದೆ ಎಂದು ಅವರು ನುಡಿದರು.

ನೃತ್ಯ ವಿದೂಶಕಿ ಡಾ.ಬಿ.ಎನ್.ಮನೋರಮಾ ಮಾತನಾಡಿ, ಮೂಲತಃ ಲೇಖಕಿಯಲ್ಲದಿದ್ದರೂ, ಅದ್ಭುತವಾದ ಲೇಖನಗಳನ್ನು ಅನುಪಮಾ ಬರೆದಿದ್ದಾರೆ. ಧ್ಯಾನವಿಟ್ಟು ಓದಿದರೆ, ಮನುಷ್ಯನ ಮನೋಬಲ ಮತ್ತು ಸಂಕಲ್ಪ ಶಕ್ತಿಗಳ ಸರಳ ನಿರೂಪಣೆ ಕೃತಿಯಲ್ಲಿದೆ. ಶ್ರದ್ಧೆ, ಪರಿಶ್ರಮಗಳಿದ್ದರೆ ಯಾರು ಬೇಕಾದರೂ ಸಾಧಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ. ಪ್ರಾಮಾಣಿಕತೆಯ ಬಗ್ಗೆಯೂ ಕೃತಿಯಲ್ಲಿ ವಿವರಿಸಿದ್ದಾರೆ ಎಂದು ಹೇಳಿದರು.

ಅನುಪಮಾಳ ಮನಸ್ಸು ಅಸಾಧ್ಯವನ್ನು ಸಾಧ್ಯವಾಗಿಸುವುದರ ಬಗ್ಗೆ ಚಿಂತಿಸುತ್ತದೆ. ತನ್ನನ್ನು ತಾನು ನಂಬಬೇಕು ಎಂದು ದೃಢೀಕರಿಸುವ ವಿಷಯಗಳನ್ನು ಕೃತಿಯಲ್ಲಿದೆ. ಅಲ್ಲದೆ, ಮನುಷ್ಯನ ಪ್ರೀತಿ, ಸಂಬಂಧಗಳನ್ನು ಹಾಗೂ ವಿಶ್ವಾಸವನ್ನು ಅನುಪಮಾಳ ಮನಸ್ಥಿತಿ ಯಾವ ರೀತಿಯಲ್ಲಿ ಅರ್ಥೈಸಿಕೊಂಡಿದೆ ಎಂಬುದನ್ನು ಪುಸ್ತಕ ಪರಿಚಯಿಸುತ್ತದೆ ಎಂದು ಅವರು ತಿಳಿಸಿದರು.

ಇಂದಿನ ದಿನಗಳಲ್ಲಿ ಶ್ರೀಮಂತರು ಮಾಡುವ ಸಾಧನೆಗಳು ಮಾತ್ರ ಹೊರಗಿನ ಸಮಾಜಕ್ಕೆ ತಿಳಿಯುತ್ತಿದೆ. ಆದರೆ, ತಳಮಟ್ಟದ, ಮಧ್ಯಮ ವರ್ಗದವರು ಮಾಡುವ ಸಾಧನೆಗಳು ಯಾರೂ ಗುರುತಿಸುತ್ತಿಲ್ಲ ಎಂದ ಅವರು, ವೃತ್ತಿ ಕಲಾವಿದೆಯಾಗಿ ಅಲ್ಲದಿದ್ದರೂ ತಮ್ಮ ಬದುಕಿನ ಪ್ರತಿಯೊಂದು ಸಂಗತಿಯನ್ನು ಅನುಭವಿಸಿ ಸಂಕೋಚವಿಲ್ಲದೆ ಕೃತಿಯಲ್ಲಿ ನಿರೂಪಿಸಿದ್ದಾರೆ. ಅದರಲ್ಲಿ ಯಾರನ್ನೂ ನಿಂದಿಸುವ ಅಥವಾ ಅವಹೇಳನ ಮಾಡುವ ವಿಚಾರಗಳಿಲ್ಲ ಎಂದು ಮನೋರಮಾ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್, ಲೇಖಕಿ ಅನುಪಮಾ ಹಾಗೂ ಶ್ರೀವತ್ಸ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X